Karnataka Assembly Election: ಬಿಜೆಪಿ ಹಾಗೂ ನಿಮ್ಮ ಪಟ್ಟಿ ನೋಡಿದರೆ ಅಲೆ ಯಾರ ಪರವಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, 'ನಮ್ಮ ಪಕ್ಷ ಮುಂದಿನ ಚುನಾವಣೆಯಲ್ಲಿ 141 ಕ್ಷೇತ್ರಗಳನ್ನು ಗೆಲ್ಲುವುದು ಖಚಿತ. ಬಿಜೆಪಿ 65-70 ಕ್ಷೇತ್ರಗಳನ್ನು ಗೆಲ್ಲಲಿದೆ' ಎಂದು ತಿಳಿಸಿದರು.
Karnataka Assembly Election: ರಾಜ್ಯದ 189 ಸ್ಥಳಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಎಲ್ಲರೂ ಬಹುಮತದಿಂದ ಆಯ್ಕೆಯಾಗಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ, ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಒಮ್ಮತದ ಸ್ವಾಗತ ದೊರೆತಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಿಜೆಪಿ ಪಕ್ಷಕ್ಕೆ ಪ್ರತಿಯೊಬ್ಬ ಕಾರ್ಯಕರ್ತರು ಮುಖ್ಯ. ಕಾರ್ಯಕರ್ತರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಬೇಕು. ಬಿಜೆಪಿ ಹೈಕಮಾಂಡ್ಗೆ ಪ್ರಕಾಶ್ ಶೃಂಗೇರಿ ಮನವಿ. ಪ್ರಕಾಶ್ ಶೃಂಗೇರಿ, ರಾಜ್ಯ ಬಿಜೆಪಿ ಕಾರ್ಯಕರ್ತ. ಎರಡನೇ ಹಂತದ ನಾಯಕರಿಗೆ ಸಮಾನ ಅವಕಾಶ ನೀಡಿ. ಚುನಾವಣೆಯಲ್ಲಿ ಸ್ಪರ್ಧಿಸಲು ಸಮಾನ ಅವಕಾಶ ನೀಡಲು ಮನವಿ.
ನಕಲಿ ಜಾತಿ ಪ್ರಮಾಣಪತ್ರ ಪಡೆದು ಚುನಾವಣೆ ಸ್ಫರ್ಧೆ ಆರೋಪ. ಸಿದ್ದರಾಮಯ್ಯ ಆಪ್ತನ ಸೊಸೆ ವಿರುದ್ಧ ಗಂಭೀರ ಆರೋಪ. ನಕಲಿ ಎಸ್/ಟಿ ಜಾತಿ ಸರ್ಟಿಫಿಕೇಟ್ ಪಡೆದ ಸೌಲಭ್ಯ ಬಳಕೆ. ಎಂ ಈರಣ್ಣನ ಸೊಸೆ ಡಾ. ತನುಶ್ರೀ ಎಮ್. ಮೇತ್ರಿ @ ಪ್ರೀತಿ. ಈ ಬಾರಿ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ತನುಶ್ರೀ. ಈ ಬಾರಿ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ತನುಶ್ರೀ.
ಕಾಂಗ್ರೆಸ್ ಇಷ್ಟ ಇಲ್ಲದಿದ್ರೆ ಚಿಹ್ನೆ ಮುಚ್ಚಿ ನನಗೆ ವೋಟ್ ಹಾಕಿ ಎಂದು ಮಾಜಿ ಶಾಸಕ ರಮೇಶ್ ಬಾಬು ವಿವಾದಾತ್ಮಕ ಹೇಳಿಕೆ. ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು. ಜೆಡಿಎಸ್ ಕಾರ್ಯಕರ್ತರ ಮನವೊಲಿಕೆಗೆ ಮುಂದಾಗಿದ್ದ ರಮೇಶ್. ಪ್ರಚಾರದ ವೇಳೆ ಮಾಜಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ.
ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ. ಕಮಲ ಕಲಿಗಳಿಗೆ ಹೆಚ್ಚಾಯ್ತು ಟಿಕೆಟ್ ಢವ ಢವ. ಯಡಿಯೂರಪ್ಪ ನಿವಾಸಕ್ಕೆ ಆಕಾಂಕ್ಷಿಗಳ ದಂಡು. ಅಂತಿಮ ಹಂತದ ಕಸರತ್ತು ನಡೆಸಲು ಸಕಲ ಯತ್ನ. ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಆಗಮನ. ಮಾಜಿ ಸಚಿವ ಸುರೇಶ್ ಕುಮಾರ್ ಆಗಮನ. ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಆಗಮನ.
ಟಿಕೆಟ್ ಘೋಷಣೆ ಬಳಿಕ ಅಸಮಾಧಾನ ಶಮನಕ್ಕೆ ವಿಶೇಷ ತಂಡ. ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿರುವ ಹೈಕಮಾಂಡ್. ಅಸಮಾಧಾನ, ಬಂಡಾಯವೇಳದಂತೆ ಜಾಗ್ರತೆ ವಹಿಸಲು ಸೂಚನೆ. ವಿಶೇಷ ಟೀಂವೊಂದನ್ನ ಸೆಟ್ ಮಾಡಿ ಎಂದಿರೋ ಹೈಕಮಾಂಡ್. ಬಿಜೆಪಿ ಸರಣಿ ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಮುಖ ಪ್ರಸ್ತಾಪ.
ಕೆಎಂಎಫ್ ಆಪೋಷನಕ್ಕೆ ಕೇಂದ್ರ ಬಿಜೆಪಿ ಸರಕಾರ ಮೂರನೇ ಸಂಚು ರೂಪಿಸಿದೆ ಎಂದು ಗಂಭೀರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; 2008ರಲ್ಲಿಯೇ ನಂದಿನಿಯನ್ನು ಮುಗಿಸಲು ಬಿಜೆಪಿ ಹೊರಟಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಕಾಂಗ್ರೆಸ್ ಎರಡನೇ ಪಟ್ಟಿಗೆ ಕೌಂಟ್ಡೌನ್ ಶುರು. ಇಂದು ಬೆಳಗ್ಗೆ 11ಗಂಟೆ ಒಳಗೆ 2ನೇ ಪಟ್ಟಿ ರಿಲೀಸ್ ಸಾಧ್ಯತೆ. ದೆಹಲಿಯಲ್ಲೇ ಠಿಕಾಣಿ ಹೂಡಿರುವ ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ಗೆ ʻಕೈʼ ಸರ್ಕಸ್. ಇಂದು ಮತ್ತೊಂದು ಸುತ್ತಿನ ಸಭೆ ಮಾಡಿ ಪಟ್ಟಿ ಫೈನಲ್.
ಈಗಾಗಲೇ ಸ್ಕ್ರೀನಿಂಗ್ ಕಮಿಟಿ ಮೀಟಿಂಗ್ ಮುಗಿದಿದೆ. ಟಿಕೆಟ್ ಸಂಬಂಧ ಸ್ಕ್ರೀನಿಂಗ್ ಕಮಿಟಿ, ಸಿಇಸಿ ಸಭೆ ಆಗಿದೆ. ಮಧ್ಯಾಹ್ನ ಮತ್ತೊಂದು ಸಭೆ ನಡೆಸಿ ಚರ್ಚೆ ಮಾಡುತ್ತೇವೆ ಎಂದು ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ರು.
Assembly Election Congress Second List: ಕೊಳ್ಳೇಗಾಲ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುವ ಮೂಲಕ ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಕೈ ಟಿಕೆಟ್ ಫೈನಲ್ ಆದಂತಾಗಿದೆ. ಮೊದಲ ಪಟ್ಟಿಯಲ್ಲಿ ಚಾಮರಾಜನಗರದಿಂದ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹನೂರುನಿಂದ ಹಾಲಿ ಶಾಸಕ ಆರ್.ನರೇಂದ್ರ ಹಾಗೂ ಗುಂಡ್ಲುಪೇಟೆಯಿಂದ ಗಣೇಶ್ ಪ್ರಸಾದ್ ಅವರನ್ನು ಘೋಷಣೆ ಮಾಡಲಾಗಿತ್ತು.
Karnataka Assembly Election: 224 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲವು ಕ್ಷೇತ್ರಗಳಲಿ 15 ರಿಂದ 20 ಆಕಾಂಕ್ಷಿಗಳ ಪಟ್ಟಿ ಇತ್ತು. ಅವುಗಳನ್ನೆಲ್ಲ ಫಿಲ್ಟರ್ ಮಾಡಿ ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಿಫಾರಸು ಮಾಡಿರುವ ರಾಜ್ಯ ಚುನಾವಣಾ ಕಮಿಟಿ ಬಹುತೇಕ ಎಲ್ಲಾ ಹಾಲಿ ಶಾಸಕರ ಹೆಸರನ್ನೂ ಕೂಡ ಈ ಪಟ್ಟಿಯಲ್ಲಿ ಸೇರಿಸಿದೆ.
ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ BJP Karnataka ಸರಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಚುನಾವಣಾ ಪ್ರಚಾರದ ಜೊತೆಗೆ ಸಾರ್ವಜನಿಕರ ಆರೋಗ್ಯ ತಪಾಸಣೆ. ಚುನಾವಣಾ ಪ್ರಚಾರದ ಕಾರವಾನ್ ಗಳಲ್ಲಿ ಹೋಗಿ ರೋಗಿಗಳ ಪರೀಕ್ಷೆ. ಇಂತಹ ಒಂದು ವಿಶಿಷ್ಟ ಪ್ರಯೋಗಕ್ಕೆ ನಗರ ಸಾಕ್ಷಿಯಾಗುತ್ತಿದೆ.
ಬಿಜೆಪಿ ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ. ಮಂಡಲ್ ಕಮಿಷನ್ ವರದಿ, ಉನ್ನತ ಶಿಕ್ಷಣದಲ್ಲಿ ಮೀಸಲಾತಿ ನೀಡುವುದನ್ನು ವಿರೋಧ ಮಾಡಿದ್ದು ಬಿಜೆಪಿಯವರೇ. ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ತಂದಾಗ ಅದನ್ನು ವಿರೋಧಿಸಿ ರಾಮಾ ಜೋಯಿಸ್ ಅವರು ಸುಪ್ರೀಂ ಕೋರ್ಟ್ ಗೆ ಹೋಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.