Lok Sabha Election 2024: ವಿ.ಸೋಮಣ್ಣ ಗೆಲ್ಲುವುದು ಸಂಸದ ಬಸವರಾಜು ಸೇರಿ ನನಗೂ ಇಷ್ಟವಿಲ್ಲ. ಸೋಮಣ್ಣರನ್ನು ಬಲಿಕೊಡಲು ಬಸವರಾಜು ಕರೆದುಕೊಂಡು ಬಂದಿದ್ದಾರೆ. ಸೋಮಣ್ಣ ಪರ ನಾನು ಕೆಲಸ ಮಾಡಲ್ಲವೆಂದು ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕೂಡಾ ಫೈನಲ್ ಆಗಿರಲಿಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ. ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
KS Eshwarappa news : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಾರಾ ಎಂಬ ಊಹಾಪೋಹಗಳಿಗೆ ಖುದ್ದು ಈಶ್ವರಪ್ಪ ತೆರೆ ಎಳೆದಿದ್ದಾರೆ. ತಾವು ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸುವುದು ಖಚಿತ ಎಂದು ಈಶ್ವರಪ್ಪ ಘೋಷಿಸಿದ್ದಾರೆ.
BJP vs Congress: ”ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ಪ್ರಧಾನಿ ಮೋದಿಯವರೇ, ಚುನಾವಣಾ ಬಾಂಡ್ನಲ್ಲಿ ತಿಂದವರು ಯಾರು, ತಿನ್ನಿಸಿದವರು ಯಾರು? ಚುನಾವಣಾ ಬಾಂಡ್ ವಿಚಾರದಲ್ಲಿ SBI ಕಳ್ಳಾಟ ಆಡುತ್ತಿರುವುದೇಕೆ?ʼ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
ಯುವಜನತೆಯನ್ನು ಮತದಾನ ಮಾಡುವಂತೆ ಪ್ರೇರೇಪಿಸಲು ಭಾರತೀಯ ಚುನಾವಣಾ ಆಯೋಗ ದೇಶಕ್ಕಾಗಿ ನನ್ನ ಮೊದಲ ಮತ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಈ ಅಭಿಯಾನದ ಮೂಲಕ ಯುವಜನತೆಯನ್ನು ವಿಶೇಷವಾಗಿ ಮೊದಲ ಬಾರಿ ಮತದಾನ ಮಾಡುತ್ತಿರುವವರು ಪ್ರಜಾಪ್ರಭುತ್ವದ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ದೇಶ ಕಟ್ಟುವಲ್ಲಿ ಕೊಡುಗೆ ನೀಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ.
ಈಶ್ವರಪ್ಪ ಮಗ ಕಾಂತೇಶ್ಗೆ ಹಾವೇರಿ ಟಿಕೆಟ್ ಮಿಸ್ ಹಿನ್ನೆಲೆ
ಸಂಜೆ ಸ್ಥಳೀಯ ಮುಖಂಡರ ಜೊತೆ ಮಹತ್ವದ ಮೀಟಿಂಗ್
ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿರೋ ಈಶ್ವರಪ್ಪ
ಮಗನಿಗೆ ಟಿಕೆಟ್ ಸಿಗದಿದ್ದಕ್ಕೆ ಕೆ.ಎಸ್.ಈಶ್ವರಪ್ಪ ಬೇಸರ
ಶಿವಮೊಗ್ಗದ ಬಂಜಾರಾ ಭವನದಲ್ಲಿ ಬೆಂಬಲಿಗರ ಸಭೆ
ದೆಹಲಿಯಿಂದ ಶಾಸಕ ಜನಾರ್ದನ ರೆಡ್ಡಿ ವಾಪಸ್
ಅಮಿತ್ ಶಾ ಜೊತೆ ರಾಜಕೀಯ ಮಾತುಕತೆ ಸಾಧ್ಯತೆ
ಎಲ್ಲಾ ಡೀಟೇಲ್ಸ್ 2-3 ದಿನಗಳಲ್ಲಿ ಮಾತನಾಡುತ್ತೇನೆ
ರಾಮುಲು ಗೆಲುವು ಬೆಂಬಲದ ಬಗ್ಗೆ ಈಗಲೇ ಮಾತನಾಡಲ್ಲ
ರಾತ್ರಿ ಯಡಿಯೂರಪ್ಪ ಭೇಟಿಯಾದ ಜಗದೀಶ್ ಶೆಟ್ಟರ್
ಡಾಲರ್ಸ್ ಕಾಲೋನಿಯ ಬಿಎಸ್ವೈ ನಿವಾಸದಲ್ಲಿ ಭೇಟಿ
ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಬಗ್ಗೆ ಮಾತುಕತೆ
ಬಿಜೆಪಿ ಸಂಭಾವ್ಯ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್
Lok Sabha Elections 2024 Schedule:MCC ಅಡಿಯಲ್ಲಿ, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ಕೆಲವು ನಿಯಮಗಳಿವೆ. ಈ ನಿಯಮಗಳು ಉಲ್ಲಂಘನೆಯಾದಲ್ಲಿ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳುತ್ತದೆ.
Lok Sabha Election Date: ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಲು ಸಮಯ ನಿಗದಿಪಡಿಸಿದೆ. ಈ ಕುರಿತಂತೆ ಚುನಾವಣಾ ಆಯೋಗವು ಸಾಮಾಜಿಕ ಮಾಧ್ಯಮದ ಲೈವ್ ಸ್ಟ್ರೀಮ್ಗಳ ಮೂಲಕ ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
Congress MP Elections: “ಲೋಕಸಭೆ ಅಭ್ಯರ್ಥಿ ಆಯ್ಕೆ ಸಂಬಂಧ ಸ್ಥಳೀಯ ಮಟ್ಟದಲ್ಲಿ ವಿಚಾರ, ಅಭಿಪ್ರಾಯಗಳನ್ನು ಸಂಗ್ರಹಿಸಿ ಹೈಕಮಾಂಡ್ ನಾಯಕರಿಗೆ ಕಳುಹಿಸುವುದು ನಮ್ಮ ಕರ್ತವ್ಯ. ನಾವು ಅದನ್ನು ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ. ದೇಶಕ್ಕೆ ಪ್ರಧಾನ ಮಂತ್ರಿಯನ್ನ ಆಯ್ಕೆ ಮಾಡೋಕೇ ಜನಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಕಾನೂನು, ಆಡಳಿತ ಮತ್ತು ಸಂವಿಧಾನಬದ್ಧ ಸಂಸದರ ಚುನಾವಣೆಯಲ್ಲಿ ಭಾಗಿಯಾಗುವುದು ಜವಾಬ್ದಾರಿ ಮತ್ತು ಹೊಣೆಗಾರಿಕೆ ಕೂಡ. ಸಂಸದರೆಂಬುದೇ ಮಹತ್ವದ ಗೌರವ ಮತ್ತು ತನ್ನದೇ ಆದ ಘನತೆಯನ್ನ ಉಳಿಸಿಕೊಂಡಿರುವ ಸಂವಿಧಾನಬದ್ಧ ಅಧಿಕಾರ. ಹೀಗಾಗಿ ಸಂಸದರನ್ನ ಆಯ್ಕೆ ಮಾಡಲು ಮತದಾರ ಪ್ರಭುಗಳು ಕೂಡಾ ಬಹು ಎಚ್ಚರಿಕೆಯಿಂದ ಸೈದ್ಧಾಂತಿಕ ಮತ್ತು ಅಭಿವೃದ್ಧಿಯ ಮಾನದಂಡಗಳನ್ನು ಬಳಸಿ ಹಕ್ಕನ್ನು ಚಲಾಯಿಸುತ್ತಾನೆ. ಇಲ್ಲಿ ಒಮ್ಮೆ ಮತದಾರನ ನಾಡಿಮಿಡಿತ ಅರಿತ ವ್ಯಕ್ತಿ ದೆಹಲಿ ಪ್ರವೇಶಿಸಿ 5 ವರ್ಷ ಸಂಸದರಾಗಿ ಅಧಿಕಾರ ಚಲಾಯಿಸುತ್ತಾರೆ.
ಏನಿದು ಒನ್ ನೇಷನ್ ಒನ್ ಎಲೆಕ್ಷನ್?: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ʼಒನ್ ನೇಷನ್ ಒನ್ ಎಲೆಕ್ಷನ್ʼ ವಿಚಾರವಾಗಿ 62 ಪಕ್ಷಗಳನ್ನು ಸಂಪರ್ಕಿಸಿತ್ತು. ಪ್ರತಿಕ್ರಿಯಿಸಿದ 47 ರಾಜಕೀಯ ಪಕ್ಷಗಳ ಪೈಕಿ 32 ಪಕ್ಷಗಳು ಏಕಕಾಲಕ್ಕೆ ಚುನಾವಣೆ ನಡೆಸುವ ವಿಚಾರವನ್ನು ಬೆಂಬಲಿಸಿದರೆ, 15 ಪಕ್ಷಗಳು ವಿರೋಧಿಸಿವೆ. ಒಟ್ಟು 15 ಪಕ್ಷಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ
ಟಿಕೆಟ್ ಘೋಷಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಭಿನ್ನಮತ
ಬಳ್ಳಾರಿ ಹಾಲಿ ಸಂಸದ ದೇವೇಂದ್ರಪ್ಪಗೆ ಟಿಕೆಟ್ ಮಿಸ್
ತರಾತುರಿಯಲ್ಲಿ ಮನೆಯ ಕಡೆ ಹೊರಟ ದೇವೇಂದ್ರಪ್ಪ
ವಿಜಯನಗರ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಯಾಣ
ಪುತ್ರ ಕೆ.ಈ.ಕಾಂತೇಶ್ ಜೊತೆ ಕಾರಿನಲ್ಲಿ ಹೊರಟ ಈಶ್ವರಪ್ಪ
ಯಾರದ್ದೋ ಫೋನ್ ಬರುತ್ತಿದ್ದಂತೆ ಅರ್ಜೆಂಟಾಗಿ ಪ್ರಯಾಣ
ಕಣ್ಣೀರು ಹಾಕುತ್ತಿರುವ ಈಶ್ವರಪ್ಪ ಕುಟುಂಬ, ಕಾಂತೇಶ್ ಪತ್ನಿ
ಬಿಜೆಪಿ ಪಟ್ಟಿ ರಿಲೀಸ್.. ಈಶ್ವರಪ್ಪ ಪುತ್ರನಿಗೆ ಟಿಕೆಟ್ ಮಿಸ್
ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ, ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ.
ಕಾಂತೇಶ್ ಅವರಿಗೆ ಟಿಕೆಟ್ ತಪ್ಪಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ, ಅದು ರಾಷ್ಟ್ರೀಯ ನಾಯಕರ ತೀರ್ಮಾನ. ಎಲ್ಲಿ ಗೆಲುವಿದೆಯೋ ಅಲ್ಲಿ ಸ್ಪರ್ಧೆ ಇದ್ದೇ ಇರತ್ತದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ ಎಂದರು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಇಂಡಿಗನತ್ತ ಗ್ರಾಮಸ್ಥರು ಇಂದಿ ಸಭೆ ಸೇರಿ ಮೂಲಭೂತ ಸೌಲಭ್ಯ ನೀಡಿ ಇಲ್ಲದಿದ್ದರೇ ಮತ ಕೇಳಲು ಬರಬೇಡಿ, ನಾವು ಓಟು ಹಾಕುವುದಿಲ್ಲ ಎಂಬ ನಿರ್ಧಾರ ಕೈಗೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.