Trafficking of illegal liquor: ಸಿರುಗುಪ್ಪ ತಾಲ್ಲೂಕಿನ ಬೀರಳ್ಳಿ ಗ್ರಾಮದಿಂದ ರಾವಿಹಾಳ್ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ಕೆರೆ ದಂಡೆಯ ಹತ್ತಿರ ರಸ್ತೆಗಾವಲು ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ 51.840 ಲೀ. (ಅಂದಾಜು ಮೌಲ್ಯ ರೂ.48,045) ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸವಾರನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ, ಪ್ರಕರಣ ದಾಖಲಿಸಿಲಾಗಿದೆ.
ಈತ ಕುಡಿದ ಮತ್ತಿನಲ್ಲಿ ಜಗಳವಾಡಿದ್ದಾನೆ ಎಂದು ವರದಿಯಾಗಿದೆ, ಹೀಗಾಗಿ ಆತನ ವಿರುದ್ಧ ಪ್ರಕರಣ ದಾಖಲಿಸಿ ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದ್ದು, ಸದ್ಯ ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Illegal Liquor: ಅಕ್ರಮ ಮದ್ಯ ಸಾಗಾಣಿಕೆ, ಶೇಖರಣೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ವಶ ಪಡಿಸಿಕೊಳ್ಳಲಾಗಿದ್ದ ಮದ್ಯದ ದಾಸ್ತಾನನ್ನು ಪಾವಗಡ ಪಟ್ಟಣದ ಹೊರ ವಲಯದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನಾಶ ಪಡಿಸಿದರು.
Liquor Sale prohibited in Karnataka: ಇದೇ ತಿಂಗಳ 10 ರಂದು ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಎಣ್ಣೆ ಅಂಗಡಿ ಬಂದ್ ಮಾಡೋದಕ್ಕೆ ಅಬಕಾರಿ ಇಲಾಖೆ ಮುಂದಾಗಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೇ 8 ರ ಸಂಜೆ 5 ಗಂಟೆಯಿಂದ ಮೇ 11ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟವನ್ನು ರಾಜ್ಯದಲ್ಲಿ ನಿಷೇಧ ಮಾಡಲಾಗಿದೆ.
ಚಾಮರಾಜನಗರಕ್ಕೆ ಮೈಸೂರಿನಿಂದ ಪೂರೈಕೆಯಾದ ಬಿಯರ್ ಪೆಟ್ಟಿಗೆಗಳಲ್ಲಿ ಬಾರ್ ಕೋಡ್, ದಾಸ್ತಾನು ತಾಳೆಯಾಗದಿದ್ದರಿಂದ 12.47 ಲಕ್ಷ ಮೌಲ್ಯದ 8,970 ಲೀಟರ್ ಬಿಯರ್ ನ್ನು ವಶಕ್ಕೆ ಪಡೆದು ಬ್ರೀವರಿ ಸನ್ನದುದಾರರು ಹಾಗೂ ಚಾಲಕರ ಮೇಲೆ ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿದೆ.
Karnataka Assembly Election: ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದ ವೇಳೆ, ಹಾಸನದ ವುಡ್ ಪೆಕ್ಕರ್ ಡಿಸ್ಟಿಲರಿಯಿಂದ ಸರಬರಾಜಾದ ಮದ್ಯದಲ್ಲಿ ಕಂಟ್ರೋಲಿಂಗ್ ಅಬಕಾರಿ ಭದ್ರತಾ ಚೀಟಿಗಳು ಇಲ್ಲದೇ ಇರುವುದು ಕಂಡುಬಂದಿದ್ದರಿಂದ 4,320 ಲೀಟರ್ ಮದ್ಯವನ್ನುವಶಕ್ಕೆ ಪಡೆದು ಅಬಕಾರಿ ಉಪ ಆಯುಕ್ತ ಆರ್. ನಾಗಶಯನ ಕೇಸ್ ದಾಖಲಿಸಿದ್ದಾರೆ.
Karnataka Assembly Election 2023: ಈ ನೆಟ್ವರ್ಕ್, ಬ್ರಾಂಡೆಡ್ ಮದ್ಯ ಪ್ರಿಯರನ್ನ ಟಾರ್ಗೆಟ್ ಮಾಡಿದೆ. ಸದ್ಯ ಅಬಕಾರಿ ಪೊಲೀಸರು ಈ ಪ್ರಕರಣದಲ್ಲಿ ಓರ್ವನನ್ನ ವಶಕ್ಕೆ ಪಡೆದಿದ್ದು, ಕಿಂಗ್ ಪಿನ್ ಗಾಗಿ ಕಾರ್ಯಚರಣೆ ಮುಂದುವರಿಸಿದ್ದಾರೆ.
ಮತದಾರರಿಗೆ ಸಾಧನೆ ತೋರಿಸಿ ಮತ ಕೇಳಲಾಗದ ಬಿಜೆಪಿ ಹೆಂಡದ ಮೊರೆ ಹೋಗಿರುವುದು ನಾಚಿಕೆಗೇಡು. ಹೆಂಡ ಹಂಚುವ ಕಾರ್ಯಸೂಚಿ RSS ಕಚೇರಿಯಿಂದ ಬಂದಿದ್ದೇ ಸಿಟಿ ರವಿಯವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಶಾಲೆಯ ಹಠಾತ್ ತಪಾಸಣೆಯ ವೇಳೆ ಪ್ರಿನ್ಸಿಪಾಲ್ ಕೊಠಡಿಯಲ್ಲಿ ಮದ್ಯ ಮತ್ತು ಕಾಂಡೋಮ್ಗಳು ಪತ್ತೆಯಾದ ನಂತರ ಸೀಲ್ ಮಾಡಲಾಗಿದೆ.ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶನಿವಾರ ಪರಿಶೀಲನೆ ನಡೆಸಿತು.
Tax Free Liquor: ಈ ಮೊದಲೂ ಕೂಡ ಮದ್ಯಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ತೀರ್ಮಾನ ಕೈಗೊಂಡಿರುವ ದುಬೈನಲ್ಲಿ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈಗ ಈ ಮುಸ್ಲಿಂ ದೇಶದಲ್ಲಿ ಮದ್ಯ ತೆರಿಗೆ ಮುಕ್ತವಾಗಲಿದೆ.
ಲೋಕೇಂದ್ರ ಸೇಥಿಯಾ ಎಂದು ಗುರುತಿಸಲಾಗಿರುವ ದೂರುದಾರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರಿಗೆ ಲಿಖಿತ ದೂರನ್ನು ಕಳುಹಿಸಿದ್ದಾರೆ ಮತ್ತು ಅವರು ಖರೀದಿಸಿದ ಶಂಕಿತ ನಕಲಿ ಮದ್ಯದ ವಿರುದ್ಧ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಪತ್ರವನ್ನೂ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.