ನೀವು ತಿಂದು ಕಾಂಗ್ರೆಸ್ ಮೂತಿಗೆ ಒರೆಸುವ ಪ್ರಯತ್ನ ಮಾಡಬೇಡಿ ಎಂದು ಆಡಳಿತ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿರುವ ಹಗರಣಗಳ ಆರೋಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರ ಮಗ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪುಸ್ತಕ ಬಿಡುಗಡೆಗೆ ತಡೆ ನೀಡಬೇಕೆಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಪುಸ್ತಕ ಬಿಡುಗಡೆ, ಪ್ರಸಾರ, ಪುಸ್ತಕ ಸಂಬಂಧಿಸಿದಂತೆ ಪುಸ್ತಕ ಬಿಡುಗಡೆಗೆ ತಡೆ ನೀಡಿದೆ.
ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಪಣ ತೊಟ್ಟಿದ್ದಾರೆ. ಇತ್ತೀಚಿಗೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಿದ ಬೆನ್ನಲಿ ಬಿಜೆಪಿಯಲ್ಲಿ ಭಾರಿ ಬದಲಾವಣೆಯಾಗಿದೆ. ಹೇಗೆಂದರೆ, ಹೈ ಕಮಾಂಡ್ ಸೂಚನೆ ಪ್ರಕಾರ ಬಿಜೆಪಿ ಕಾರ್ಯಕರ್ತರ ಅಲರ್ಟ್ ಆಗಿದ್ದಾರೆ.
ನಗರದ ಸಪ್ತಗಿರಿ ಬಡಾವಣೆ ಮೂಲದ ಟಿ.ಎನ್ ಪ್ರಸಾದ್ ಎಂಬುವ ಕಂಟ್ರಾಕ್ಟರ್ ಒಬ್ಬರು ತುಮಕೂರಿನ ದೇವರಾಯನ ದುರ್ಗದ ಗೆಸ್ಟ್ ಹೌಸ್ ನಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಚಿವ ಸಂಪುಟ ವಿಸ್ತರಣೆ, ಮೀಸಲಾತಿ ಮರು ಹಂಚಿಕೆಗೆ ಕೇಂದ್ರದ ಅನುಮತಿ ಪಡೆಯಲು. ಅಲ್ಲದೆ, ನೆನಗುದಿಗೆ ಬಿದ್ದಿರುವ ವಿವಿಧ ಯೋಜನಗಳಿಗೆ ಅನುಮೋದನೆ ಮತ್ತು ಅನುದಾನ ಬಿಡುಗಡೆಗೆ ಮನವಿ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಚಿವ ಸ್ಥಾನ ಸಿಗಲಿ ಬಿಡಲಿ, ನನಗೆ ಪಕ್ಷ ಸಂಘಟನೆ ಮುಖ್ಯ. ಇದರಿಂದ ಬೆಳಗಾವಿ ಗ್ರಾಮೀಣದಿಂದ ಪ್ರಾರಂಭ ಮಾಡಲಾಗಿದೆ. ಜನಸಾಮಾನ್ಯರ ಪ್ರಾಮಾಣಿಕ ಕೆಲವನ್ನು ಮಾಡಬೇಕು. ಹಣದಿಂದ ಚುನಾವಣೆಯಲ್ಲಿ ಆಯ್ಕೆ ಆಗುತ್ತೇನೆ ಎಂದರೆ ಆಗುವುದಿಲ್ಲ.
ನಾನು ದರ್ಗಾ ವೀಕ್ಷಿಣೆ ಮಾಡಲು ಬಂದಿದ್ದೇನೆ..ದರ್ಗಾ ಶಿಪ್ಟ್ ಮಾಡೋ ಕಾರ್ಯಚಾರಣೆ ವೀಕ್ಷಿಸಲು ಬಂದಿದ್ದೇ. ದರ್ಗಾದ ಮುಖ್ಯಸ್ಥರು ದರ್ಗಾ ಶಿಫ್ಟ್ ಮಾಡೋದಕ್ಕೆ ಸಹಕಾರಿಸಿದ್ದಾರೆ. ನಾನು ಅವರಿಗೆ ಧನ್ಯವಾದ ಹೇಳ್ತೀನಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನನ್ನ ರಾಜಕೀಯ ಜೀವನದ ಬಗ್ಗೆ ಡಿ.25 ರಂದು ಗೊತ್ತಾಗುತ್ತೆ. ಈಗಾಗಲೇ ನಾನು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದೆನೆ. ಅಂದೇ ಎಲ್ಲವನ್ನ ಹೇಳುತ್ತೇನೆ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿದ್ದಾರೆ.
ಚಳಿಗಾಲ ಅಧಿವೇಶನದ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಜಾನುವಾರಿನ ಗಂಟು ರೋಗ ವಿಚಾರವಾಗಿ ಪಶು ಸಂಗೋಪನೆ ಇಲಾಖೆ ಕಾರ್ಯನಿರ್ವಾಹಣೆ ಬಗ್ಗೆ ಪ್ರಶ್ನೆ ಮಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪಶು ಸಂಗೋಪನ ಸಚಿವರನ್ನ ಇಕ್ಕಟಿಕೆ ಸಿಲುಕಿಸಿದರು.
ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಸಾವರ್ಕರ್ ಭಾವಚಿತ್ರ ವಿಧಾನಸಭೆಯಲ್ಲಿ ಅಳವಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಾವರ್ಕರ್ ವಿವಾದಾತ್ಮಕ ವ್ಯಕ್ತಿ, ಮಾಹಾತ್ಮಾ ಗಾಂಧಿ ಹತ್ಯೆಯಲ್ಲಿ ಇವರು ಇದ್ದರು ಎಂದು ಹೇಳಿದರು.
ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸದನದ ಪ್ರಾರಂಭದಲ್ಲೇ ಕೇಸರಿ ಕಲಿಗಳ ಮೇಗಾ ಪ್ಲಾನ್ ಗೆ ಕದನ ಶುರುವಾಗುವ ಎಲ್ಲಾ ಸಾಧ್ಯತೆಗಳಿವೆ. ಸರ್ಕಾರದ ವಿರುದ್ಧ ಭಾರಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದ ಕೈ ಪಡೆಗೆ, ಬಿಜೆಪಿ ಕೇಸರಿ ಕದನಕ್ಕೆ ವೇದಿಕೆ ಸಿದ್ದ ಮಾಡಿದೆ. ಆ ಮೂಲಕ ಚುನಾವಣಾ ಹೊತ್ತಿನಲ್ಲಿ ಕೇಸರಿ ಕಹಳೆ ಮೊಳಗಿಸಲು ಸರ್ಕಾರ ಅಧಿಕೃತವಾಗಿ ಸಜ್ಜಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.