ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸದನದ ಪ್ರಾರಂಭದಲ್ಲೇ ಕೇಸರಿ ಕಲಿಗಳ ಮೇಗಾ ಪ್ಲಾನ್ ಗೆ ಕದನ ಶುರುವಾಗುವ ಎಲ್ಲಾ ಸಾಧ್ಯತೆಗಳಿವೆ. ಸರ್ಕಾರದ ವಿರುದ್ಧ ಭಾರಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದ ಕೈ ಪಡೆಗೆ, ಬಿಜೆಪಿ ಕೇಸರಿ ಕದನಕ್ಕೆ ವೇದಿಕೆ ಸಿದ್ದ ಮಾಡಿದೆ. ಆ ಮೂಲಕ ಚುನಾವಣಾ ಹೊತ್ತಿನಲ್ಲಿ ಕೇಸರಿ ಕಹಳೆ ಮೊಳಗಿಸಲು ಸರ್ಕಾರ ಅಧಿಕೃತವಾಗಿ ಸಜ್ಜಾಗಿದೆ.
ನನ್ನನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡಿಲ್ಲ. ಬಿಜೆಪಿ ಕಟ್ಟಿ ಬೆಳಸಿದ ಪ್ರಮುಖ ವ್ಯಕ್ತಿಗಳಲ್ಲಿ ನಾನೂ ಒಬ್ಬ. ನನ್ನ ಕಡೆಗಣನೆ ಮಾಡಿದ್ದಾರೆ ಎನ್ನುವ ವಿಷಯಕ್ಕೆ ಅರ್ಥ ಇಲ್ಲ ಎಂದು ಕೊಪ್ಪಳದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ರಾಷ್ಟ್ರದ ಭದ್ರತೆ ಪ್ರಶ್ನೆ ಬಂದಾಗ ಏಕತೆಯ ಪ್ರದರ್ಶನ ಮಾಡಬೇಕು. ದೇಶದ ಗಡಿಯಲ್ಲಿ ಯೋಧರು ಪ್ರಾಣದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದಾರೆ. ಟೆರರಿಸ್ಟ್ ಆದಾಗ ಬಹಳ ಅನುಕಂಪದಿಂದ ಮಾತಾಡಬಾರದು. ಬಾಂಬ್ ಬ್ಲಾಸ್ಟ್ ಆದಾಗ ಪಕ್ಷತೀತವಾಗಿ ಒಟ್ಟಾಗಿ ನಿಲ್ಲಬೇಕು. ಅವನ್ಯಾವನೋ ಟೆರರಿಸ್ಟ್ ಮೇಲೆ ಯಾಕೆ ಇಷ್ಟೊಂದು ಪ್ರೀತಿ? ಎಂದು ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಲ್ಪಸಂಖ್ಯಾತರ ಓಟ್ ಗಾಗಿ ಡಿಕೆಶಿಯಿಂದ ಓಲೈಕೆ ರಾಜಕಾರಣ ಮಾಡುವ ಮೂಲಕ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ಭಯೋತ್ಪಾದಕ ಚಟುವಟಿಕೆ ಎಂದು ಸರ್ಕಾರ ಹೇಳಿರುವುದು ಮತದಾರರ ಮಾಹಿತಿ ಕಳ್ಳತನ, ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್ ಮಾಡವ ಪ್ರಯತ್ನ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು.
Dynastic politics: ಈಗ ಅಧಿಕಾರವಿಲ್ಲದೇ ರಾಜಸ್ಥಾನದ ಹೊರತಾಗಿ ನೀರಿನಿಂದ ಹೊರತೆಗೆದ ಮೀನಿನಂತಾಗಿರುವ ಕಾಂಗ್ರೆಸ್ ಸಂಪತ್ಭರಿತವಾಗಿರುವ ನಮ್ಮ ರಾಜ್ಯವನ್ನು ತಮ್ಮ ನಾಯಕರ ತಿಜೋರಿಗಳನ್ನು ತುಂಬಿಸಿಕೊಳ್ಳಲು ಎಟಿಎಂನಂತೆ ಬಳಸಿಕೊಳ್ಳಲು ತುದಿಗಾಲಲ್ಲಿ ನಿಂತಿದೆ ಎಂದು ಬಿಜೆಪಿ ಟೀಕಿಸಿದೆ.
ರಾಜ್ಯದಲ್ಲಿ ಬಾಲ್ಯವಿವಾಹ ತಡೆಗಟ್ಟಲು ಇರುವ ಕಠಿಣ ಕ್ರಮಗಳಂತೆಯೇ, ದೇವದಾಸಿ ಪದ್ದತಿಯ ಆಚರಣೆಯನ್ನು ತಡೆಗಟ್ಟಲು ಇರುವ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನದ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಹಾಲಪ್ಪ ಆಚಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು : ಕಳೆದೆರಡು ವರ್ಷಗಳಿಂದ ಬಿಬಿಎಂಪಿ ಚುನಾವಣೆಗೆ ಅಡ್ಡಗಾಲು ಹಾಕುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿರುವ ರಾಜ್ಯ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಉಪವಾಸ ಕುಳಿತ ಪಕ್ಷದ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದ ಯಾವುದೇ ಪ್ರದೇಶ ಮಹಾರಾಷ್ಟ್ರಕ್ಕೆ ಹೋಗಲ್ಲ. ಈ ಬಗ್ಗೆ 2004 ರಲ್ಲಿ ಮಹಾರಾಷ್ಟ್ರ ದಾವೆ ಹೂಡಿದೆ. ಇದಕ್ಕೆ ಮೆಂಟೇನ್ ಎಬಿಲಿಟಿ ಇಲ್ಲ. ಅದಕ್ಕಾಗಿ ಮುಕುಲ್ ರೋಹ್ಟಗಿ ಯಂತ ಸೀನಿಯರ್ ಅಡ್ವೋಕೇಟ್ ಗಳನ್ನು ನೇಮಿಸಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.