ನಮ್ಮ ತಂದೆ ಅವರು ಈ ಬಾರಿ ಸಾರ್ವತ್ರಿಕ ಚುನಾವಣೆ ಸ್ವರ್ಧೆ ಮಾಡುತ್ತಾರೆ ಅಥಣಿ ಮತ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಅವರು ಸ್ಪೋಟಕ ಹೇಳಿದ್ದಾರೆ.
ಕಳಸಾ ಬಂಡೂರಿ, ಮಹಾದಾಯಿ ಯೋಜನೆಗೆ ನಮ್ಮ ಪ್ರಧಾನಮಂತ್ರಿಗಳು ಈಗಾಗಲೇ ಡಿಪಿಆರ್ ಗೆ ಒಪ್ಪಿಗೆ ಕೊಟ್ಟಿದ್ದಾರೆ. ಶೀಘ್ರವೇ ಪರಿಸರ ಅನುಮತಿ ದೊರೆಯಲಿದ್ದು, ಯಲ್ಲಮ್ಮನ ಕೊಳ್ಳದಿಂದ ಬನಶಂಕರಿಯವರೆಗೂ ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಸದೇ ನಾವು ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನ ಪರಿಷತ್ ಸಭಾಪತಿಯವರಿಗೆ ರಾಜೀನಾಮೆ ಪತ್ರ ನೀಡಿದ್ದೇವೆ. ಆದರೆ ಬಳಿಕ ಸಭಾಪತಿ ಅವರನ್ನು ಭೇಟಿ ಮಾಡಲು ಬಾಕಿ ಉಳಿಸಿ ಕಾಂಗ್ರೆಸ್ ಕಚೇರಿಗೆ ಬಂದಿದ್ದೇನೆ. ಸಿಎಂ ಭೇಟಿ ಮಾಡಿ ಬಿಜೆಪಿ ನಾಯಕರಿಗೂ ಮನವರಿಕೆ ಮಾಡಿಕೊಟ್ಟು ಸರ್ಕಾರಕ್ಕೆ ತರಾಟೆ ತೆಗೆದು ಕೊಂಡಿದ್ದೇನೆ. ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ಎಂಎಲ್ ಸಿ ಪುಟ್ಟಣ್ಣ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಯಾರೇ ಯಾವುದೇ ಹೇಳಿಕೆಯನ್ನು ಕೊಡಬಹುದು. ಆದರೆ, ಅಂತಹ ಹೇಳಿಕೆ ಕೊಡಬೇಕಾದರೆ ಅದಕ್ಕೂ ಮುಂಚೆ ಅದಕ್ಕೆ ಸೂಕ್ತವಾದಂತ ಒಂದು ಆಧಾರ ಕೊಟ್ಟರೆ ಆ ಮಾತಿಗೆ ಬೆಲೆ ಇರುತ್ತದೆ ಎಂದು ವಿಶ್ವಸ್ಥ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಪೇಜಾವರ ಮಠಕ್ಕೆ ಮುಸ್ಲಿಮರು ಜಾಗ ಕೊಟ್ಟ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಯಡಿಯೂರಪ್ಪ 2 ಗಂಟೆ ತಡ.. ಕಾದು ಸುಸ್ತಾದ ಸ್ಟೂಡೆಂಟ್ಸ್ ಸ್ವಾಗತಕ್ಕಾಗಿ ಕಾದು ನಿಂತಿದ್ದ ವಿದ್ಯಾರ್ಥಿಗಳು ಸುಸ್ತು..! ಗುರುಮಿಠಕಲ್ ಮಠಕ್ಕೆ 2 ಗಂಟೆ ತಡವಾಗಿ ಬಂದ BSY 2 ಗಂಟೆಗೆ ನಿಗದಿಯಾಗಿದ್ದ ಪ್ರೋಗ್ರಾಂ 4ಕ್ಕೆ BSY ಎಂಟ್ರಿ
ಕಳೆದ ಬಾರಿಯ ಚುನಾವಣೆಯಲ್ಲಿ ಅಪಪ್ರಚಾರ ಮಾಡಿದ್ರು. ಜೆಡಿಎಸ್ಗೆ ಮತ ಕೊಟ್ರೆ ಬಿಜೆಪಿಗೆ ಅವಕಾಶ ಎಂದ್ರು. ಈ ಅಪ ಪ್ರಚಾರವೇ ಬಿಜೆಪಿ 105 ಸ್ಥಾನಗಳಿಗೆ ಹೋಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ.
ಕಾಂಗ್ರೇಸ್ ಪಕ್ಷದಲ್ಲಿ ದುಡ್ಡುಕೊಟ್ಟು ಜನ್ರು ಸೇರಿಸುವ ಪರಂಪರೆ ಇಲ್ಲಾ. ಬಿಜೆಪಿಯವರ ಬಗ್ಗೆ ಮಾತನಾಡುವಾಗಿನ ವಿಡಿಯೋ ಅದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ವಿಡಿಯೋ ವೈರಲ್ ಗೆ ಸಂಬಂಧಿಸಿದಂತೆ ಪ್ರಕ್ರಿಯೆ ನೀಡಿದ್ದಾರೆ.
Siddaramaiah Viral Video: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಬಸ್ನಲ್ಲಿ ಸಿದ್ದರಾಮಯ್ಯನವರು 500 ರೂ. ನೀಡಿ ಸಮಾವೇಶಕ್ಕೆ ಜನರನ್ನು ಸೇರಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೂಚಿಸಿದ್ದಾರೆ.
ಗೃಹಬಳಕೆಯ ಸಿಲಿಂಡರ್ ದರ ಮತ್ತೆ 50 ರೂ. ಏರಿಕೆಯಾಗಿದೆ. ಮೋದಿಜಿಯ ಅಚ್ಛೆ ದಿನಗಳಲ್ಲಿ ಜನರು ಕಾಡುಮೇಡು ಅಲೆದು ಗೆಡ್ಡೆಗೆಣಸು ತಿಂದು ಬದುಕುವ ಹಂತಕ್ಕೆ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
Shivamogga Airport Photos : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯದ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವು ಶೀಘ್ರದಲ್ಲೇ ಸಾರ್ವಜನಿಕರಿಗೆ ಕಾರ್ಯನಿರ್ವಹಿಸಲಿದೆ ಮತ್ತು ಪ್ರಯಾಣಿಕರ ಸುಗಮ ಪ್ರಯಾಣಕ್ಕಾಗಿ ಹಲವು ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.