ಲೋಕಸಭಾ ಚುನಾವಣೆ ಈಗ ದೇಶದಲ್ಲಿ ಏಳು ಅಂತದಲ್ಲಿ ನಡೆಯುತ್ತಿದೆ.ಈ ಸಂದರ್ಭದಲ್ಲಿ ಈಗಾಗಲೇ ಒಂದು ಹಂತದ ಚುನಾವಣೆ ಮುಗಿದಿದೆ. ಈ ವೇಳೆ ಈಗ ಕ್ರಿಕೆಟರ್ ರವೀಂದ್ರ ಜಡೇಜಾ ತಾವು ಬಿಜೆಪಿಯನ್ನು ಹಾಗೂ ಮೋದಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಚುನಾವಣಾ ಮತ ಕೇಂದ್ರದಲ್ಲಿ ಪ್ರಧಾನಿ ಮೋದಿ ಕ್ಯಾಮರಾಗಳನ್ನು ಅಳವಡಿಸಿದ್ದಾರೆ.ಆದ್ದರಿಂದ ಯಾರು ಕಾಂಗ್ರೆಸ್ ಗೆ ಮತ ಹಾಕಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದು ಬಿಜೆಪಿ ನಾಯಕ ರಮೇಶ್ ಕತರಾ ಹೇಳಿದ್ದಾರೆ.
ರಾಜ್ಯದಲ್ಲಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ರೀತಿ ಸಮಸ್ಯೆ ಇಲ್ಲ. ಈಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಸಮ್ಮಿಶ್ರ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ.
ಸಾರ್ವತ್ರಿಕ ಚುನಾವಣೆಯ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸರಕಾರವನ್ನು ಉರುಳಿಸಲು ಬಿಜೆಪಿ ತನ್ನ ಆಪರೇಷನ್ ಕಮಲವನ್ನು ಪುನರುಜ್ಜೀವನಗೊಳಿಸುವ ಸಾಧ್ಯತೆ ಇದೆ, ಆದರೆ ಯಶಸ್ವಿಯಾಗುವುದಿಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಧಾನಿ ಮೋದಿ ಫೋಟೋವನ್ನು ಹೊಂದಿರುವ ಟೀಕೆಟ್ ನ್ನು ಪ್ರಯಾಣಿಕರಿಗೆ ನೀಡಿರುವುದಕ್ಕೆ ಈಗ ಇಬ್ಬರು ರೇಲ್ವೆ ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.ಸಾರ್ವಜನಿಕ ಹಣದ ರಾಜಕೀಯ ಜಾಹೀರಾತು ಚುನಾವಣಾ ನೀತಿ ಸಂಹಿತೆ ನಿಯಮವನ್ನು ಉಲ್ಲಂಘಿಸುತ್ತದೆ.ಈ ಹಿನ್ನಲೆಯಲ್ಲಿ ಅವರನ್ನು ಈಗ ಅಮಾನತುಗೊಳಿಸಲಾಗಿದೆ ಎನ್ನಲಾಗಿದೆ.
ತಾವೆಂದಿಗೂ ಕೂಡ ಐಟಿ ದಾಳಿಗೆ ಹೆದರಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರುಗಳ ಮೇಲೆ ಐಟಿ ದಾಳಿ ನಡೆಸುತ್ತಿರುವುದರ ಬಗ್ಗೆ ಕಿಡಿ ಕಾರುತ್ತಾ ಸಿಎಂ ಈ ರೀತಿ ತೀರುಗೇಟು ನೀಡಿದ್ದಾರೆ.
ರವೀಂದ್ರ ಜಡೇಜಾ ಪತ್ನಿ ಬಿಜೆಪಿಗೆ ಸೇರಿದ ಒಂದು ತಿಂಗಳ ನಂತರ ಅವರ ತಂದೆ ಮತ್ತು ಸಹೋದರಿ ಭಾನುವಾರ ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಮುಖಂಡ ಮತ್ತು ಪಾಟೀದರ್ ನಾಯಕ ಹಾರ್ದಿಕ್ ಪಟೇಲ್ ಅವರು ಉಪಸ್ಥಿತಿಯಲ್ಲಿ ಕಾಂಗ್ರೆಸ್ ಗೆ ಸೇರಿದ್ದಾರೆ.
ಮತಯಂತ್ರ ಬಳಕೆ ವಿಚಾರವಾಗಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಚುನಾವಣಾ ಆಯೋಗ ಬಿಜೆಪಿ ಬ್ರ್ಯಾಂಚ್ ಆಫೀಸ್ ಆಗಿ ಪರಿವರ್ತನೆಯಾಗಿದೆ ಎಂದು ಕಿಡಿ ಕಾರಿದ್ದಾರೆ.
ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿಯವರ 2014 ರ ಚುನಾವಣೆಯಲ್ಲಿ ನೀಡಿದ ಅಚ್ಚೆ ದಿನ್ ಭರವಸೆಯನ್ನು ಡಬ್ ಮಾಶ್ ಮಾಡಿ ತಮ್ಮ ಟ್ವಿಟರ್ ಖಾತೆಯಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಝೀ ನ್ಯೂಸ್ ಗೆ ಮೂಲಗಳು ತಿಳಿಸಿವೆ.
ನಮೋ ಟಿವಿಯಲ್ಲಿ ಅನುಮತಿಯಿಲ್ಲದೆ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ನಿರ್ದೇಶನ ಮೇರೆಗೆ ಈಗ ದೆಹಲಿ ಮುಖ್ಯ ಚುನಾವಣಾ ಅಧಿಕಾರಿ ಕಟ್ಟಪ್ಪಣೆ ಹೊರಡಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೋಲಾರದಲ್ಲಿ ಮೈತ್ರಿ ಪಕ್ಷದ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಾ "ಮೋದಿಯವರು ಕಳ್ಳರಾಗಿರುವುದು ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಹೀಗಾಗಿಯೇ ನಾನು ಹಾಗೂ ಈ ದೇಶದ ಜನರು ಚೌಕೀದಾರ್ ಚೋರ್ ಹೈ ಎಂದು ಧೈರ್ಯವಾಗಿ ಹೇಳುತ್ತೇವೆ ಎಂದರು.
ಬಿಹಾರದ ಹಾಜಿಪುರದಲ್ಲಿ ಬಿಜೆಪಿ ಮತ್ತು ಜೆಡಿಯು ಕಾರ್ಯಕರ್ತರ ಸಾರ್ವಜನಿಕ ಸಭೆಯಲ್ಲಿ ರಾಮ ಮಂದಿರದ ವಿಚಾರವಾಗಿ ಭಿನ್ನಾಭಿಪ್ರಾಯ ಭುಗಿಲೆದ್ದ ಹಿನ್ನಲೆಯಲ್ಲಿ ಪರಸ್ಪರ ಮಾರಾಮಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರ ನವನಿರ್ಮಾನ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು ಆದರೆ ನರೇಂದ್ರ ಮೋದಿ ಮತ್ತು ಅವರ ಪಕ್ಷದ ಮೇಲಿನ ದಾಳಿ ಮಾತ್ರ ತೀಕ್ಷ್ಣವಾಗಿದೆ.
ಚುನಾವಣಾ ಆಯೋಗಕ್ಕೆ ಸ್ಮೃತಿ ಇರಾನಿ ಅಫಿದಾವಿತ್ತನಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದ್ದರಿಂದ ಅವರ ಚುನಾವಣಾ ನಾಮಪತ್ರವನ್ನು ರದ್ದುಪಡಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ರಫೇಲ್ ಒಪ್ಪಂದದ ವಿಚಾರವಾಗಿ ಈಗ ಬಿಜೆಪಿ ಮೈತ್ರಿ ಪಕ್ಷ ಶಿವಸೇನಾ ಕಡಿಮೆ ಮಾತಾಡಲು ಸಲಹೆ ನೀಡಿದೆ ಇಲ್ಲದೆ ಹೋದಲ್ಲಿ ನಾಯಕರುಗಳು ನೀಡುವ ಹೇಳಿಕೆಗಳಿಂದ ಪಕ್ಷಕ್ಕೆ ತೊಂದರೆಯಾಗಲಿದೆ ಎಂದು ಅದು ಎಚ್ಚರಿಸಿದೆ.
90 ರ ದಶಕದಲ್ಲಿ ರಂಗೀಲಾ, ದೌಡ್ ನಂತಹ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿದ್ದ ನಟಿ ಉರ್ಮಿಳಾ ಮಾತೊಂಡಕರ್,ಇತ್ತೀಚಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು.ಅಲ್ಲದೆ ಈಗ ಮುಂಬೈ ಉತ್ತರ ಭಾಗದ ಮೂಲಕ ಚುನಾವಣೆಗೂ ಕೂಡ ಸ್ಪರ್ಧಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.