ಈ ವರ್ಷದ ಕ್ರೈಂ ಲೋಕದಲ್ಲಿ ಸ್ಟೂಡೆಂಟ್, ಬಿಸಿನೆಸ್ ಸೇರಿ ವಿವಿಧ ವೀಸಾದಡಿ ಭಾರತಕ್ಕೆ ಬರುವ ವಿದೇಶಿಯರು ಡ್ರಗ್ಸ್ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗಿದೆ. ಜೊತೆಗೆ ಸೈಬರ್ ಕ್ರೈಂ, ಗಡುವು ಮೀರಿ ಅಕ್ರಮ ವಾಸ ಸೇರಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಕಳೆದ 11 ತಿಂಗಳಲ್ಲಿ 3398 ಕೇಸ್ ಗಳಲ್ಲಿ 4480 ಆರೋಪಿಗಳನ್ನ ಬಂಧಿಸಲಾಗಿದೆ.
ರೂಮ್ ಕೊಡಿಸುವುದಾಗಿ ನಂಬಿಸಿ ಅಪರಿತನೊಂದಿಗೆ ಮೂರು-ನಾಲ್ಕು ದಿನಗಳ ಕಾಲ ವಾಸ್ತವ್ಯ ಹೂಡಿರುವಾಗ ತನ್ನ ಮೇಲೆ ಆತ್ಯಾಚಾರಕ್ಕೆ ಯತ್ನಿಸಿರುವುದಾಗಿ ಯುವತಿ ಆರೋಪದ ಹಿನ್ನೆಲೆ ತಮಿಳುನಾಡು ಮೂಲದ ಆರೋಪಿಯನ್ನು ಕಾಡುಗುಡಿ ಪೊಲೀಸರು ಬಂಧಿಸಿದ್ದಾರೆ.
14 ವರ್ಷದ ವಿಕಲಚೇತನ ಮಗಳನ್ನ ಹೆತ್ತ ತಾಯಿಯೇ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಾಂಕಾ ತಾಯಿಯಿಂದ ಹತ್ಯೆಯಾದ ಮಗಳಾಗಿದ್ದಾಳೆ. ಮಗಳನ್ನು ಕೊಂದು ತಾಯಿ ಸುಮಾ ಸದ್ಯ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾಳೆ.
ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಇಂದು ಬೆಳಿಗ್ಗೆ 5:30 ರ ಸುಮಾರಿಗೆ 18 ವರ್ಷದ ಮಹಿಳೆಯನ್ನು ನಾಟಕೀಯವಾಗಿ ಅಪಹರಿಸಿ ಕಾರಿನಲ್ಲಿ ಕರೆದುಕೊಂಡಿದ್ದಾರೆ.ಆಕೆ ತಂದೆಯೊಂದಿಗೆ ದೇವಸ್ತಾನಕ್ಕೆ ಹೋಗಿದ್ದಳು ಎನ್ನಲಾಗಿದೆ.ವಾಪಸ್ ಬರುವಾಗ ಅವರು ಅಪಹರಿಸಿದ್ದಾರೆ.
ಗಾಂಜಾ ದಂಧೆಕೋರರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ಸ್ಪೆಕ್ಟರ್ ಶ್ರೀಮಂತ ಇಲ್ಲಾಳ್ ಇನ್ನೂ ಚೇತರಿಕೆ ಕಂಡಿಲ್ಲ. ಮೂರು ತಿಂಗಳಿನಿಂದಲೂ ಓಲ್ಡ್ ಏರ್ಪೋರ್ಟ್ ರಸ್ತೆಯ ಖಾಸಗಿ ಅಸ್ಪತ್ರೆಯ ಐಸಿಯುನಲ್ಲಿ ಶ್ರೀಮಂತ ಇಲ್ಲಾಳ್ ಗೆ ಚಿಕಿತ್ಸೆ ಮುಂದುವರೆದಿದ್ದು ಅರೆ ಪ್ರಜ್ಞಾವಸ್ತೆಯಲ್ಲಿದ್ದಾರೆ.
ಅವರು ಜೋಡಿ ಹಕ್ಕಿಯಂತಿದ್ದ ದಂಪತಿ. ಬಾಲ್ಯದಿಂದಲೂ ಒಂದೇ ಶಾಲೆಯಲ್ಲಿ ಕಲಿತ ಸಹಪಾಠಿಗಳು. ಚಿಕ್ಕಂದಿನಿಂದ ಒಟ್ಟೋಟ್ಟಿಗೆ ಆಡಿ ಬೆಳೆದವರು. ವರ್ಷಗಟ್ಟಲೇ ಪ್ರೀತಿಸಿ ಪೋಷಕರ ಒಪ್ಪಿಗೆ ಪಡೆದು ಕಳೆದೆರಡು ವರ್ಷಗ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.ಆದರೆ ಸಣ್ಣ ಮನಸ್ತಾಪದಿಂದ ಪತ್ನಿ ಈಗ ಸಾವಿಗೆ ಶರಣಾಗಿದ್ದಾಳೆ.
₹ 1.90 ಕೋಟಿಯ ವಿಮೆ ಮೊತ್ತವನ್ನು ಪಡೆಯಲು ವ್ಯಕ್ತಿಯೊಬ್ಬ ಬಾಡಿಕೆ ಹಂತಕನೊಬ್ಬನನ್ನು ಬಳಸಿ ಅವಳು ಚಲಾಯಿಸುತ್ತಿದ್ದ ಮೋಟಾರ್ಸೈಕಲ್ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಇವರೆಲ್ಲ ಒಳ್ಳೆಯ ಪದವಿಧರರು , ಆದರೆ ಇವರು ಮಾಡುವ ಕೆಲಸ ಕೇಳಿದ್ರೆ ನೀವೆ ಛೀ..ಥೂ ಅಂತ ಉಗಿತೀರಾ.. ಯೆಸ್ ಮೈಕೈ ತುಂಬಿಕೊಂಡಿರೋ ದುಡಿಯೋದು ಬಿಟ್ಟು, ಈಗ ಮಾಡಬಾರದ್ದು ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿದ್ದೇನು ಅಂತೀರಾ...
ಮೊಘಲರ ಕಾಲದ್ದು ಎಂದು ಹೇಳಲಾಗುವ ಪುರಾತನ ಕಾಲದ ಆನೆದಂತದಿಂದ ಮಾಡಿರುವ ವಿವಿಧ ಶೈಲಿಯ ಬೆಲೆಬಾಳುವ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸಿದ್ದ ಆರೋಪಿಗಳನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಬಂಧಿಸಿದ್ದರಾರೆ. ಅನ್ಯ ರಾಜ್ಯದ ಇಬ್ಬರು ಸೇರಿ ಒಟ್ಟು ಆರು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದರಾರೆ.
ಲೈಟರ್ ವಾಪಸ್ ಕೊಡಲಿಲ್ಲ ಎಂದಿದ್ದಕ್ಕೆ ಲಾಂಗ್ ನ್ನೇ ಕೈಗೆತ್ತಿಕೊಂಡಿರುವ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ.ಜೂನ್ 5ರಂದು ಇಲ್ಲಿನ ನವ್ಯಾ ಬಾರ್ ಆ್ಯಂಡ್ ರೆಸ್ಟೋರೆಂಟಿನಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ
ಜನ ಯಾರಿಗೆ ಹೆದರುತ್ತಾರೋ ಇಲ್ಲವೋ ಗೊತ್ತಿಲ್ಲ. ನ್ಯಾಯಾಲಯಕ್ಕೆ ಪತರಗುಟ್ಟಿಹೋಗತ್ತಾರೆ.ಅಂಥದರಲ್ಲಿ ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿರೋ ಖತರ್ನಾಕ್ ಗ್ಯಾಂಗ್ ನ್ಯಾಯಾಂಗವನ್ನೇ ಯಾಮಾರಿಸೋ ಕೆಲಸವನ್ನು ಮಾಡಿದೆ.ಸಿಟಿ ಮಾರ್ಕೆಟ್ ಸರ್ಕಲ್ ನಲ್ಲಿ ಪೊಲೀಸರು ಏಪ್ರಿಲ್ 19 ರ ರಾತ್ರಿ ತಪಾಸಣೆ ಮಾಡುತ್ತಿದ್ದರು.ಈ ವೇಳೆ ಒರ್ವ ಪುರುಷ ಮತ್ತು ಮಹಿಳೆಯಿದ್ದ ಆಟೋ ತಪಾಸಣೆ ಮಾಡಿದ್ದಾರೆ.ಈ ವೇಳೆ ಆಟೋ ಚಾಲಕ ಇಳಿದು ಓಡಲು ಆರಂಭಿಸಿದ್ದಾನೆ.ಆಟೋಚಾಲಕನನ್ನು ಬೆನ್ನತ್ತಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆಟೋ ಪರಿಶೀಲನೆ ನಡೆಸಿದ್ದಾರೆ.
Bulli Bai App: ಬುಲ್ಲಿ ಬಾಯಿ ಅಪ್ಲಿಕೇಶನ್ (Bulli Bai App)ನಲ್ಲಿ ಟ್ವಿಟರ್ನ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಿಂದ ಕದ್ದ ಅನೇಕ ಮಹಿಳೆಯರ ಫೋಟೋಗಳನ್ನು ಹಾಕಲಾಗಿದೆ. ಈ ಅಪ್ಲಿಕೇಶನ್ನಲ್ಲಿ ಮಹಿಳೆಯರ ಆನ್ಲೈನ್ ಬಿಡ್ಡಿಂಗ್ ಮಾಡಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.