ಜೆಡಿ(ಎಸ್) ವರಿಷ್ಠರಾದ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಶುಕ್ರವಾರದಂದು ದಾಖಲೆ ಇಲ್ಲದೇ ಸಾಗಿಸುತ್ತಿದ್ದ ರೂ.8,23,440 ನಗದು ಹಣವನ್ನು 91-ಕಂಪ್ಲಿ ಕ್ಷೇತ್ರ ವ್ಯಾಪ್ತಿಯ ಕೋಟೆ ಚೆಕ್ಪೋಸ್ಟ್ ಬಳಿ ಎಸ್ಎಸ್ಟಿ ತಂಡದ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರು ಮತದಾರರಿಗೆ ಕರೆ ನೀಡಿದರು.
ಬೆಂಗಳೂರಿನಲ್ಲಿ ನಡೆದ ಜೆಡಿಎಸ್ -ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ನಮ್ಮ ಎರಡು ಪಕ್ಷಗಳ ಸಮನ್ವಯತೆಯನ್ನು ಬೂತ್ ಮಟ್ಟದಿಂದ ಬಲಪಡಿಸಿಕೊಳ್ಳಬೇಕು. ಇವತ್ತಿನ ಮೈತ್ರಿಗೆ ಈ ಚುನಾವಣೆ ಮೂಲಕ ಭದ್ರ ಬುನಾದಿ ಹಾಕಿದರೆ ಭವಿಷ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಇಲ್ಲದಂತೆ ಮಾಡಬಹುದು ಎಂದರು.
Karnataka Lok Sabha Elections 2024: ಕಾಂಗ್ರೆಸ್ ಸರ್ಕಾರ ಕಳೆದ ಹತ್ತು ತಿಂಗಳಲ್ಲಿ ಬ್ರ್ಯಾಂಡ್ ಬೆಂಗಳೂರು ಎಂದು ಹಾರ್ಮ್ ಬೆಂಗಳೂರನ್ನು ಸೃಷ್ಟಿಸಿದೆ. ಈಗ ಬಾಯ್ ಬಾಯ್ ಬೆಂಗಳೂರು ಮಾಡಿದ್ದು, ಕುಡಿಯುವ ನೀರಿಲ್ಲದೆ ಜನರು ನಗರವನ್ನು ಬಿಟ್ಟು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆಗಳನ್ನು ಸುಗಮ ಮತ್ತು ಸುಲಲಿತವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಹಲವು ಆಪ್ ಗಳನ್ನು ಸಿದ್ಧಪಡಿಸಿದ್ದು, ಮುಕ್ತ ಮತ್ತು ನ್ಯಾಯ ಸಮ್ಮತ ನಡೆಸಲು ಆಪ್ಗಳು ಚುನಾವಣಾ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಮೊಬೈಲ್ ತಂತ್ರಜ್ಞಾನದಿಂದ ಸಾರ್ವಜನಿಕರು ಕೂತಲ್ಲಿಯೇ ತಮ್ಮ ಅಂಗೈಯಲ್ಲಿ ಮತದಾರ ಗುರುತಿನ ಚೀಟಿ ಬಗ್ಗೆ ಇರುವ ಸಂದೇಹ, ಚುನಾವಣೆ ಪ್ರಕ್ರಿಯೆ, ತಮ್ಮ ವ್ಯಾಪ್ತಿಯ ಅಭ್ಯರ್ಥಿಗಳ ಮಾಹಿತಿ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಅಗ್ರಿ ಯುನಿವರ್ಸಿಟಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆಯಲ್ಲಿ ಮಾರುತಿ ಸುಜುಕಿ ಏರಟಿಗಾ ವಾಹನದಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ರೂ.3,35,500 ಮೌಲ್ಯದ ಪ್ಯಾಂಟ್ ಪೀಸ್ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಇಂದಿನಿಂದ ಮತ್ತಷ್ಟು ಕಾವೇರಲಿದೆ ಚುನವಾಣಾ ಅಖಾಡ
ಇಂದಿನಿಂದ ಮೊದಲ ಹಂತದ ನಾಮಪತ್ರ ಸಲ್ಲಿಕೆ ಆರಂಭ
14 ಲೋಕಸಭಾ ಕ್ಷೇತ್ರಗಳಿಗೆ ಏ.26ಕ್ಕೆ ಮತದಾನ
ಮೊದಲ ಹಂತದ ಚುನಾವಣೆಗೆ ಇಂದು ಅಧಿಸೂಚನೆ
ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ
ಏಪ್ರಿಲ್ 8ರಂದು ಉಮೇದುವಾರಿಕೆ ವಾಪಸ್ಗೆ ಕಡೆಯ ದಿನ
ಕೆಲವು ರಾಜ್ಯಗಳಿಗೆ ಲೋಕಸಭಾ ಚುನಾವಣಾ ಪ್ರಭಾರಿ ಹಾಗೂ ಸಹ ಪ್ರಭಾರಿ ನೇಮಿಸಿ ಆದೇಶ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ
ಅಭಯ್ ಪಾಟೀಲ್ - ತೆಲಂಗಾಣ ಪ್ರಭಾರಿ
ನಿರ್ಮಲ್ಕುಮಾರ್ ಸುರಾನಾ - ಮಹಾರಾಷ್ಟ್ರ ಸಹ ಪ್ರಭಾರಿ
ನಳೀನ್ ಕುಮಾರ್ ಕಟೀಲ್ - ಕೇರಳ ಸಹ ಪ್ರಭಾರಿಯಾಗಿ ನೇಮಕ
ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Loksabha election candidates list: ಬಿಜೆಪಿ ಅಭ್ಯರ್ಥಿಗಳ ಏಳನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಆದರೆ ರಾಜಕೀಯ ಪಕ್ಷಗಳು ಚುನಾವಣೆಯ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಏಕೆ ಘೋಷಿಸುವುದಿಲ್ಲ ಎಂದು ನೀವು ಯೋಚಿಸಿದ್ದೀರಾ?
ಅವರು ನನಗೆ ಶತ್ರು ಅಲ್ಲ. ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ಆಗ ಸುಮಲತಾ ಅವರೇ ನಮಗೆ ಊಟ ಬಡಿಸಿದ್ದಾರೆ. ಹೀಗಿರುವಾಗ ಆಗಿ ಹೋಗಿದ್ದನ್ನೇ ಸಾಧಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ ಸೇರಿದವರನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ಅವರು ಬಿಜೆಪಿ ಬಿಡಲು ಅಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ ಹಾಗೂ ನಮ್ಮ ಪಕ್ಷ ಬಡವರ ಪರವಾಗಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಸೇರಿದ್ದಾರೆ ಎಂದರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Lok Sabha election 2024 : ಬಿಜೆಪಿ ಹಾಗೂ ಜೆಡಿಎಸ್ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.
ಕಮಲ ಪಾಳದಲ್ಲಿ ಭಿನ್ನಮತದ ಹೊಗೆ. ಶಮನ ಮಾಡಲು ರಾಜ್ಯನಾಯಕರ ಯತ್ನ. ಕುಟುಂಬ ರಾಜಕಾರಣಕ್ಕೆ ಮಣೆ ಹಾಕದಂತೆ ಭಿನ್ನಮತಿಯರ ಒತ್ತಾಯ. ಮಾಜಿ ಸಚಿವರು, ಶಾಸಕರಿಂದ ಸಂಧಾನಸಭೆಯಲ್ಲಿ ಅಸಮಾಧಾನ ವ್ಯಕ್ತ. ಅಂತಮವಾಗಿ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾದ ರಾಜಾಹುಲಿ. ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆದ ಭಿನ್ನಮತಿಯರ ಸಭೆಯ ಹೈಲೇಟ್ಸ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.