ಕಾಶ್ಮೀರ ಸಮಸ್ಯೆಯನ್ನು ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯವಾಗಿ ಬಗೆಹರಿಸಬೇಕಿದೆ ಎಂದು ಪುನರುಚ್ಚರಿಸಿದ ರಷ್ಯಾ ದಕ್ಷಿಣ ಏಷ್ಯಾದ ಎರಡೂ ದೇಶಗಳು ಮಧ್ಯಸ್ಥಿಕೆ ಕೇಳದ ಹೊರತು ಈ ವಿಷಯದಲ್ಲಿ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದಾರೆ.
ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಅಲ್ಲಿನ ಲಕ್ಷಾಂತರ ಜನರಿಗೆ ಮೂಲಭೂತ ಹಕ್ಕುಗಳನ್ನು ನಿರಾಕರಿಸಿದ್ದಕ್ಕೆ ಬೇಸತ್ತು ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ರಾಜೀನಾಮೆ ನೀಡಿದ್ದಾರೆ.
ಕಾಶ್ಮೀರದ ಕುರಿತ ಕೇಂದ್ರದ ಇತ್ತೀಚಿನ ನಿರ್ಧಾರವನ್ನು ಸ್ವಾಗತಿಸಿರುವ ಪ್ರಿಯಾಂಕಾ ಚೋಪ್ರಾ ಅವರ ನಿಲುವು ಭಾರತೀಯ ದೃಷ್ಟಿಕೋನವನ್ನು ಹೊಂದಿವೆ ಎಂದು ಜಾವೇದ್ ಅಖ್ತರ್ ಹೇಳಿದ್ದಾರೆ.ಯುಎನ್ ಶಾಂತಿಯ ರಾಯಭಾರಿಯಾಗಿ ಚೋಪ್ರಾ ಅವರು ಕಾಶ್ಮೀರ ಕುರಿತ ಭಾರತ ಸರ್ಕಾರದ ನಿರ್ಧಾರವನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿ ಅವರನ್ನು ತೆಗೆದುಹಾಕಬೇಕೆಂದು ಪಾಕಿಸ್ತಾನದ ಸಚಿವರು ಬೇಡಿಕೆ ಇಟ್ಟಿದ್ದಾರೆ.
ಜೆ & ಕೆ ಪೀಪಲ್ಸ್ ಮೂವ್ಮೆಂಟ್ (ಜೆಕೆಪಿಎಂ) ಅಧ್ಯಕ್ಷ ಶಾ ಫಾಸಲ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡು ಕಾಶ್ಮೀರಕ್ಕೆ ವಾಪಸ್ ಕಳುಹಿಸಿದಾಗ, ಅವರು ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ ತೆರಳುತ್ತಿದ್ದರು ಎನ್ನುವ ಅಂಶ ಈಗ ಬೆಳಕಿಗೆ ಬಂದಿದೆ.
ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯ ಸಂಪೂರ್ಣವಾಗಿ ಆಂತರಿಕ ಎಂದು ಭಾರತ ಮತ್ತೆ ಸ್ಪಷ್ಟಪಡಿಸಿದೆ.ಈ ವಿಚಾರವಾಗಿ ಚರ್ಚಿಸಲು ಕರೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯ ನಂತರ ಭಾರತದ ಈ ಹೇಳಿಕೆ ಬಂದಿದೆ.
ಆಗಸ್ಟ್ 19 ರಿಂದ ಕಾಶ್ಮೀರದ ಎಲ್ಲಾ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಮತ್ತೆ ಆರಂಭವಾಗಲಿವೆ ಎಂದು ಜಮ್ಮು ಮತ್ತು ಕಾಶ್ಮೀರ ಆಡಳಿತದ ಮೂಲಗಳು ತಿಳಿಸಿವೆ.ಈ ಮೊದಲು ಜೆ & ಕೆ ಗವರ್ನರ್ ಸತ್ಯ ಪಾಲ್ ಮಲಿಕ್ ಅವರು ಶ್ರೀನಗರದ ಸಿವಿಲ್ ಸೆಕ್ರೆಟರಿಯಟ್ ಮತ್ತು ಎಲ್ಲಾ ಸರ್ಕಾರಿ ಕಚೇರಿಗಳನ್ನು ಇಂದಿನಿಂದ ಪುನರಾರಂಭಿಸುವಂತೆ ನಿರ್ದೇಶಿಸಿದ್ದರು.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿ ಪಾಕಿಸ್ತಾನ ಈಗ ಚೀನಾದ ಬೆಂಬಲದೊಂದಿಗೆ ವಿಶ್ವಸಂಸ್ಥೆ ಬಳಿ ಹೋಗುವುದಾಗಿ ಪಾಕಿಸ್ತಾನ ಹೇಳಿದೆ.
ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸುವ ಬಗ್ಗೆ ಪ್ರಸ್ತಾಪ ಮಂಡನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ ವಿರೋಧ ಪಕ್ಷಗಳ ಸದಸ್ಯರಿಂದ ಗದ್ದಲ, ಕೋಲಾಹಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.