ಬೆಂಗಳೂರು ಮತ್ತು ಮೈಸೂರಿನ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದೆ.. ಫೈನಾನ್ಸಿಯರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರು ಹಾಗೂ ಮೈಸೂರು ಭಾಗದಲ್ಲಿ ಸುಮಾರು 20 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ.. 5 ಕೋಟಿ ಬೆಲೆಬಾಳುವ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಮಲ್ಲಿಕಾರ್ಜುನ್ ಖರ್ಗೆ, ಕುಟುಂಬಸ್ಥರ ಹತ್ಯೆ ಆಡಿಯೋ ವಿಚಾರ ಪ್ರತಿಕ್ರಿಯೆ ನೀಡಿದ ಸಿಎಂ ಆ ಆಡಿಯೋ ತಿರುಚಲಾಗಿದೆಯೋ ಏನೋ ನೋಡಬೇಕಿದೆ. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಹಿನ್ನೆಲೆ ಸಚಿವೆ ಶಶಿಕಲಾ ಜೋಲ್ಲೆ ನೇತೃತ್ವದಲ್ಲಿ ಹುನುಮಾನ್ ಚಾಲೀಸ ಪಠಣ ಮಾಡಲಾಗಿದೆ. ನಿಪ್ಪಾಣಿ ಪಟ್ಟಣದ ಸಾಕರವಾಡಿ ಹನುಮಾನ ಮಂದಿರದಲ್ಲಿ 300ಕ್ಕೂ ಹೆಚ್ಚು ಬಜರಂಗದಳ ಕಾರ್ಯಕರ್ತರು ಹನುಮಾನ್ ಚಾಲೀಸ ಪಠಣ ಮಾಡಿದ್ದಾರೆ..
ಖರ್ಗೆ ಅವರ ಬೆಳವಣಿಗೆ ಸಹಿಸದೇ ಮಲ್ಲಿಕಾರ್ಜುನ್ ಖರ್ಗೆ, ಪತ್ನಿ ಹತ್ಯೆಗೆ ಸಂಚು ನಡೆಸಿದ್ದಾರೆ ಎಂದು ಕೈ ನಾಯಕ ಸುರ್ಜೇವಾಲಾ ಗಂಭೀರ ಆರೋಪ ಮಾಡಿದ್ದಾರೆ.. ಈ ಬಗ್ಗೆ ಸುರ್ಜೇವಾಲಾ ಆಡಿಯೋ ಬಿಡುಗಡೆ ಮಾಡಿದ್ದಾರೆ.
ಕನ್ನಡಪರ ಹೋರಾಟಗಾರ ಪ್ರಶಾಂತ್ ಸಂಬರ್ಗಿ ಹೇಳಿಕೆ ವಿಚಾರವಾಗಿ ನಟ ಡಾ. ಶಿವರಾಜಕುಮಾರ್ ಅವರು ಗುಡುಗಿದ್ದಾರೆ. ಪ್ರಶಾಂತ ಸಂಬರಗಿ ಹಾಗೆ ಮಾತಾಡೋದು ಸರಿ ಅಲ್ಲ. ಅದನ್ನು ವಾಪಸ್ ತಗೆದುಕೊಳ್ಳಬೇಕು. ನಮ್ಮ ಹತ್ರ ಹಣನೇ ಇಲ್ವಾ ಎಂದ ಶಿವಣ್ಣ ಪ್ರಶ್ನೆ ಮಾಡಿದ್ದಾರೆ.
Karnataka Election 2023: ನೀನು ಬೆಳೆಸಿದ ಬಿಜೆಪಿಯವರು ನಿನ್ನನ್ನು ಬದುಕಲು ಬಿಡುತ್ತಿಲ್ಲ. ಜನರ ಮಧ್ಯೆ ಹೋಗೋಣ ಎಂದು ಪತ್ನಿ ಹೇಳಿದರು. ನನ್ನ ವಿರುದ್ಧ ಅನೇಕ ಕುತಂತ್ರ ಮಾಡಿದರು. ಹಿಂದಿನ ಜನ್ಮದಲ್ಲಿ ಯಾರಿಗೆ ಏನು ಕೆಟ್ಟದು ಮಾಡಿದ್ದೆನೋ ಗೊತ್ತಿಲ್ಲ. ಯಾವ ಕಷ್ಟಗಳನ್ನು ಹೇಳಿ ಬದುಕುವ ಜಾಯಮಾನ ನನ್ನದಲ್ಲ ಎಂದು ಮಾಜಿ ಸಚಿವ ಜನಾರ್ಧನರೆಡ್ಡಿ ಹೇಳಿದ್ದಾರೆ.
Karnataka Election 2023: ಆಡಿಯೋ ಒಂದರಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಖರ್ಗೆ ಹಾಗು ಅವರ ಹೆಂಡತಿ ಮಕ್ಕಳನ್ನು ಸಾಫ್ ಮಾಡುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ ಇಂತಹ ಹತ್ತು ಮಣಿಕಂಠನನ್ನು ನೋಡಿದ್ದೇನೆ ಎಂದು ಹೇಳುವ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಇಂದು ದಯಾನಂದ ನಗರ ವಾರ್ಡ್ನಲ್ಲಿ ನಡೆದ ಕರುಮಾರಿಯಮ್ಮನ ಜಾತ್ರೆ ಮಹೋತ್ಸವದಲ್ಲಿ ಪುಟ್ಟಣ್ಣ ಭಾಗಿಯಾಗಿದ್ದರು. ದೇವಿಯ ದರ್ಶನ ಪಡೆದು ಮತ ಮತಯಾಚಿಸಿದರು. ಈ ವೇಳೆ ನೂರಾರು ಕಾರ್ಯಕರ್ತರು, ಸ್ಥಳೀಯರು ಪುಟ್ಟಣ್ಣನಿಗೆ ಸಾಥ್ ನೀಡಿದರು.
Karnataka Election 2023: ಬಿಜೆಪಿ ತನ್ನ ದ್ವೇಷದ ಮೂಲಕ ಕರ್ನಾಟಕದ ಮಣ್ಣಿನ ಮಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲುವ ಸಂಚು ರೂಪಿಸಿ ಪಾಪದ ಕೃತ್ಯ ಎಸಗಿದೆ. ಖರ್ಗೆ ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.
ಬಳ್ಳಾರಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಮಳೆ ಆತಂಕ. ಇಂದು ಮಧ್ಯಾಹ್ನ 2 ಗಂಟೆಗೆ ಬಳ್ಳಾರಿಯಲ್ಲಿ ಮೋದಿ ಕಾರ್ಯಕ್ರಮ. ರಾತ್ರಿ ಸುರಿದ ಮಳೆಯಿಂದಾಗಿ ವೇದಿಕೆ ಸಂಪೂರ್ಣ ಕೆಸರುಮಯ. ಇನ್ನೂ ಮೋಡ ಕವಿದ ವಾತಾವರಣ ಹಿನ್ನೆಲೆ ಮತ್ತೆ ಮಳೆ ಆತಂಕ. ರಾತ್ರಿ ಸುರಿದ ಮಳೆಗೆ ವೇದಿಕೆ ಸರಿಪಡಿಸುತ್ತಿರುವ ಸಿಬ್ಬಂದಿ.
ಬಜರಂಗದಳ ಬ್ಯಾನ್ ಮಾಡುವ ಪ್ರಣಾಳಿಕೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ. ಈ ಬಗ್ಗೆ ನಮ್ಮ ಪಕ್ಷದ ಹಿರಿಯ ನಾಯಕರು ಈಗಾಗಲೇ ಮಾತನಾಡಿದ್ದಾರೆ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ರು. ಅಲ್ಲದೇ ಬಿಜೆಪಿ ಕಟ್ಟಿದ ನನಗೆ ಪಕ್ಷ ಮೋಸ ಮಾಡಿದೆ. ಬಿ.ಎಲ್.ಸಂತೋಷ್ ನನ್ನ ಟಿಕೆಟ್ ತಪ್ಪಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇನ್ನು ಈ ಕುರಿತು ನಮ್ಮ ಪ್ರತಿನಿಧಿ ವಿಶ್ವನಾಥ್ ಹರಿಹರ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.
ಇಂದು ಗಣಿನಾಡು ಬಳ್ಳಾರಿ ಜಿಲ್ಲೆಗೆ ನಮೋ ಎಂಟ್ರಿ. ಬಿಜೆಪಿ ಅಭ್ಯರ್ಥಿ ಪರ ಮತ ಬೇಟೆ ನಡೆಸಲಿರೋ ಮೋದಿ. ಜಿಲ್ಲೆಯ 5 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿ ಪರ ಮೋದಿ ಮತಬೇಟೆ. ಜಿಲ್ಲೆಯ ಮೀಸಲು ಕ್ಷೇತ್ರಗಳಲ್ಲಿ ಗರಿಗೆದರಿದ ಚುನಾವಣಾ ಕಾವು. ನಗರದ ಸತ್ಯಂ ಶಾಲೆ ಎದುರುಗಡೆ ಮೈದಾನದಲ್ಲಿ ಬಹಿರಂಗ ಸಭೆ. ಬಹಿರಂಗ ಸಭೆಯಲ್ಲಿ ಲಕ್ಷಾಂತರ ಜನ ಭಾಗಿಯಾಗುವ ಸಾಧ್ಯತೆ.
Karnataka Election 2023 : ವಿಭಿನ್ನ ಪ್ರಧಾನಿಯಿದ್ದರೆ ಕಾಂಗ್ರೆಸ್ ಗೆ ಕಷ್ಟ. ವಿಭಿನ್ನವಾಗಿರುವ ಪ್ರಧಾನಿಗಳು ಇದ್ದಾಗ ಅವರಿಗೆ ಕಷ್ಟವಾಗುತ್ತೆ. ರಾಜ್ಯದ ಜನರು ಕಷ್ಟದಲ್ಲಿದ್ದಾಗ ನಮ್ಮ ಪ್ರಧಾನಿ ಅತಿ ಹೆಚ್ಚು ಪರಿಹಾರ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Karnataka Election 2023 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ರಾಜ್ಯದಲ್ಲಿ ರಾಜಕೀಯ ಅಖಾಡ ರಂಗೇರಿದೆ. ಇತ್ತ ಮತದಾರರು ಕೂಡ ತಾವು ಮತಚಲಾಯಿಸಲು ಸಿದ್ಧರಾಗಿದ್ದಾರೆ. ಈ ಚುನಾವಣಾ ಬಿಸಿಯ ನಡುವೆ ಚಂದನವನದ ನಟ - ನಟಿಯರು ಮತದಾನ ಮಾಡುವ ಕ್ಷೇತ್ರಗಳು ಯಾವವು ಎಂದು ನಾವು ನಿಮಗೆ ಹೇಳಲಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.