ಸಚಿವ ಸಹೋದ್ಯೋಗಿ ಮುನಿರತ್ನ ಅವರು ನಿರ್ಮಿಸುತ್ತಿರುವ ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ. ಅದಕ್ಕೆ ನಾನು ಚಿತ್ರಕತೆಯನ್ನೇನೂ ಬರೆಯುತ್ತಿಲ್ಲ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
Karnataka Congress Women : ತಮ್ಮಸೇ ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಬೆಲ್ಟ್ ನಲ್ಲಿ ಹೊಡೆಯೋದಾಗಿ ಹೇಳಿದ್ರು. ಸದ್ಯ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆಂದು ಕಿಡಿಕಾರಿದ್ರು. ಕಾರ್ಯಕ್ರಮ ಯಶಸ್ವಿ ಯಾಗುತ್ತೆ ಇದ್ರಿಂದ ಸೋಮಣ್ಣ ಹತಾಶರಾರಿ ಗಲಾಟೆ ಮಾಡಿಸಿದ್ದಾರೆಂದು ಆರೋಪಿಸಿದರು.
‘ವೀರಶೈವ ಲಿಂಗಾಯತ ಸಮುದಾಯದವರಿಗೆ ಬಿಜೆಪಿಯಿಂದ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಬಾಯಿ ಬಡಿದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ಆಗಿರುವ ಅನ್ಯಾಯ ಮರೆಮಾಚುವ ಕಸರತ್ತು ಕಾಂಗ್ರೆಸ್ ನಡೆಸುತ್ತಿದೆ’ ಎಂದು ಬಿಜೆಪಿ ಕಿಡಿಕಾರಿದೆ.
ನಮ್ಮ ತಂದೆ ಅವರು ಈ ಬಾರಿ ಸಾರ್ವತ್ರಿಕ ಚುನಾವಣೆ ಸ್ವರ್ಧೆ ಮಾಡುತ್ತಾರೆ ಅಥಣಿ ಮತ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಅವರು ಸ್ಪೋಟಕ ಹೇಳಿದ್ದಾರೆ.
ಕಳಸಾ ಬಂಡೂರಿ, ಮಹಾದಾಯಿ ಯೋಜನೆಗೆ ನಮ್ಮ ಪ್ರಧಾನಮಂತ್ರಿಗಳು ಈಗಾಗಲೇ ಡಿಪಿಆರ್ ಗೆ ಒಪ್ಪಿಗೆ ಕೊಟ್ಟಿದ್ದಾರೆ. ಶೀಘ್ರವೇ ಪರಿಸರ ಅನುಮತಿ ದೊರೆಯಲಿದ್ದು, ಯಲ್ಲಮ್ಮನ ಕೊಳ್ಳದಿಂದ ಬನಶಂಕರಿಯವರೆಗೂ ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಸದೇ ನಾವು ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನ ಪರಿಷತ್ ಸಭಾಪತಿಯವರಿಗೆ ರಾಜೀನಾಮೆ ಪತ್ರ ನೀಡಿದ್ದೇವೆ. ಆದರೆ ಬಳಿಕ ಸಭಾಪತಿ ಅವರನ್ನು ಭೇಟಿ ಮಾಡಲು ಬಾಕಿ ಉಳಿಸಿ ಕಾಂಗ್ರೆಸ್ ಕಚೇರಿಗೆ ಬಂದಿದ್ದೇನೆ. ಸಿಎಂ ಭೇಟಿ ಮಾಡಿ ಬಿಜೆಪಿ ನಾಯಕರಿಗೂ ಮನವರಿಕೆ ಮಾಡಿಕೊಟ್ಟು ಸರ್ಕಾರಕ್ಕೆ ತರಾಟೆ ತೆಗೆದು ಕೊಂಡಿದ್ದೇನೆ. ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ಎಂಎಲ್ ಸಿ ಪುಟ್ಟಣ್ಣ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.