ಉಡುಪಿ ಭಾಗದ ಸುಶಿಕ್ಷಿತರು ವಿದೇಶ ಪ್ರಯಾಣ ಏಕೆ..? - ಜ್ವಲಂತ ಸಮಸ್ಯೆ ಹಲವು, ತಲೆಕೆಟ್ಟ ನಿರ್ಧಾರ ಕೊನೆ ಎಂದು? - ಶೋಭಾ 10 ವರ್ಷದಿಂದ ಸಂಸದರಾಗಿದ್ದರೂ ಸಂತೆಕಟ್ಟೆ ಅಭಿವೃದ್ಧಿ ಕಂಡಿಲ್ಲ. - ಹೆದ್ದಾರಿ ನಿರ್ಮಿಸಿ 20 ಕಿ.ಮೀ.ಗೊಂದು ಟೋಲ್ ಪ್ಲಾಜಾ ಏಕೆ..?
ಉಡುಪಿ ಕ್ಷೇತ್ರದಲ್ಲಿ ಕೂದಲೆಳೆ ಅಂತರದಲ್ಲಿ ʻಕೈʼ ಕೇಕೆ..!ಎಂಟು ಕ್ಷೇತ್ರಗಳ ಪೈಕಿ ಬಿಜೆಪಿ-ಕಾಂಗ್ರೆಸ್ ಸಮಾನ ಹಂಚಿಕೆ.ಉಡುಪಿ ಜಿಲ್ಲೆಯಲ್ಲಿ ಕೇಸರಿ ಕಿಲಕಿಲ, ಚಿಕ್ಕಮಗಳೂರಲ್ಲಿ ಕೈ ಲಕಲಕ.ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಜಯಪ್ರಕಾಶ್ ಹೆಗ್ಡೆ ಸೆಣಸಾಟ.
ಮಾದರಿ ನೀತಿ ಸಂಹಿತೆ ಮುಗಿಯುವವರೆಗೆ ಟೆಂಡರ್ ಅನ್ನು ಅಂತಿಮಗೊಳಿಸಲು ಅನುಮತಿ ಸಿಗುವುದಿಲ್ಲ. ಈ ಕಾರಣದಿಂದ ಯಾವುದೇ ಬಿಡ್ಗಳು ಬಂದಿಲ್ಲ ಎಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ.ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್ಎ ನಲ್ಲೇ ಇದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಕಾಂಗ್ರೆಸ್ನ ಹೈಕಮಾಂಡ್ ನೀಡುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡುತ್ತೇವೆ. ಆದರೆ ಇಲ್ಲಿ ನಡೆದಿರುವ ರಾಜೀನಾಮೆಯ ಪ್ರಹಸನ ನನಗೆ ಆಶ್ಚರ್ಯ ಉಂಟುಮಾಡಿದೆ ಎಂದು ಮುನಿಯಪ್ಪ ಹೇಳಿದ್ದಾರೆ.
ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎನ್ನುವುದನ್ನು ಎಂದು ಬಹಿರಂಗಪಡಿಸಲಿ ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಕೇವಲ ಸಚಿವರ ಮಕ್ಕಳಿಗೆ ಮಾತ್ರವಲ್ಲ, ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು ಎಂದು ಡಿಕೆಶಿ ಹೇಳಿದ್ದಾರೆ.
Lokasabha Election 2024: ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ? ಎಂದು ಅವರು ಕುಟುಕಿದರು.
ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಚುನಾವಣಾ ಕರಪತ್ರಗಳು ಮತ್ತು ಪೆÇೀಸ್ಟರ್ಗಳ ಮುದ್ರಣ ಮತ್ತು ಪ್ರಕಟಣೆಯ ಮೇಲೆ ಅಪಪ್ರಚಾರ ಕುರಿತಂತೆ ಸುಳ್ಳು ಮಾಹಿತಿಯನ್ನು ಮುದ್ರಿಸದಂತೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
Lokasabha Election 2024:ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 16 ಫ್ಲೈಯಿಂಗ್ ಸ್ಕ್ವಾಡ್, 24 ಎಸ್ಎಸ್ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ.
Lokasabha Election 2024:ಮಹಾರಾಷ್ಟ್ರದಲ್ಲಿ ನಿಯೋಜಿಸಲಾದ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಹೆಚ್ಚುವರಿ ಆಯುಕ್ತರು ಅಥವಾ ಇತರ ನಿಗಮಗಳ ಉಪ ಆಯುಕ್ತರನ್ನು ಸಮಾನವಾಗಿ ವರ್ಗಾಯಿಸಲು ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ.
Lokasabha Election 2024: ಲೋಕಸಭೆ ಚುನಾವಣೆಗೆ ಕೆಲವು ದಿನಗಳು ಮಾತ್ರ ಬಾಕಿಯಿದೆ. ದಿನಾಂಕ ಘೋಷಣೆಗೆ ದಿನಗಳು ಸಮೀಪಿಸುತ್ತಿರುವಂತೆ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.
ಭಾರತ ಸಂಸತ್ತು ಎರಡು ಸದನಗಳನ್ನು ಹೊಂದಿದೆ. ಇವುಗಳನ್ನು ರಾಜ್ಯಸಭೆ ಮತ್ತು ಲೋಕಸಭೆ ಎಂದು ಕರೆಯಲಾಗುತ್ತದೆ. ಲೋಕಸಭಾ ಸದನವೂ 545 ಸದಸ್ಯರನ್ನು ಹೊಂದಿದ್ದು, ಭಾರತದ ಸಂವಿಧಾನದ ಪ್ರಕಾರ ಈ ಪೈಕಿ 543 ಸದಸ್ಯರು ಚುನಾವಣಾ ಕ್ಷೇತ್ರಗಳಿಂದ ಐದು ವರ್ಷಗಳಿಗೊಮ್ಮೆ ಒಂದು ಅವಧಿಗಾಗಿ ಚುನಾಯಿಸಲ್ಪಡುತ್ತಾರೆ. ಇವರೆಲ್ಲರೂ ಚುನಾಯಿತ ಜನಪ್ರತಿನಿಧಿಗಳಾಗಿತ್ತಾರೆ, ಅಂದರೆ ಜನರಿಂದ ಆಯ್ಕೆಯಾಗುತ್ತಾರೆ. ಸಂಸದರ ಆಯ್ಕೆ ಮಾಡಲು ಮತದಾರರ ಪ್ರಭುಗಳೇ ಅಂತಿಮ. ಅಭಿವೃದ್ಧಿ ಲೆಕ್ಕಚಾರ ಸೇರಿದಂತೆ ನಾನಾ ವಿಷಯಗಳನ್ನು ಯೋಚಿಸಿ ತಮ್ಮ ಮತವನ್ನು ಮತದಾರರು ಚಲಾಯಿಸುತ್ತಾರೆ. ಈ ಸಲ ಯಾವ ಪಕ್ಷದಿಂದ ಯಾರು ಅಭ್ಯರ್ಥಿಯಾದ್ರೆ ಸೂಕ್ತ ಅನ್ನೋ ಸಮಗ್ರ ಮಾಹಿತಿಯನ್ನು ವೀಕ್ಷಕರ ಮುಂದಿಡುವುದೇ ಲೋಕಾ ಲೆಕ್ಕಚಾರ, ಸಂಸದರ ರಿಪೋರ್ಟ್ ಕಾರ್ಡ್..!
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಶಾಂತಿಯುತ ಹಾಗೂ ಮುಕ್ತ ರೀತಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಹೆಚ್.ಗಂಗಾಧರ್ ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ, ದೇಶಕ್ಕೆ ಪ್ರಧಾನ ಮಂತ್ರಿಯನ್ನು ಆರಿಸೋಕೆ, ಜನ ಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸುವ ಈ ಕೆಲಸಕ್ಕೆ ನಾವು ನೀವು ಎಲ್ಲರೂ ಸಾಕ್ಷಿಯಾಗ್ತೀವಿ.ಯಾಕಂದ್ರೆ, ದೇಶದ ಪ್ರಧಾನ ಮಂತ್ರಿಯನ್ನು ಆರಿಸೋದು ನಾವೆ, ನಮ್ಮ ಕ್ಷೇತ್ರದಿಂದ ಆಯ್ಕೆಯಾಗಿ ಹೋಗುವ ಸಂಸದರು ಎಂಬ ಸ್ಥಾನಕ್ಕೆ ತನ್ನದೆ ಆದ ಗೌರವ ಮತ್ತು ಜವಾಬ್ದಾರಿಗಳಿವೆ. ಆದ್ದರಿಂದ ಸಂಸದರನ್ನು ಆಯ್ಕೆ ಮಾಡುವ ಚುನಾವಣೆಯಲ್ಲಿ ಮತದಾರರು ಎಚ್ಚರಿಕೆಯಿಂದ ಇರಬೇಕಾಗುತ್ತೆ. ನಾಯಕರು ಮತದಾರನ್ನ ತಮ್ಮತ್ತ ಸೆಳೆಯಲು, ರಾಜಕೀಯ ಲೆಕ್ಕಾಚಾರ ಹಾಕ್ತಾರೆ. ಇದೇ ಲೋಕಸಭೆ ಲೆಕ್ಕಾಚಾರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.