ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಪ್ರಸ್ತಾವಿತ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ, 2021 ಅನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಆ ಮೂಲಕ ಈಗ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಗೆ ಭಾರಿ ಹಿನ್ನಡೆಯುಂಟಾಗಿದೆ.
BJP ಪಕ್ಷದ ಲೋಕಸಭೆಯ ಪ್ರಮುಖ ವ್ಹಿಪ್ ಮುಖ್ಯಸ್ಥ ರಾಕೇಶ್ ಸಿಂಗ್ ಭಾರತೀಯ ಜನತಾ ಪಕ್ಷದ ಲೋಕಸಭೆಯ ಸಂಸದರಿಗೆ 3 ಲೈನ್ ವ್ಹಿಪ್ ಜಾರಿಗೊಳಿಸಿದ್ದಾರೆ. ಈ ವ್ಹಿಪ್ ನಲ್ಲಿ ಲೋಕಸಭೆಯ ಎಲ್ಲಾ BJP ಸಂಸದರು ಮಾರ್ಚ್ 22 ರಂದು ಸಂಪೂರ್ಣ ದಿನ ಸಂಸತ್ತಿನಲ್ಲಿ ಹಾಜರಿರುವುದು ಕಡ್ಡಾಯ ಎಂದು ಹೇಳಲಾಗಿದೆ.
ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಕಾಂಗ್ರೆಸ್ ನಾಯಕ ರವ್ನೀತ್ ಸಿಂಗ್ ಬಿಟ್ಟು ಅವರನ್ನು ಗುರುವಾರ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರನ್ನಾಗಿ ನೇಮಿಸಲಾಯಿತು.ಕಾಂಗ್ರೆಸ್ ನ ಬಂಗಾಳ ಘಟಕದ ಮುಖ್ಯಸ್ಥರಾದ ಶ್ರೀ ಚೌಧರಿ ಮುಂದಿನ ಎರಡು ತಿಂಗಳು ಚುನಾವಣೆಯಲ್ಲಿ ಸಕ್ರಿಯವಾಗಬೇಕಾಗಿರುವ ಹಿನ್ನಲೆಯಲ್ಲಿ ಈಗ ಬಿಟ್ಟು ಅವರನ್ನು ನೇಮಕ ಮಾಡಲಾಗಿದೆ.
ಈ ಎರಡು ಮಸೂದೆಗಳು ಬೆಳೆಗಳ ಎಂಎಸ್ಪಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಮತ್ತು ರೈತರಿಂದ ಎಂಎಸ್ಪಿ ಮೇಲೆ ಬೆಳೆಗಳ ಖರೀದಿ ಮುಂದುವರಿಯುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಸದನಕ್ಕೆ ಭರವಸೆ ನೀಡಿದರು.
ಠೇವಣಿದಾರರ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೇಲ್ವಿಚಾರಣೆಯಲ್ಲಿ ತರಲು 2020 ರ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯು ಅಂಗೀಕರಿಸಿತು.
COVID-19 ಸಾಂಕ್ರಾಮಿಕ ರೋಗದಿಂದ ಉಂಟಾಗುವ ಅಗತ್ಯತೆಗಳನ್ನು ಪೂರೈಸಲು ಲೋಕಸಭೆ ಮಂಗಳವಾರ ಎಲ್ಲಾ ಸಂಸದರ ವೇತನವನ್ನು ಶೇಕಡಾ 30ರಷ್ಟು ಕಡಿತಗೊಳಿಸುವ ಮಸೂದೆಯನ್ನು ಅಂಗೀಕರಿಸಿತು. ಸಂಸತ್ತಿನ ಸದಸ್ಯರ ವೇತನ, ಭತ್ಯೆ ಮತ್ತು ಪಿಂಚಣಿ (ತಿದ್ದುಪಡಿ) ಮಸೂದೆ, 2020 ಅನ್ನು ಕೆಳಮನೆಯ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದರು.
ಸೋಮವಾರದಿಂದ ಪ್ರಾರಂಭವಾಗಲಿರುವ ಸಂಸತ್ತಿನ ಅಧಿವೇಶನಕ್ಕೆ ಮುಂಚಿತವಾಗಿ, ಲೋಕಸಭೆಯ ಐವರು ಸದಸ್ಯರು ಕರೋನವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಇತರ ಸಚಿವರುಗಳ ಕರೋನವೈರಸ್ ಪರೀಕ್ಷೆಗಳು ಇನ್ನೂ ನಡೆಯುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.