ರಾಜ್ಯ ಉಪಾಧ್ಯಕ್ಷರಾಗಿ ಮುರುಗೇಶ್ ನಿರಾಣಿ, ಬೈರತಿ ಬಸವರಾಜ್ N.ಮಹೇಶ್, ಅನೀಲ್ ಬೆನೆಕೆ ಹರತಾಳ ಹಾಲಪ್ಪಗೆ ಮಣೆ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಮಂಜುಳಾ BJP ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ್ ಮುನಿರಾಜು
ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಫೇಕ್ ನ್ಯೂಸ್ ಗಳ ಸೃಷ್ಟಿ ಮತ್ತು ಪ್ರಸಾರವನ್ನೇ ನಂಬಿ ರಾಜಕಾರಣ ಮಾಡುವ ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ,ನರೇಂದ್ರ ಮೋದಿ ಅವರು ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ 'ಫೇಕ್ ನ್ಯೂಸ್ ಪೆಡ್ಲರ್ಗಳಾದ ಸಿಟಿ ರವಿ ಮತ್ತು ಅಶ್ವತ್ಥ ನಾರಾಯಣ ಅವರನ್ನು ಪಕ್ಷದಿಂದ ಆಚೆಗಟ್ಟಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತ ದೇಶದಲ್ಲಿ ಶೇ.90 ರಷ್ಟು ಸಂಪತ್ತು ಕೇವಲ ಶೇ.10 ರಷ್ಟು ಜನರಲ್ಲಿ ಕೇಂದ್ರಿಕೃತವಾಗಿದೆ. ಸಮಾಜದಲ್ಲಿ ಅಸಮಾನತೆ ಬೇರೂರಿದೆ. ಇದನ್ನು ತೊಲಗಿಸಲು ಡಾ.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಒತ್ತಿ ಹೇಳಿದ್ದಾರೆ. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವುದೇ ಸರ್ಕಾರಗಳ ಕರ್ತವ್ಯವಾಗಿದೆ. ನಮ್ಮ ಸರ್ಕಾರವು ಬಸವಣ್ಣನವರ ಕಾಯಕ, ದಾಸೋಹ ಮತ್ತು ಸಾಮಾಜಿಕ ನ್ಯಾಯ ತತ್ವದಲ್ಲಿ ನಂಬಿಕೆ ಇಟ್ಟು ಅದರಂತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು.
ಅನೇಕ ಹೋರಾಟಗಾರರ ತ್ಯಾಗ, ಬಲಿದಾನದ ಪ್ರತಿಫಲವಾಗಿ ಕರ್ನಾಟಕ ರಾಜ್ಯ ಏಕೀಕೃತವಾಗಿದೆ. ಅಭಿವೃದ್ಧಿಯ ಹಿನ್ನಡೆಯಲ್ಲಿ ರಾಜ್ಯ ಪ್ರತ್ಯೇಕತೆ ಬಗ್ಗೆ ಮಾತನಾಡುವುದು ಅಂತಹ ಮಹನೀಯರಿಗೆ ಅಪಮಾನ ಮಾಡಿದಂತೆ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು. ರಾಜ್ಯ ಸರ್ಕಾರವು ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು. ವಿಧಾನಮಂಡಲ ಅಧಿವೇಶನವು ವಿದ್ಯಾರ್ಥಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸುವ ಎಲ್ಲರಿಗೂ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಜ್ಞಾನ ನೀಡುತ್ತದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.
ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಇಡೀ ದೇಶದಲ್ಲಿ ಜಾತಿ ಗಣತಿಗೆ ಕಾಂಗ್ರೆಸ್ ಬದ್ದವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಂತ ಶ್ರೇಷ್ಠ ಕನಕದಾಸ ಜಯಂತಿಯನ್ನು ಉದ್ಘಾಟಿಸಿ ಸಮಾಜ ಸೇವಕ ದಿವಂಗತ ಲಿಂಗಪ್ಪ ಅವರಿಗೆ ಮರಣೋತ್ತರ ಕನಕಶ್ರೀ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದರು.
ಗುಡುಗು, ಸಿಡಿಲು, ಮಳೆ, ಬಿರುಗಾಳಿ ಏನೇ ಬಂದರೂ ಪಕ್ಷದ ಹಿರಿಯರಾದ ಯಡಿಯೂರಪ್ಪ, ಈಶ್ವರಪ್ಪ ಮತ್ತಿತರ ರಾಜ್ಯದ ಎಲ್ಲ ಹಿರಿಯರ ಆಶೀರ್ವಾದ, ಕಾರ್ಯಕರ್ತರ ನೆರವಿನಿಂದ ಬಿಜೆಪಿ ಎಂಬ ವಿಮಾನವನ್ನು ಸೇಫ್ ಆಗಿ ಲ್ಯಾಂಡ್ ಮಾಡಲಿದ್ದೇನೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ತಿಳಿಸಿದರು.
ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ನಾಳೆ ಬೆಳಿಗ್ಗೆ 9.30 ರಿಂದ ನಡೆಯಲಿರುವ ರಾಜ್ಯಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜನರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹರಿಸಲಿದ್ದಾರೆ.
ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.
ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹೀಗೆ ಎಲ್ಲ ಅವಕಾಶ ವಂಚಿತರಿಗೆ ಶಕ್ತಿ ತುಂಬುವುದೇ ನಿಜವಾದ ಸ್ವಾತಂತ್ರ್ಯದ ಅರ್ಥ. ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಅವಕಾಶ ವಂಚಿತರಿಗಾಗಿ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಷಿಯಲ್ ಜಸ್ಟೀಸ್ ಫೌಂಡೇಶನ್ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಡಾ. ಹರೀಶ್ ಕುಮಾರ್ ಅವರ “ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್ ಮತ್ತು ಬಾಬೂಜಿ ಚಿತ್ರ ಸಂಪುಟ” ಕೃತಿಯನ್ನು ಬಿಡುಗಡೆಗೊಳಿಸಿ, ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.