Karnataka Exit poll 2023 : ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ ಎಂದು ವಿವಿಧ ಮಾಧ್ಯಮಗಳು ಮತ್ತು ಸಂಸ್ಥೆಗಳ ಎಕ್ಸಿಟ್ ಪೋಲ್ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.
Karnataka Assembly Election 2023 : ಬಿ. ಎಸ್. ಯಡಿಯೂರಪ್ಪ ಅವರು ಒಟ್ಟು 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇದೀಗ 2023ರ ಚುನಾವಣೆಗೆ ಶಿಕಾರಿಪುರ ಪಟ್ಟಣದ ಆಡಳಿತ ಸೌಧದಲ್ಲಿ ಮತದಾನ ಮಾಡಿದ್ದಾರೆ.
siddalinga Shree : ಸಿದ್ದಗಂಗಾ ಮಠದ ಸ್ವಾಮೀಜಿಗಳು ತುಮಕೂರಿನ ಮತಗಟ್ಟೆ ಸಂಖ್ಯೆ 116ರಲ್ಲಿ ಮತದಾನ ಮಾಡಿದರು. ಶ್ರೀಗಳು 116ರ ವಾರ್ಡ್ ನಲ್ಲಿ ಮೊದಲಿಗರಾಗಿ ಮತ ಹಾಕಿದ್ದಾರೆ. ಜೊತೆಗೆ ಮತದಾನದ ಮಹತ್ವದ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ್ದಾರೆ.
Dr. C. N. Ashwath Narayan : ಹೈವೋಲ್ಟೇಜ್ ಕಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಅಂತ್ಯವಾಗಿ, ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದ್ದು, ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಗೆಲುವಿನ ಆಶಾವಾದನ್ನು ಇಟ್ಟುಕೊಂಡಿವೆ.
ಯಡಿಯೂರಪ್ಪ ನೀಡಿದ್ದ ಹೇಳಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.. ಪಕ್ಷ ನಿಮ್ಗೆ ಎಲ್ಲಾ ಕೊಟ್ಟಿತ್ತು.. ಕೆಜಿಪಿ ಕಟ್ಟಿದ್ರಿ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.
Karnataka Election 2023 : ಶೆಟ್ಟರ್ ಅವರಿಗೆ ರಾಜಕೀಯ ನಿವೃತಿ ಹೊಂದುವಂತೆ ಪಕ್ಷ ಹೇಳಿಲ್ಲ. ಅವರನ್ನು ರಾಜ್ಯಸಭೆಗೆ ಕಳಿಸುವ ಬಗ್ಗೆ ಚರ್ಚೆಯಾಗಿತ್ತು. ಅಲ್ಲದೆ, ಅವರ ಕುಟುಂಬಕ್ಕೆ ಟಿಕೆಟ್ ನೀಡುವುದಾಗಿ ತಿಳಿಸಿತ್ತು. ಲಕ್ಷಣ ಸವದಿ ಅವರನ್ನ ಚುನಾವಣೆಯಲ್ಲಿ ಸೋತಮೇಲೆ ಡಿಸಿಎಂ, ಕೋರ್ ಕಮಿಟಿ ಸ್ಥಾನ, ಹಾಗೂ ಎಂಎಲ್ಸಿ ಸ್ಥಾನ ನೀಡಲಾಗಿತ್ತು. ಅದರಂತೆ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬಂದಾಗ ಅವರಿಗೆ ಅಧಿಕಾರ ನೀಡುವ ಭರವಸೆಯನ್ನು ನೀಡಿತ್ತು.
ಸಿಎಂ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸುವ ಯತ್ನ ವಿಫಲವಾಗಿರುವ ಬೆನ್ನಲ್ಲೇ ಈಗ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿಯವರು ಬರೀ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡಿದ್ದಾರೆ, ಕಾಂಗ್ರೆಸ್ ಅಭಿವೃದ್ಧಿ ಪರದ ಸರ್ಕಾರ ನೋಡಿದ್ದಾರೆ ಆದ್ದರಿಂದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದ್ದು ಕಾಂಗ್ರೆಸ್ ಗೆಲ್ಲಲಿದೆ ಎಂದು ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸಿ. ಪುಟ್ಟರಂಗಶೆಟ್ಟಿಯವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಿಜೆಪಿ ಪಕ್ಷದ ಪ್ರಮುಖ ಗೆಲುವಿನ ಕ್ಷೇತ್ರ. ಈವರೆಗೆ ಶಾಸಕರಾಗಿ ಸಚಿವರಾಗಿದ್ದ ಎಸ್.ಅಂಗಾರರಿಗೆ ಈ ಸಲದ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದೆ. ಈ ಸಲ ಅಂಗಾರರ ಬದಲಿಗೆ ಬೇರೆ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ಕೊಡಬೇಕೆಂಬ ಆಗ್ರಹ ಕೂಡಾ ಕೇಳಿಬಂದಿತ್ತು. ಇದೀಗ ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ಅಂಗಾರ ಬೆಂಬಲಿಗರಿಗೆ ಅಸಮಾಧಾನ ಉಂಟಾಗಿದೆ.
ಸಿಂಗಾಪುರ್, ದುಬೈ, ಸೌದಿ ಅರೇಬಿಯಾದಂಥ ವಿದೇಶಿ ಮಾರುಕಟ್ಟೆಯಲ್ಲಿ ನಂದಿನಿ ಯಶಸ್ವಿ ವ್ಯವಹಾರ ನಡೆಸಲು ಬಿಜೆಪಿ ಕಾರಣ. ಕೆಎಂಎಫ್ನ ಶೇ.15ರಷ್ಟು ವಹಿವಾಟು ಹೊರ ರಾಜ್ಯಗಳಿಂದಲೇ ಆಗುತ್ತಿದೆ ಎಂದು ಬಿಜೆಪಿ ಹೇಳಿದೆ.
Karnataka Politics : ಕಳೆದ ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮೋದಿ ಕಳ್ಳ’ ಎಂದಿದ್ದೇ ತಡ ಕಳ್ಳ ಮೋದಿಗಳೆಲ್ಲ ಬಿಲದಿಂದ ಹೊರಬರುತ್ತಿವೆ! ಈ ಕಳ್ಳ ಮೋದಿಗೂ ಬಿಜೆಪಿಗೂ ಅದೇನು ಅವಿನಾಭಾವ ಸಂಬಂಧ?!’ ಎಂದು ಪ್ರಶ್ನಿಸಿದೆ.
‘ರಾಜ್ಯದ ಜನ ಈ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರ ನಿರ್ಮೂಲನೆಗೆ, ಜನರ ನೋವಿಗೆ ಪರಿಹಾರಕ್ಕೆ, ಜನರ ಜೇಬು ಪಿಕ್ ಪಾಕೆಟ್ ಆಗುತ್ತಿರುವುದನ್ನು ನಿಲ್ಲಿಸಲು ಜನ ಮೇ 10ರಂದು ಮತ ಚಲಾಯಿಸಲಿದ್ದಾರೆ’ ಎಂದು ತಿಳಿಸಿದರು.
ಬಿಜೆಪಿಯಲ್ಲಿ ಇದ್ರೆ ಸೇಫ್, ಇಲ್ಲೆ ಇದ್ದು ಗೆದ್ದು ಸಂತಸದಿಂದ ಮಂತ್ರಿಯಾಗೋದು ಒಳ್ಳೆಯದು ಎಂದು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರುವವರಿಗೆ ಕಿವಿ ಮಾತು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.