ನ. 13ರವರೆಗೂ ಮಳೆ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.. ಉ.ಕ, ದ.ಕ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮುಂತಾದೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ.. ಬೆಳ್ತಂಗಡಿ, ಸುಳ್ಯ, ಕುಂದಾಪುರ, ಧರ್ಮಸ್ಥಳದಲ್ಲಿ ಅತ್ಯಧಿಕ ಮಳೆ..
ಮಳೆ ಹಾಗೂ ವಿದ್ಯುತ್ ಏಕ ಕಾಲಕ್ಕೆ ಕೈ ಕೊಟ್ಟ ಪರಿಣಾಮ.... ಬೆಳೆ ಉಳಿಸಿಕೊಳ್ಳಲು ಕೆರೆ, ತಗ್ಗು, ಹಳ್ಳಗಳಲ್ಲಿನ ನೀರಿಗೆ ಮೊರೆ... ನೀರು ಎತ್ತಲು ಬೇಕಾದ ಪಂಪ್ಸೆಟ್ಗಳಿಗೆ ಭಾರೀ ಡಿಮ್ಯಾಂಡ್
ಕಾವೇರಿ ಹೋರಾಟದ ನಡುವೆ ಜನರ ಆತಂಕ ದೂರ.. KRS ಜಲಾನಯನ ಪ್ರದೇಶದಲ್ಲಿ ಮಳೆರಾಯನ ಕೃಪೆ.. ನದಿಯ ಒಳ ಹರಿವಿನ ಪ್ರಮಾಣದಲ್ಲಿ ಕೊಂಚ ಏರಿಕೆ.. ಡ್ಯಾಂಗೆ 3 ದಿನದಿಂದ ಹರಿದು ಬರುತ್ತಿರುವ ನೀರು.. ಅಣೆಕಟ್ಟೆಯ ನೀರಿನ ಪ್ರಮಾಣದಲ್ಲೂ ಏರಿಕೆ
ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ವರುಣನ ಆರ್ಭಟ ಕೊಂಚ ತಣ್ಣಗಾಗಿದೆ. ಮುಂದಿನ 3 ದಿನಗಳಲ್ಲಿ ಮಳೆ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ರೆ 20 ದಿನಗಳಿಂದ ಸುರಿದ ಭಾರೀ ಮಳೆಗೆ ನದಿಗಳು ಭೋರ್ಗರೆಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಸಿವೆ... ಸಾವಿರಾರು ಎಕರೆ ಜಮೀನು ನೀರುಪಾಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಮಳೆಯಾಗ್ತಿದ್ದು ಬಂಟ್ಟಾಳದ ಹಳೆಯಂಗಡಿ ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಗುಡ್ಡ ಕುಸಿದಿದ್ದು, ಧರ್ಮಸ್ಥಳ ಬೆಳ್ತಂಗಡಿ ಮಂಗಳೂರು ಸಂಪರ್ಕ ತಾತ್ಕಾಲಿಕ ಸ್ಥಗಿತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.