Parliament security lapse: ಪುಲ್ವಾಮ ದಾಳಿಗೂ ಮೊದಲು ಇಂಟಲಿಜೆನ್ಸ್ ಎಚ್ಚರಿಕೆ ನೀಡಿದ್ದರೂ ಸಹ ದುರಂತ ನಡೆಯಲು ಅನುವು ಮಾಡಿಕೊಡಲಾಗಿತ್ತು. ಈಗ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸುಳಿವು ನೀಡಿದ್ದರೂ ಸಹ ಭದ್ರತೆಯನ್ನು ಬಿಗಿಗೊಳಿಸದೆ ದಾಳಿಗೆ ಅನುವು ಮಾಡಿಕೊಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
Parliament Attack: ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ. ಬಿರ್ಲಾ ಅವರು ಈ ಕೂಡಲೇ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
Lok Sabha security breach: ಮಾಹಿತಿ ಪ್ರಕಾರ ಆರೋಪಿಗಳನ್ನು ಮೈಸೂರು ಮೂಲದ ಇಂಜಿನಿಯರ್ ಮನೋರಂಜನ್ ಡಿ ಮತ್ತು ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ವಿಸಿಟಿಂಗ್ ಪಾಸ್ ಪಡೆದು ಸದನ ಪ್ರವೇಶಿಸಿ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ಬಳಿಕ ಆತಂಕ ಸೃಷ್ಟಿಸುವ ಘಟನೆಗೆ ಸಾಕ್ಷಿಯಾಗಿದ್ದಾರೆ.
Parliament Attack: ಸಂಸತ್ತಿನ ಭದ್ರತೆಯಲ್ಲಿ ಭಾರೀ ಲೋಪ ಎಸಗಿರುವುದು ಬೆಳಕಿಗೆ ಬಂದಿದೆ. ಬುಧವಾರ ಲೋಕಸಭೆಯ ಕಲಾಪ ನಡೆಯುತ್ತಿದ್ದಾಗ ಏಕಾಏಕಿ ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಪ್ರೇಕ್ಷಕರ ಗ್ಯಾಲರಿಯಿಂದ ಏಕಾಏಕಿ ಇಬ್ಬರು ಯುವಕರು ಸದನಕ್ಕೆ ಜಿಗಿದಿದ್ದಾರೆ.
ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ.
Security breach at Parliament: ನೂತನ ಸಂಸತ್ ಭವನದಲ್ಲಿ ಉಂಟಾದ ಈ ಭದ್ರತಾ ಲೋಪದ ಬಗ್ಗೆ ಸಂಸದರು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
Woman Reservation Bill: ಸಂಸತ್ತಿನ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿದೆ. ಇದರ ಪರವಾಗಿ 454 ಮತಗಳು ಚಲಾವಣೆಗೊಂಡರೆ, ವಿರುದ್ಧ ಕೇವಲ 2 ಮತಗಳು ಚಲಾವಣೆಯಾದವು. ಈ ಇಬ್ಬರು ವ್ಯಕ್ತಿಗಳು ಯಾರು ಎಂಬುದು ಈಗ ಮುಖ್ಯವಾದ ಪ್ರಶ್ನೆಯಾಗಿದೆ.
ಮಂಗಳವಾರ ಇಲ್ಲಿನ ನೂತನ ಸಂಸತ್ ಭವನದ ಲೋಕಸಭೆಯಲ್ಲಿ ನರೇಂದ್ರ ಮೋದಿ ಸರ್ಕಾರ ಹೊಸ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿತು. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೊಸ ಸಂಸತ್ ಭವನದಲ್ಲಿ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿದರು. ನಾರಿ ಶಕ್ತಿ ವಂದನ್ ಅಧಿನಿಯಂ ಅಂಗೀಕಾರವಾದರೆ, ಲೋಕಸಭೆಯಲ್ಲಿ ಮಹಿಳೆಯರ ಸ್ಥಾನಗಳ ಸಂಖ್ಯೆ 181 ಕ್ಕೆ ಏರಲಿದೆ ಎಂದು ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಸೀಟುಗಳನ್ನು ಮೀಸಲಿಡುವ ಮಸೂದೆಗೆ ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಸರ್ಕಾರವು ಅದನ್ನು ಇನ್ನೂ ಅಧಿಕೃತವಾಗಿ ಘೋಷಿಸಬೇಕಿದೆ.
Haveri Lok Sabha Constituency : ಹಾವೇರಿ ಲೋಕಸಭೆ ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರ ಕಣ್ಣುಬಿದ್ದಿದೆ. ಈ ಹಿನ್ನಲೆ ಹಾವೇರಿ ಲೋಕ ಕ್ಷೇತ್ರದಲ್ಲಿ ಕೆಲ ನಾಯಕರ ತಾಲೀಮು ಶುರುವಾಗಿದೆ. ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕುಟುಂಬ ಸಮೇತ ಏಲಕ್ಕಿ ನಾಡಿಗೆ ಆಗಮಿಸಿ 'ಲೋಕಸಭೆ ಸಮರದ ಮುನ್ಸೂಚನೆ ನೀಡಿದರು. ಈ ಕುರಿತು ಒಂದು ವರದಿ ಇಲ್ಲಿದೆ..
ಬಿಜೆಪಿ 13 ಹಾಲಿ ಸಂಸದರಿಗಿಲ್ಲ ಲೋಕಸಭೆ ಟಿಕೆಟ್..? ಅಸಮಾಧಾನ ಹೊರ ಹಾಕಿದ ಬಿಜೆಪಿಯ ನಾಯಕರು ಇಂತಹ ತೀರ್ಮಾನದಿಂದ ಪಕ್ಷಕ್ಕೆ ಹಿನ್ನಡೆ ಎಂದು ಕಿಡಿ ಬಹಿರಂಗವಾಗಿಯೇ ವಿಷಾದ ವ್ಯಕ್ತಪಡಿಸಿದ ನಾಯಕರು
'ದೇಶದಲ್ಲಿ ಜೈವಿಕ ಇಂಧನ, ಜಲಾನಯನ ಸಂರಕ್ಷಣೆ ಸೇರಿದಂತೆ ಹಲವು ಪ್ರಯೋಗಗಳನ್ನು ಮಾಡುತ್ತಿದ್ದೇನೆ. ಬಂಜರು ಭೂಮಿ, ಹವಾಮಾನ ಬದಲಾವಣೆ ಮತ್ತು ಜಲ ಸಂರಕ್ಷಣೆ ಕ್ಷೇತ್ರದಲ್ಲಿ ಹಲವು ಪ್ರಯೋಗಗಳ ಸಾಧ್ಯತೆಗಳಿವೆ.
ಎಂಟು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವುದರಿಂದ ಹಿಡಿದು ಲುಟ್ಯೆನ್ಸ್ನ ದೆಹಲಿಯ ತನ್ನ ಅಧಿಕೃತ ಬಂಗಲೆಯನ್ನು ಕಳೆದುಕೊಳ್ಳುವವರೆಗೆ,ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಲೋಕಸಭೆಯಿಂದ ಅನರ್ಹಗೊಳಿಸುವಿಕೆಯು ಹಲವಾರು ಸಂಭವನೀಯ ಪರಿಣಾಮಗಳನ್ನು ಹೊಂದಿದೆ.
Govt Employees Pension : ಈ ಬಗ್ಗೆ ಜೆಪಿಸಿ ರಚನೆಯಾಗಬೇಕು ಎಂದು ವಿರೋಧ ಪಕ್ಷಗಳ ಸಂಸದರ ಒತ್ತಾಯ ಕೇಳಿಬಂದಿತ್ತು. 2023 ರ ಹಣಕಾಸು ಮಸೂದೆಯನ್ನು ಹೆಚ್ಚಿನ ಕೂಗುಗಳ ನಡುವೆ ಅಂಗೀಕರಿಸಲಾಯಿತು. ಈ ವೇಳೆ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.