ಲಿಂಗಾಯತ ಸಮಾಜವನ್ನ ಒಡೆಯುವಂತ ಕೆಲಸ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ 50 ವರ್ಷದಿಂದ ಲಿಂಗಾಯತರನ್ನು ಸಿಎಂ ಮಾಡಿಲ್ಲ. ಕಾಂಗ್ರೆಸ್ನಲ್ಲಿ ಎಸ್ ನಿಜಲಿಂಗಪ್ಪ ಹೊರತುಪಡಿಸಿ ಲಿಂಗಾಯತ ಸಿಎಂ ಆಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದರು.
ಯಡಿಯೂರಪ್ಪ ನೇತೃತ್ವದಲ್ಲಿ ಲಿಂಗಾಯತ ನಾಯಕರ ಸಭೆ ನಡೆದ ಕುರಿತು ಮಾತನಾಡಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ಆಗಿದೆ. ಕಾಂಗ್ರೆಸ್ ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು, ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಆದ್ರೆ, ಲಿಂಗಾಯತ ಸಿಎಂ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದರು.
ಸಿದ್ದರಾಮಯ್ಯ ಅವರಿಗೆ ಸ್ವಂತ ಬಲ ಇದ್ದರೆ ಗೆಲ್ಲುತ್ತಾರೆ, ಇಲ್ಲದಿದ್ದರೆ, ಗೆಲ್ಲುವುದಿಲ್ಲ. ನನ್ನ ಕ್ಷೇತ್ರ ಶಿಗ್ಗಾಂವಿಯಲ್ಲೂ ಕಾಂಗ್ರೆಸ್- ಜೆಡಿಎಸ್ ಸೇರಿಕೊಂಡಿದ್ದಾರೆ. ಇದರಿಂದ ನನಗೇನೂ ಭಯವಿಲ್ಲ. ನಾನು ಸ್ವಂತ ಬಲದಿಂದ ಗೆಲ್ಲುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತಮ್ಮ ಚಿತ್ರದ ಹಾಡು ಹೇಳಿ ಬೊಮ್ಮಾಯಿಗೆ ಸುದೀಪ್ ಬೆಂಬಲ. ʻಗೆದ್ದೇ ಗೆಲ್ಲುವೆವು ಒಂದು ದಿನ.. ಗೆಲ್ಲಲೇಬೇಕು ಒಳ್ಳೆತನʼ ಹಾಡು ಹಾಡಿದ ಕಿಚ್ಚ. ಬೊಮ್ಮಾಯಿ ಮಾಮ ಅವರಿಗೆ ನಿಮ್ಮ ಸಹಕಾರ ನೀಡಬೇಕು. ಬೊಮ್ಮಾಯಿ ಅವರಿಗೆ ನೀವು ಸೇವೆ ಮಾಡೋ ಅವಕಾಶ ನೀಡಿ ಎಂದು ಶಿಗ್ಗಾಂವಿ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ ಮನವಿ ಮಾಡಿಕೊಂಡ್ರು
ಬಿಜೆಪಿ ಅಭ್ಯರ್ಥಿಯನ್ನು ಗ್ರಾಮದಿಂದ ಹೊರಗಡೆ ಕಳಿಸಿದ ಜನರು. ಬಿಜೆಪಿ ಅಭ್ಯರ್ಥಿ ಕೃಷ್ಣಾನಾಯ್ಕ್ಗೆ ತಾಂಡಾ ಜನರ ಘೇರಾವ್. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ವಿಧಾನ ಸಭೆ ಕ್ಷೇತ್ರ. ಹೂವಿನಹಡಗಲಿ ತಾಲೂಕಿನ ದಾಸರಹಳ್ಳಿ ತಾಂಡಾದಲ್ಲಿ ಘಟನೆ. ಬಿಜೆಪಿ ಪ್ರಚಾರಕ್ಕೆ ಹೋದ ಸಮಯದಲ್ಲಿ ಗ್ರಾಮಸ್ಥರಿಂದ ಕ್ಲಾಸ್.
Karnataka Assembly Election: ಹಾಸನ ಕ್ಷೇತ್ರ ಟಿಕೆಟ್ಗಾಗಿ ಭಾರೀ ಪೈಪೋಟಿ ನಡೆಸಿದ್ದ ಭವಾನಿ ರೇವಣ್ಣ ಅವರು ಚುನಾವಣೆ ಘೋಷಣೆಗೂ ಮುನ್ನವೇ ಕಾರ್ಯಕ್ರಮವೊಂದರಲ್ಲಿ ನಾನೇ ಅಭ್ಯರ್ಥಿಯಾಗಲಿದ್ದೇನೆ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಮೂಲಕ ಟಿಕೆಟ್ ಗೊಂದಲಕ್ಕೆ ಕಿಡಿ ಹೊತ್ತಿಸಿದ್ದರು. ಜೊತೆಗೆ ತಮ್ಮ ಕುಟುಂಬದೊಂದಿಗೆ ಮೂರು ದಿನಗಳ ಕಾಲ ಬಿಡುವಿಲ್ಲದಂತೆ ಪ್ರತಿ ಗ್ರಾಮ ಪಂಚಾಯಿತಿವಾರು ಚುನಾವಣೆ ಪ್ರಚಾರ ನಡೆಸುವ ಮೂಲಕ ತಾವೇ ಅಭ್ಯರ್ಥಿ ಎಂದು ಬಿಂಬಿಸಿಕೊಂಡಿದ್ದರು.
ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.. ಬೀದರ್ನ ಔರಾದ್ ಮೀಸಲು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.. ಈ ವೇಳೆ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು..
Karnataka Election 2023: ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕೆಲವರ ಹೆಸರನ್ನು ಕೈ ಬಿಟ್ಟಿರುವುದರಿಂದ ಹೆಚ್ಚಿನ ಶಾಸಕರು ಬಿಜೆಪಿಗೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷ ತೊರೆದ ನಾಯಕರ ಪಟ್ಟಿ ಇಲ್ಲಿದೆ ನೋಡಿ..
ಲಕ್ಷ್ಮಣ್ ಸವದಿ ಪಕ್ಷಾಂತರ ಕುರಿತು ಎಂ. ಪಿ. ರೇಣುಕಾಚಾರ್ಯ ಗುಡುಗಿದ್ದಾರೆ. ಪಕ್ಷ ತೊರೆದಿರುವ ಲಕ್ಷ್ಮಣ್ ಸವದಿ ಒಬ್ಬ ವಿಶ್ವಾಸಘಾತುಕ, ಬೆನ್ನಿಗೆ ಚೂರಿ ಹಾಕುವವನು, ಅಥಣಿಯಲ್ಲಿ ಲಕ್ಷ್ಮಣ ಸವದಿ ಗೆಲ್ಲಲಿಲ್ಲ, ಸೋತು ಸುಣ್ಣವಾದರು ಸಹ ಪಕ್ಷ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿತ್ತು ಎಂದು ಹೇಳಿದರು.
ಟಿಕೆಟ್ ಆಕಾಂಕ್ಷಿಗಳಲ್ಲೇ ರುದ್ರೇಶ್ ಹೆಚ್ಚು ಪ್ರಬಲವಾಗಿ ಗುರುತಿಸಿಕೊಂಡಿದ್ದರು, ಬಳಿಕ ಬಂಡಾಯ ಬಾವುಟ ಹಾರಿಸಿದ್ದರು. ಸೋಮಣ್ಣ ವಿರುದ್ದ ಸಾಲುಸಾಲು ಆರೋಪ ಮಾಡಿದ್ದರಿಂದ ಗರಂಗೊಂಡ ಅರುಣ್ ಸೋಮಣ್ಣ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರಿದ್ದರು. ರುದ್ರೇಶ್ಗೆ ಬಿಎಸ್ವೈ ಫೋನಾಯಿಸಿ ಪಕ್ಷ ಸಂಘಟನೆಗೆ ಒಡಕು ಮೂಡಿಸಬಾರದು, ಅಭ್ಯರ್ಥಿ ವಿರುದ್ಧ ಮಾತನಾಡಬಾರದು ಎಂದು ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯ ಬಿಜೆಪಿ ಇಂದು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಮಾಜಿ ಸಿಎಂ ಮತ್ತು ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ತಮ್ಮ ಹಾಲಿ ಕ್ಷೇತ್ರವಾದ ಹುಬ್ಬಳ್ಳಿ-ಧಾರವಾಡ (ಕೇಂದ್ರ) ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.