Karnataka Assembly Election 2023: ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ. ಎಲ್ಲಾ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Karnataka Assembly Election 2023: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಇಂದಿನಿಂದ ಒಟ್ಟು 7 ದಿನಗಳ ಕಾಲ ‘ಮತಬೇಟೆ’ಯ ದಂಡಯಾತ್ರೆ ನಡೆಸಲಿದ್ದಾರೆ. ಆಪ್ತರ ಜೊತೆಗೆ ಹೊಸ ಮುಖಗಳು ಮತ್ತು ಮಾಜಿ ಶಾಸಕರ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
Karnataka Assembly Election 2023: ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಹಳೇ ಬಸ್ ನಿಲ್ದಾಣದ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಿ ಬಿಜೆಪಿ ಭಾವುಟಗಳನ್ನು ಹಾಕಲಾಗಿದೆ.
Karnataka Assembly Election 2023: ಧಾರವಾಡ ಗ್ರಾಮೀಣ ಕ್ಷೇತ್ರದ ಪ್ರಭಾವಿ ನಾಯಕರಾಗಿದ್ದ ತವನಪ್ಪ ಅಷ್ಟಗಿ ಕೂಡ ಬಂಡಾಯದ ಬಾವುಟ ಹಾರಿಸಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
Karnataka Assembly Election 2023: ಬೆಂಗಳೂರಿನಲ್ಲಿ ಸಿದ್ದರಾಮಯ್ಯ 8 ಸಾವಿರ ಕೋಟಿ ರೂ. ಅಕ್ರಮ ಆಸ್ತಿ ಮಾಡಿದ್ದಾರೆಂಬ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
Karnataka Assembly Election 2023: ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Karnataka Assembly Election 2023: ಬಿಜೆಪಿಯ ಐಟಿ ಸೆಲ್ ಜಗತ್ತಿನ ಏಕೈಕ "ಫೇಕ್ ಫ್ಯಾಕ್ಟರಿ"! ಇನ್ನೆಲ್ಲಿಯದ್ದೋ ಫೋಟೋ ತಂದು ಸಿದ್ದರಾಮನಹುಂಡಿಯ ಹೆಸರಿಗೆ ಜೋಡಿಸುವ ಕಲೆ ಬಿಜೆಪಿಗೆ ಮಾತ್ರ ಸಾಧ್ಯವಾಗುವಂತದ್ದು! ಎಂದು ಕಾಂಗ್ರೆಸ್ ಟೀಕಿಸಿದೆ.
Karnataka Assembly Election 2023: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ದಿಸಲಾಗದ ವ್ಯಕ್ತಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ. ತಾಕತ್ತಿದ್ದರೆ ಚುನಾವಣೆಗೆ ಸ್ಪರ್ಧಿಸಿ ಜನಬೆಂಬಲ ಪಡೆದು ಬರಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.
Karnataka Assembly Election 2023: ಮೇ 10ರಂದು ಯಾರ ಡ್ಯಾಂ ಲೇವಲ್ ಎಷ್ಟಿದೆ ಅಂತಾ ಗೊತ್ತಾಗುತ್ತೆ. ಪ್ರತಿದಿನ ಡ್ಯಾಂ ಲೇವಲ್ ಗೇಜ್ ಮಾಡ್ತಿರ್ತೇವೆ. ಅದೇ ರೀತಿ ಮೇ 10ರಂದು ಲಿಂಗಾಯತ ಮತಗಳು ಹರಿದುಬಂದು ಬಿಜೆಪಿ ತುಂಬಿ ತುಳಕುತ್ತದೆ ಎಂದು ಸಿಸಿ ಪಾಟೀಲ್ ಹೇಳಿದ್ದಾರೆ.
Karnataka Assembly Election 2023: ಡಿ.ಕೆ.ಶಿವಕುಮಾರ್ ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
Karnataka Assembly Election 2023: 2006ರ ಚಾಮುಂಡೇಶ್ವರಿ ಚುನಾವಣೆಯಲ್ಲಿ ಸಿದ್ದರಾಮಯ್ಯಗೋಸ್ಕರ ಒದೆ ತಿಂದಿದ್ದೇನೆ. ಬರಿಮೈಯಲ್ಲಿ ದೇವಾಲಪುರದಿಂದ ಮೈಸೂರಿಗೆ ಹೋಗಿದ್ದೇನೆ. ನನ್ನ ಕಾರಿನ ಗ್ಲಾಸ್ ಒಡೆದಿದ್ದರು ಪ್ಯಾಂಟ್ ಹರಿದು ಹಾಕಿದ್ದರು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
Karnataka Assembly Election 2023: ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಮೈಸೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಆಗಮಿಸಿದ ಸಿದ್ದರಾಮಯ್ಯನವರು ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
Karnataka Assembly Election 2023: ಸರ್ಕಾರಿ ಹುದ್ದೆಗಳ ಮಾರಾಟದ ಅಕ್ರಮ, 40% ಕಮಿಷನ್ ಲೂಟಿ, ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ, ಶಾಸಕರನ್ನು ಖರೀದಿಸುವ ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಮತ್ತು ಭರವಸೆಗಳನ್ನು ಈಡೇರಿಸದ ವಚನ ಭ್ರಷ್ಟತೆ. ಇವೆಲ್ಲವೂ ಬಿಜೆಪಿ ಸರ್ಕಾರದ ಹೈಲೈಟ್ಸ್ಗಳು ಎಂದು ಕಾಂಗ್ರೆಸ್ ಕುಟುಕಿದೆ.
Karnataka Assembly Election 2023: ಈ ಚುನಾವಣೆಯಲ್ಲಿ ಬಿಜೆಪಿ 125ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಪಡೆದು ಮತ್ತೊಮ್ಮೆ ಕನ್ನಡನಾಡಿನ ಸೇವೆ ಮಾಡಲು ಬಿಜೆಪಿಗೆ ಜನರು ಆಶೀರ್ವಾದ ಮಾಡುತ್ತಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Karnataka Assembly Election 2023: ದುರಾಡಳಿತ, ಭ್ರಷ್ಟಾಚಾರದಿಂದ ಮಡುಗಟ್ಟಿದ್ದ ಜನಾಕ್ರೋಶ ಈಗ ಹೊರಬರುತ್ತಿದೆ. ಬಿಜೆಪಿ ಮುಕ್ತ ಮಾಡಲು ಕನ್ನಡಿಗರೇ ಶಪಥ ಮಾಡಿಯಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
Karnataka Assembly Election 2023: ಸಿಂಧನೂರು ತಹಶೀಲ್ದಾರರ ಕಚೇರಿಯಲ್ಲಿ ಇಬ್ಬರೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಬಂದ ಜೋಡಿಗೆ ಅದ್ದೂರಿ ಮೆರವಣಿಗೆ ಮಾಡಲಾಗಿದೆ. ಮೆರವಣಿಗೆಯಲ್ಲಿ ಜೋಡಿ ಅಭ್ಯರ್ಥಿಗಳಿಗೆ ಹೂಮಳೆ ಸಹ ಸುರಿಸಲಾಗಿದೆ.
Karnataka Assembly Election 2023: ಬಿಜೆಪಿಯ ಈ ಎಲ್ಲಾ ಬೆಳವಣಿಗೆಗೆ ಬಿ.ಎಲ್.ಸಂತೋಷ್ ನೇರ ಕಾರಣ. ಜಗದೀಶ್ ಶೆಟ್ಟರ್ ಅವರು ಬಿ.ಎಲ್.ಸಂತೋಷ ಮೇಲೆ ಮಾಡಿರುವ ಆರೋಪಗಳು ಸರಿ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.