ಜೂನ್ 6ರಿಂದ ಭಾರತ ಮತ್ತು ಚೀನಾ ದೇಶಗಳ ಸೇನಾ ಅಧಿಕಾರಿಗಳು ಹಾಗೂ ವಿದೇಶಾಂಗ ಇಲಾಖೆಯ ಕಾರ್ಯದರ್ಶಿಗಳ ಮಟ್ಟದ ಸಭೆ ನಡೆಯುತ್ತಿದ್ದವು. ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನತೆಯನ್ನು ಉಪಶಮನ ಮಾಡುವ ಬಗ್ಗೆ ಚರ್ಚೆ ಆಗುತ್ತಿದ್ದವು.
ಗಡಿ ರೇಖೆಯ ಉದ್ದಕ್ಕೂ ಪರಿಸ್ಥಿತಿಯನ್ನು ಸರಾಗಗೊಳಿಸುವ ಉದ್ದೇಶದಿಂದ ಜೂನ್ 6 ರಂದು ಉಭಯ ದೇಶಗಳ ಹಿರಿಯ ಮಿಲಿಟರಿ ಅಧಿಕಾರಿಗಳು ತಲುಪಿದ ಸಕಾರಾತ್ಮಕ ಒಮ್ಮತವನ್ನು ಭಾರತೀಯ ಮತ್ತು ಚೀನಾದ ಪಡೆಗಳು ಜಾರಿಗೆ ತರಲು ಪ್ರಾರಂಭಿಸಿವೆ ಎಂದು ಚೀನಾ ಇಂದು ಹೇಳಿದೆ.
ವಿವಿಧ ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಶಾಂತಿಯುತವಾಗಿ ಪರಿಹರಿಸಲು" ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ವಿದೇಶಾಂಗ ಸಚಿವಾಲಯ ಇಂದು ತಿಳಿಸಿದೆ. ಪೂರ್ವ ಲಡಾಕ್ನ ಎಲ್ಎಸಿ ಯ ಚೀನಾದ ಬದಿಯಲ್ಲಿರುವ ಮಾಲ್ಡೊದ ಶನಿವಾರ ಸಭೆ ನಡೆಯಿತು.
ನವದೆಹಲಿ: ಭಾರತ ಮತ್ತು ಚೀನಾ ಶುಕ್ರವಾರ ಪೂರ್ವ ಲಡಾಕ್ (Ladakh)ನಲ್ಲಿ ತಮ್ಮ ಮಿಲಿಟರಿ ನಿಲುಗಡೆ ಕುರಿತು ರಾಜತಾಂತ್ರಿಕ ಮಾತುಕತೆ ನಡೆಸಿ, ಪರಸ್ಪರರ ಸೂಕ್ಷ್ಮತೆ, ಕಳವಳಗಳು ಮತ್ತು ಆಕಾಂಕ್ಷೆಗಳನ್ನು ಗೌರವಿಸುವಾಗ ಶಾಂತಿಯುತ ಚರ್ಚೆಗಳ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ನಿಭಾಯಿಸಲು ಒಪ್ಪಿಕೊಂಡಿವೆ.
ವಾಟ್ಸಾಪ್ ಗುಂಪುಗಳನ್ನು ನಡೆಸುತ್ತಿರುವ ಅಡ್ಮಿನ್ ಗಳು ಲೇಹ್ ಮತ್ತು ಕಾರ್ಗಿಲ್ ಎಂಬ ಅವಳಿ ಜಿಲ್ಲೆಗಳಲ್ಲಿನ ಪೊಲೀಸ್ ಠಾಣೆಗಳಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳುವಂತೆ ಹೊಸದಾಗಿ ರೂಪುಗೊಂಡ ಕೇಂದ್ರ ಪ್ರದೇಶವಾದ ಲಡಾಖ್ ನಲ್ಲಿರುವ ಪೊಲೀಸರು ಒತ್ತಾಯಿಸಿದ್ದಾರೆ.
ಚೀನಾ ಮತ್ತು ಪಾಕಿಸ್ತಾನ ಎರಡೂ ಗಡಿ ಹಂಚಿಕೆ ಪ್ರದೇಶಗಳಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಂದಿನ ವಾರ ಲೇಹ್ಗೆ ಭೇಟಿ ನೀಡುವ ಸಾಧ್ಯತೆ ಇದೆ.
ಭಾರತ ಕಾಶ್ಮಿರಕ್ಕೆ ವಿಶೇಷ ಸ್ಥಾನ ಕಲ್ಪಿಸುತ್ತಿದ್ದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಈಗ ಪಾಕಿಸ್ತಾನದ ಪಡೆಗಳು ಲಡಾಖ್ಗೆ ಸಮೀಪವಿರುವ ತಮ್ಮ ನೆಲೆಗಳಿಗೆ ಉಪಕರಣಗಳನ್ನು ಸಾಗಿಸಲು ಪ್ರಾರಂಭಿಸಿವೆ ಎನ್ನಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ತಮ್ಮ ಕಂಪನಿಯು ಜಮ್ಮು ಮತ್ತು ಕಾಶ್ಮೀರ ಮತ್ತು ಇತ್ತೀಚೆಗೆ ರಚನೆಯಾದ ಎರಡು ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್ ಕುರಿತಾಗಿ ಹಲವು ಯೋಜನೆಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಸರ್ಕಾರ ಏಕಪಕ್ಷೀಯವಾಗಿ ಕಾಶ್ಮೀರವನ್ನು ಹರಿದುಹಾಕಿದ್ದರಿಂದ ಅಲ್ಲಿನ ಚುನಾಯಿತ ಪ್ರತಿನಿಧಿಗಳನ್ನು ಬಂಧಿಸಿದ್ದರಿಂದ, ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದ್ದರಿಂದ ರಾಷ್ಟ್ರೀಯ ಏಕತೆ ವೃದ್ಧಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.