Karnataka Congress Slams BL SANTHOSH: ತಮ್ಮಲ್ಲಿನ ಹುಳುಕುಗಳೇ ಕೊಳೆತು ನಾರುತ್ತಿದೆ, ಅದನ್ನು ಸರಿಪಡಿಸುವ ಯೋಗ್ಯತೆ ಇಲ್ಲದವರು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿ ಸಾಧಿಸುವುದಾದರೂ ಏನು!? ಎಂದು ಕಾಂಗ್ರೆಸ್ ಕುಟುಕಿದೆ.
BJP vs BJP: ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ #BJPvsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ ಬಿ.ಎಲ್.ಸಂತೋಷ್ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಂಡಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.
ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿ ಒಂದು ರೀತಿ ಯಜಮಾನನಿಲ್ಲದ ಮನೆ, ಡ್ರೈವರ್ ಇಲ್ಲದ ಡಕೋಟಾ ಇಂಜಿನ್, ನಾವಿಕನಿಲ್ಲದ ನೌಕೆ ಮತ್ತು ಅಂಪೈರ್ ಇಲ್ಲದ WWF ವೇದಿಕೆಯಾಗಿದೆ’ ಎಂದು ಟೀಕಿಸಿದೆ.
V Somanna vs BL Santosh: ಸೋಮಣ್ಣನವರೇ, ನಿಮ್ಮ ಕಾಲ ಮೇಲೆ ನೀವೇ ಕಲ್ಲು ಹಾಕಿಕೊಂಡಿದ್ದಾ ಅಥವಾ ನಿಮ್ಮ ತಲೆಯ ಮೇಲೆ ಬೇರೆಯವರು ಕಲ್ಲು ಹಾಕಿದ್ದಾ? "ಲಿಂಗಾಯತ ಮುಕ್ತ ಬಿಜೆಪಿ" ಮಾಡುವ ಸಂತೋಷ ಕೂಟದ ಪ್ರಯತ್ನಕ್ಕೆ ನೀವು 3ನೇ ಬಲಿಪಶು ಆಗಿದ್ದಲ್ಲವೇ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಲು ಮುಂದಾಗಿರುವ ಕಾಂಗ್ರೆಸ್ ಪೂರ್ವತಯಾರಿ ಬಗ್ಗೆ ಚರ್ಚಿಸಲು ಇಂದು ಕೆಪಿಸಿಸಿ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಿದೆ. ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿರುವ ಭಾರತ್ ಜೋಡೋ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ಪಕ್ಷ ಸಂಘಟನೆಗೆ ಒತ್ತು ನೀಡುವ ಜೊತೆಗೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಪ್ರಚಾರ ಮತ್ತು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ.
ಚುನಾವಣೆಗಾಗಿ ರಾಜ್ಯಗಳಲ್ಲಿ ತಿಂಗಳುಗಟ್ಟಲೆ ಟೆಂಟ್ ಹಾಕುವ ಇವರು ಬಿಜೆಪಿ ಆಡಳಿತದ ಒಂದು ರಾಜ್ಯ ಸಂಕಷ್ಟ ಎದುರಿಸುತ್ತಿರುವಾಗ ಅತ್ತ ಸುಳಿಯದಿರುವುದೇಕೆ? ಮಣಿಪುರ ವಿಷಯ ಬಂದರೆ 56 ಇಂಚಿನ ಎದೆಯ ಅಳತೆ 16 ಇಂಚಿಗೆ ಇಳಿಯುವುದೇಕೆ? ಎಂದು ಕಾಂಗ್ರೆಸ್ ಕುಟುಕಿದೆ.
ಮಣಿಪುರ, ಹರ್ಯಾಣಗಳ ಹೊತ್ತಿ ಉರಿದರೂ ಅತ್ತ ಸುಳಿಯದ ಪ್ರಧಾನಿ ಮೋದಿಗೆ ನಮ್ಮ ಸರ್ಕಾರದ ಮೇಲೆ ಏಕಿಷ್ಟು ಆಸಕ್ತಿ? ಯಶಸ್ವಿಯಾದ ನಮ್ಮ ಗ್ಯಾರಂಟಿ ಯೋಜನೆಗಳು ಮೋದಿಯವರ ನಿದ್ದೆಗೆಡಿಸಿವೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿ ಟ್ವೀಟ್ ಮಾಡಿದೆ.
Udupi bathroom video case: ಯಾವೊಬ್ಬ ಬಿಜೆಪಿಯವರೂ ತೀರ್ಥಹಳ್ಳಿಯ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಏಕೆ? ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವವನ್ನು ಉಳಿಸಲು ಮನಸಿಲ್ಲವೇ?’ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
ರಾಜ್ಯದ ಸಾವಿರಾರು ಯುವಕರ ಭವಿಷ್ಯ ಕಸಿದ, ಬಿಜೆಪಿ ಅವಧಿಯಲ್ಲಿ ನಡೆದ PSI ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದೆ ನಮ್ಮ ಸರ್ಕಾರ. ಈಗ ಹಗರಣದ ಇಂಚಿಂಚೂ ತನಿಖೆಗೆ ಒಳಪಡಲಿದೆ ಎಂದು ಕಾಂಗ್ರೆಸ್ ಎಚ್ಚರಿಕೆ ಸಂದೇಶ ನೀಡಿದೆ.
ಇಂದಿನಿಂದ ಜಾರಿಯಾಗಲಿದೆ ಕಾಂಗ್ರೆಸ್ ಗೃಹಲಕ್ಷ್ಮಿ ಯೋಜನೆ ವಿಧಾನಸೌಧದ ಗ್ಯಾಂಡ್ ಸ್ಟೆಪ್ಸ್ ಮೇಲೆ ಯೋಜನೆಗೆ ಗ್ರೀನ್ಸಿಗ್ನಲ್ ಇಂದು ಸಂಜೆ ಉದ್ಘಾಟನೆ.. ನಾಳೆಯಿಂದ ನೋಂದಣಿ ಆರಂಭ ಯೋಜನೆ ಜಾರಿಯಾದ ಮರುದಿನದಿಂದಲೇ ನೋಂದಣಿ ಸ್ಟಾರ್ಟ್ ನೋಂದಣಿ ಮಾಡಿದ ಬಳಿಕ ಅಕೌಂಟ್ಗೆ 2 ಸಾವಿರ ದುಡ್ಡು ಜಮೆ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ದಿಟ್ಟ ಹೋರಾಟ ನಡೆಸಲು ವಿರೋಧಪಕ್ಷಗಳು ಒಗ್ಗಟ್ಟಿನ ಮಂತ್ರ ಜಪಿಸುತ್ತಿವೆ. ಪಾಟ್ನಾದಲ್ಲಿ ನಡೆದ ಮೊದಲ ರಾಜಕೀಯ ಸಭೆಯ ಬಳಿಕ ಯುಪಿಎ ಮಿತ್ರಪಕ್ಷಗಳ ದಂಡು ಬೆಂಗಳೂರಿನತ್ತ ಆಗಮಿಸುತ್ತಿದೆ.
Congress Vs BJP: ಬಿಜೆಪಿಯ ಕಮಿಷನ್ ಸರ್ಕಾರದ ಆಡಳಿತದಲ್ಲಿ ಗುತ್ತಿಗೆ ಪಡೆದು ಕಳಪೆ ಮೊಟ್ಟೆ ಪೂರೈಕೆ ಮಾಡಿದ ಸರಬರಾಜುದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಮೂಲಕ ನಮ್ಮ ಸರ್ಕಾರ ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬುದನ್ನು ನಿರೂಪಿಸಿದೆ.
ಅಂತ್ಯೋದಯ ಅನ್ನ(ಎ.ಎ.ವೈ) ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್)ಗಳನ್ನು ಹೊಂದಿರುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಥವಾ ಖಾತೆ ಹೊಂದದೇ ಇದ್ದಲ್ಲಿ ಹಾಗೂ ಇತರೆ ನ್ಯೂನ್ಯತೆಗಳಿದ್ದಲ್ಲಿ ನಗದು ವರ್ಗಾವಣೆ ಆಗುವುದಿಲ್ಲ ಹೀಗಾಗಿ ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಮೊಹಮ್ಮದ್ ಖೈಜರ್ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.