ಚಳಿಗಾಲ ಅಧಿವೇಶನದ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಜಾನುವಾರಿನ ಗಂಟು ರೋಗ ವಿಚಾರವಾಗಿ ಪಶು ಸಂಗೋಪನೆ ಇಲಾಖೆ ಕಾರ್ಯನಿರ್ವಾಹಣೆ ಬಗ್ಗೆ ಪ್ರಶ್ನೆ ಮಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪಶು ಸಂಗೋಪನ ಸಚಿವರನ್ನ ಇಕ್ಕಟಿಕೆ ಸಿಲುಕಿಸಿದರು.
ನಿನ್ನೆ ಕಾಂಗ್ರೆಸ್ ಒಕ್ಕಲಿಗ ನಾಯಕರ ಸಭೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಚಿವ ಚೆಲುವರಾಯಸ್ವಾಮಿ, ಎಂ.ಕೃಷ್ಣಪ್ಪ, ಸಂಸದ ಡಿ.ಕೆ.ಸುರೇಶ್,ಸೇರಿದಂತೆ ಹಲವರು ಭಾಗಿಯಾಗಿದ್ದರು.
ರಾಷ್ಟ್ರದ ಭದ್ರತೆ ಪ್ರಶ್ನೆ ಬಂದಾಗ ಏಕತೆಯ ಪ್ರದರ್ಶನ ಮಾಡಬೇಕು. ದೇಶದ ಗಡಿಯಲ್ಲಿ ಯೋಧರು ಪ್ರಾಣದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದಾರೆ. ಟೆರರಿಸ್ಟ್ ಆದಾಗ ಬಹಳ ಅನುಕಂಪದಿಂದ ಮಾತಾಡಬಾರದು. ಬಾಂಬ್ ಬ್ಲಾಸ್ಟ್ ಆದಾಗ ಪಕ್ಷತೀತವಾಗಿ ಒಟ್ಟಾಗಿ ನಿಲ್ಲಬೇಕು. ಅವನ್ಯಾವನೋ ಟೆರರಿಸ್ಟ್ ಮೇಲೆ ಯಾಕೆ ಇಷ್ಟೊಂದು ಪ್ರೀತಿ? ಎಂದು ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಲ್ಪಸಂಖ್ಯಾತರ ಓಟ್ ಗಾಗಿ ಡಿಕೆಶಿಯಿಂದ ಓಲೈಕೆ ರಾಜಕಾರಣ ಮಾಡುವ ಮೂಲಕ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಕಾಂಗ್ರೆಸ್ನ ಸಮುದಾಯವಾರು ಸಮಾವೇಶಗಳಿಗೆ ಸಿದ್ಧತೆ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಒಕ್ಕಲಿಗ ನಾಯಕರ ಸಭೆ ನಡೆಯಲಿದೆ. ಸಮುದಾಯದ ಮತಗಳನ್ನ ಕಾಂಗ್ರೆಸ್ನತ್ತ ಸೆಳೆಯುವ ಬಗ್ಗೆ ಚರ್ಚೆ ನಡೆಯಲಿದೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ಭಯೋತ್ಪಾದಕ ಚಟುವಟಿಕೆ ಎಂದು ಸರ್ಕಾರ ಹೇಳಿರುವುದು ಮತದಾರರ ಮಾಹಿತಿ ಕಳ್ಳತನ, ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್ ಮಾಡವ ಪ್ರಯತ್ನ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು.
ಮಾಧ್ಯಮಗಳು ನಾವು ಹೆಲಿಕಾಪ್ಟರ್ ಪ್ರವಾಸ ಮಾಡುವುದಾಗಿ ವರದಿ ಮಾಡಿವೆ. ನಮಗೆ ಇನ್ನು ಆ ಸಂದರ್ಭ ಬಂದಿಲ್ಲ. ಚುನಾವಣೆ ಸಮಯದಲ್ಲಿ ಕೆಲವೊಮ್ಮೆ ತುರ್ತಾಗಿ ಪ್ರವಾಸ ಮಾಡುವಾಗ ಹೆಲಿಕಾಪ್ಟರ್ ಬಳಸಲಾಗುವುದು. ಆದರೆ ಅದು ಹೆಲಿಕಾಪ್ಟರ್ ಯಾತ್ರೆ ಇಲ್ಲ. ನಾವು ಜನರಿಗಾಗಿ, ಜನರಿಗೋಸ್ಕರ, ಜನರ ಮಧ್ಯೆ, ಅವರ ಧ್ವನಿಯಾಗಿ ಅವರ ವಿಚಾರ ಅರಿತು ಚುನಾವಣೆಗೆ ತಯಾರಾಗುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ದಲಿತ ಸಮುದಾಯಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದೆ. ಇವರೆಲ್ಲಾ ನಮ್ಮ ಜೊತೆ ಇದ್ದಾಗ ನಾವು ಅವರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಅರ್ಥವಾಗಲ್ವಾ ಎಂದು ಜಿ. ಪರಮೇಶ್ವರ್ ಪ್ರಶ್ನಿಸಿದ್ದಾರೆ.
Karnataka Congress : ಕಾಂಗ್ರೆಸ್ ಪಕ್ಷದಿಂದ ಮುಂಬರುವ 2023 ರ ವಿಧಾನ ಸಭೆ ಚುನಾವಣೆ ಸ್ಪರ್ಧೆ ಮಾಡುವ ಆಕಾಂಕ್ಷಿಗಳಿಗೆ ₹5000 ಅರ್ಜಿ ಆಫರ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ತಲೆ ನೋವ್ವು ತಂದಿದೆ.
ಬೆಂಗಳೂರು : ಕಳೆದೆರಡು ವರ್ಷಗಳಿಂದ ಬಿಬಿಎಂಪಿ ಚುನಾವಣೆಗೆ ಅಡ್ಡಗಾಲು ಹಾಕುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿರುವ ರಾಜ್ಯ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಉಪವಾಸ ಕುಳಿತ ಪಕ್ಷದ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕುರುಬರ ಮತ ಸೆಳೆಯಲು ಮುಂದಾದ ಕಾಂಗ್ರೆಸ್ ಪಕ್ಷದ ನಾಯಕರು. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ. ಕನಕದಾಸ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿ
ಚಿಲುಮೆ ಸಂಸ್ಥೆ ಬಗ್ಗೆ ಸೆಪ್ಟೆಂಬರ್ 20ರಂದೇ ಪೊಲೀಸ್ ಆಯುಕ್ತರಿಗೆ, ಬಿಬಿಎಂಪಿ & ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದೆ ಎಂದು ಪ್ರಾದೇಶಿಕ ಆಯುಕ್ತರ ವಿಚಾರಣೆ ವೇಳೆ ಸಮನ್ವಯ ಟ್ರಸ್ಟ್ನ ಮುಖ್ಯಸ್ಥೆ ಸುಮಂಗಲಾ ಅವರು ತಿಳಿಸಿದ್ದಾರೆ.
'ಮಾತು ಆಡಿದ್ರೆ ಹೋಯ್ತು.. ಮುತ್ತು ಒಡೆದರೆ ಹೋಯ್ತು' ಎಂದು ಸಿಎಂ ಬಸವರಾಜ ಬೊಮ್ಮಾಯಿ, ತಮಗೆ ಪತ್ರ ಬರೆದು ಸತೀಶ್ ಜಾರಕಿಹೊಳಿ ಹೇಳಿಕೆ ಹಿಂಪಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಒಬ್ಬ ಸಿಎಂ ಆಗಿದ್ದ ವ್ಯಕ್ತಿಯನ್ನು ಚಾಮುಂಡೇಶ್ವರಿ ಕ್ಷೇತ್ರದ ಜನರು ಹೀನಾಯವಾಗಿ ಸೋಲಿಸಿದರು. ಸಿದ್ದರಾಮಯ್ಯ ಪರದೇಶಿ ಗಿರಾಕಿ ತರ ಕ್ಷೇತ್ರ ಹುಡುಕಿಕೊಂಡು ಹೋಗ್ತಿದ್ದಾರೆ. ನಿಮ್ಮ ಕ್ಷೇತ್ರ ಯಾವುದು ಎಂದು ಮೊದಲು ನೀನು ಹೇಳು, ಆ ಮೇಲೆ ನನ್ನ ಬಗ್ಗೆ ಮಾತನಾಡು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.