“ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪ್ರತಿ ತಿಂಗಳು ಉಚಿತವಾಗಿ 5 ಕೆಜಿ ಅಕ್ಕಿಯನ್ನು ನೀಡುತ್ತಿರುವ ಸತ್ಯವನ್ನು ಬಹಿರಂಗವಾಗಿ ಒಪ್ಪಿಕೊಳ್ಳಲು ಸಿದ್ದರಾಮಯ್ಯನವರ ATM ಸರ್ಕಾರಕ್ಕೆ ಇಷ್ಟು ದಿನ ಬೇಕಾಯಿತು” ಎಂದು ಗುಡುಗಿದ್ದಾರೆ
2 ದಿನಗಳಲ್ಲಿ ಬಿಜೆಪಿ ವಿಪಕ್ಷ ನಾಯಕನ ಘೋಷಣೆ ಸಾಧ್ಯತೆ ವಿಪಕ್ಷ ನಾಯಕನ ರೇಸ್ನಲ್ಲಿ ಮೂವರು ನಾಯಕರ ಹೆಸರು ಇಬ್ಬರು ಲಿಂಗಾಯತ, ಒಬ್ರು ಒಕ್ಕಲಿಗ ಸಮುದಾಯದವ್ರು ಬಿಎಲ್ ಸಂತೋಷ್ ಪಡೆಯಿಂದ ಓರ್ವರು ಮುಂಚೂಣಿ BSY ತಂಡದಿಂದಲೂ ಓರ್ವ ಲಿಂಗಾಯತ ನಾಯಕ ಪೈಪೋಟಿ ಯತ್ನಾಳ್ ಪರವಾಗಿ ಬಿಎಲ್ ಸಂತೋಷ್ ಬ್ಯಾಟಿಂಗ್
ಸರ್ಕಾರ ಜುಲೈ 3 ರಿಂದ ಜಂಟಿ ಅಧಿವೇಶನ ಕರೆದಿದ್ದು, ಈವರೆಗೆ ವಿಪಕ್ಷ ನಾಯಕ ಸ್ಥಾನ ಯಾರಿಗೂ ಬಿಜೆಪಿ ನೀಡಿಲ್ಲ. ಖಾಲಿ ಇರುವ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜ್ಯದ ಎರಡು ಪ್ರಬಲ ಸಮುಧಾಯದ ಮೂರು ನಾಯಕರು ಪೈಪೋಟಿಗೆ ಇಳಿದಿದ್ದಾರೆ.
Congress Vs BJP: ತರಕಾರಿ, ಬೇಳೆ ಸೇರಿದಂತೆ ದಿನಸಿ ಬೆಲೆ ಕೇಳಿ ಜನರು ಮೂರ್ಛೆ ಹೋಗುವಂತಾಗಿದೆ. ಮಳೆ ಇಲ್ಲದೆ ರೈತರು ಕಂಗಾಲಾಗಿ ಕೂತಿರುವುದರಿಂದ ಬೆಲೆ ಗಗನಕ್ಕೆ ಏರುತ್ತಿದೆ. ಗ್ರಾಹಕರ ಕಣ್ಣಲ್ಲಿ ನೀರು ಬರುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜಕೀಯ ಕಾರಣಕ್ಕಾಗಿ ಪೂರ್ವಾಗ್ರಹಪೀಡಿತರಾಗಿ ಕೊಟ್ಟಿರುವ ಪಠ್ಯ ಪರಿಷ್ಕರಣೆ ಕುರಿತ ಹೇಳಿಕೆ ಅಸಹಿಷ್ಣು ಭಾವನೆಯಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಟೀಕಿಸಿದರು.
ಬಿಜೆಪಿ 13 ಹಾಲಿ ಸಂಸದರಿಗಿಲ್ಲ ಲೋಕಸಭೆ ಟಿಕೆಟ್..? ಅಸಮಾಧಾನ ಹೊರ ಹಾಕಿದ ಬಿಜೆಪಿಯ ನಾಯಕರು ಇಂತಹ ತೀರ್ಮಾನದಿಂದ ಪಕ್ಷಕ್ಕೆ ಹಿನ್ನಡೆ ಎಂದು ಕಿಡಿ ಬಹಿರಂಗವಾಗಿಯೇ ವಿಷಾದ ವ್ಯಕ್ತಪಡಿಸಿದ ನಾಯಕರು
ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಸೋತ ಹಾಗೂ ಗೆದ್ದ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ನೂತನವಾಗಿ ಚುನಾಯಿತರಾದ ಬಿಜೆಪಿ ಶಾಸಕರ ಸಭೆ, ನಂತರ ಮಧ್ಯಾಹ್ನ 3.00 ಗಂಟೆಗೆ ಎಲ್ಲಾ ಸೋತ ಅಭ್ಯರ್ಥಿಗಳ ಸಭೆ ನಡೆಯಲಿದೆ. ಇದಾದ ಬಳಿಕ ಸಂಜೆ 6ಕ್ಕೆ ಕೋರ್ ಕಮಿಟಿ ಸಭೆ ನಡೆಯಲಿದೆ.
CM Siddaramaiah: ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
Congress VS BJP: ಇನ್ನು ವಿದ್ಯುತ್ ದರ ಏರಿಕೆ ವಿಚಾರವಾಗಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ‘ಬಿಜೆಪಿಯಂತಹ ಬಂಡತನದ ರಾಜಕೀಯ ಪಕ್ಷ ಬೇರೊಂದಿಲ್ಲ! ಎಂದು ಆಕ್ರೋಶ ವ್ಯಕ್ತಪಡಿಸಿದೆ.
Congress Guarantee Schemes: ಯಾವ ನಿಲುವು ತಾಳಬೇಕು, ಹೇಗೆ ವಿರೋಧಿಸಬೇಕು ಎಂದು ಗೊಂದಲದಲ್ಲಿದೆ ಬಿಜೆಪಿ. ಕನಿಷ್ಠ ಸ್ಪಷ್ಟವಾಗಿ ವಿರೋಧಿಸಲಾದರೂ ಒಬ್ಬ ನಾಯಕನನ್ನು ಆಯ್ಕೆ ಮಾಡಿಕೊಳ್ಳಿ ಬಿಜೆಪಿ ಎಂದು ಕಾಂಗ್ರೆಸ್ ಟೀಕಿಸಿದೆ.
ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳು ರಾಜ್ಯದ ವಾತಾವರಣವನ್ನು ಹಾಳುಮಾಡುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ದ್ವೇಷಪೂರಿತ’ ಎಂಬ ಲೇಬಲ್ ಹಚ್ಚಿ ಕನ್ನಡಿಗರ ಧ್ವನಿಯನ್ನು ದಮನಿಸುವ ತಮ್ಮ ಕುತಂತ್ರ ಎಂದೂ ಸಫಲವಾಗದು. ಕನ್ನಡಿಗರ ಅಭಿವ್ಯಕ್ತಿ ಸ್ವಾತಂತ್ರಕ್ಕೆ ಧಕ್ಕೆ ತರುವ ಯಾವುದೇ ನೀತಿಗಳ ವಿರುದ್ಧ ಬಿಜೆಪಿ ಹೋರಾಟ ಕೈಗೊಳ್ಳಲಿದೆ ಎಂದು ಬಿಜೆಪಿ ಕುಟುಕಿದೆ.
#SidduVsDKSVsCong ಹ್ಯಾಶ್ಟ್ಯಾಗ್ ಬಳಸಿ ಮತ್ತೊಂದು ಟ್ವೀಟ್ ಮಾಡಿರುವ ಬಿಜೆಪಿ, ‘ಸಿಎಂ ಆಯ್ಕೆಯ ಕಸರತ್ತು ಮುಗಿದ ಬೆನ್ನಲ್ಲೇ, ಸಿಎಂ ವ್ಯಾಲಿಡಿಟಿಯ ಬಗ್ಗೆ ಚರ್ಚೆ ಹುಟ್ಟಿತು. ಈಗ ಸಚಿವ ಸಂಪುಟ ವಿಸ್ತರಣೆಯ ಜಟಾಪಟಿ 2 ಬಣಗಳ ನಡುವೆ ತೀವ್ರವಾಗಿದೆ ಎಂದು ಕುಟುಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.