ಇಂತಹ ಬೆಂಬಲವನ್ನು ವಿರೋಧಿಸಿ ತಮ್ಮ ಮತ್ತು ಇತರ ಶಾಸಕರಿಂದ ಬಂಡಾಯದ ಬಾವುಟ ಹಾರಿಸಿದ ಶಿಂಧೆ, ಬಾಳ್ ಠಾಕ್ರೆಯವರ ಶಿವಸೇನೆಯನ್ನು ಉಳಿಸಲು ತಮ್ಮ ಪ್ರಾಣವನ್ನು ಕೊಡಲು ಸಿದ್ಧ ಎಂದು ಅವರು ಹೇಳಿದ್ದಾರೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಭಾನುವಾರ ರಾತ್ರಿ ಟ್ವೀಟ್ಗಳನ್ನು ಮಾಡಿದ್ದಾರೆ.
Maharashtra Political Crisis: ಮಹಾರಾಷ್ಟ್ರದಲ್ಲಿ ಮುಂದುವರೆದ ರಾಜಕೀಯ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಶಿವಸೇನಾ ಸಂಸದ ಸಂಜಯ್ ರಾವುತ್ ಬಂಡಾಯ ಶಾಸಕರ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಹಿಂದೆ ಇರೋದು ಕೇಂದ್ರ ಗೃಹ ಸಚಿವ ಅಮಿತ್ ಶಾ. ಅದರಲ್ಲಿ ಯಾವುದಾದರೂ ಸಂಶಯ ಇದೆಯಾ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಎಚ್ಡಿಕೆ, ವಿರೋಧ ಪಕ್ಷಗಳೇ ಇರಬಾರದು. ಬಿಜೆಪಿ ಹೊರತುಪಡಿಸಿ ಯಾವುದೇ ಸರ್ಕಾರ ಈ ದೇಶದಲ್ಲಿ ಇರಬಾರದು ಎಂಬುದೇ ಬಿಜೆಪಿಯ ಸಿದ್ಧಾಂತ. ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟಿನಲ್ಲಿ ನಮ್ಮ ರಾಜ್ಯದ ಬಿಜೆಪಿ ಮುಖಂಡರ ಪಾತ್ರ ಇಲ್ಲ ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸಚಿವ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಂಡಾಯಗಾರರಿಗೆ ಪಕ್ಷ ತೊರೆದು ಚುನಾವಣೆ ಎದುರಿಸಲು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಸವಾಲು ಹಾಕಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಹಿಂದೆ ಇರೋದು ಕೇಂದ್ರ ಗೃಹ ಸಚಿವ ಅಮಿತ್ ಶಾ. ಅದರಲ್ಲಿ ಯಾವುದಾದರೂ ಸಂಶಯ ಇದೆಯಾ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಎಚ್ಡಿಕೆ, ವಿರೋಧ ಪಕ್ಷಗಳೇ ಇರಬಾರದು. ಬಿಜೆಪಿ ಹೊರತುಪಡಿಸಿ ಯಾವುದೇ ಸರ್ಕಾರ ಈ ದೇಶದಲ್ಲಿ ಇರಬಾರದು ಎಂಬುದೇ ಬಿಜೆಪಿಯ ಸಿದ್ಧಾಂತ. ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟಿನಲ್ಲಿ ನಮ್ಮ ರಾಜ್ಯದ ಬಿಜೆಪಿ ಮುಖಂಡರ ಪಾತ್ರ ಇಲ್ಲ ಎಂದಿದ್ದಾರೆ.
ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಎದುರಿಸುತ್ತಿರುವ ಶಿವಸೇನೆಯ ಮುಖ್ಯ ವಕ್ತಾರ ಸಂಜಯ್ ರಾವುತ್ ಅವರು ಇಂದು ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಬೀಡುಬಿಟ್ಟಿರುವ ಬಂಡಾಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಪತನ ವಿಚಾರವಾಗಿ ಪ್ರತಿಕ್ರೀಯಿಸಿ ಮಾತನಾಡಿದ್ರು. ಮಹಾರಾಷ್ಟ್ರ ಸರ್ಕಾರದ ಆಪರೇಷನ್ ವಿಚಾರದ ಹಿಂದೆ ಅಮಿತ್ ಶಾ ಇದ್ದಾರೆ. ಅದರಲ್ಲಿ ಯಾವುದಾದರೂ ಸಂಶಯ ಇದೆಯಾ!? ರ್ನಾಟಕದಲ್ಲಿ ಅವತ್ತಿನ ಪರಿಸ್ಥಿತಿ ದುರುಪಯೋಗ ಪಡಿಸಿಕೊಂಡರು.
ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆಗೆ 40 ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂದು ಹೇಳಲಾಗಿದೆ. ಇದೇ ವೇಳೆ ಮಾತನಾಡಿದ ಬಂಡಾಯ ಶಿವಸೇನೆ ಬಣದ ಶಾಸಕ ದೀಪಕ್ ಕೇಸರ್ಕರ್, ನಾವೇ ನಿಜವಾದ ಶಿವಸೇನೆ, ನಮಗೆ ಮೂರನೇ ಎರಡರಷ್ಟು ಬಹುಮತವಿದೆ ಎಂದು ಹೇಳಿದ್ದಾರೆ.
ಶಿಂಧೆ ಬೆಂಬಲಿಗರು ತಮ್ಮ ಪ್ರತ್ಯೇಕ ಬಣದ ಹೆಸರನ್ನು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವರು 'ಶಿವಸೇನೆ-ಬಾಳಾಸಾಹೇಬ್ ಠಾಕ್ರೆ ಬಣ' (Shiv Sena (Balasaheb)) ಎಂಬ ಹೆಸರನ್ನು ಇಡಲು ನಿರ್ಧರಿಸಿದೆ.
ಮಹಾರಾಷ್ಟ್ರದಲ್ಲಿ ಸರ್ಕಾರ ತೆಗೆಯಲು ಬಿಜೆಪಿ ಹೊರಟಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವ್ರು ಇದ್ದಾರೆ ಎಂದು ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಲು ಶಿಂಧೆ ಮತ್ತು ಇತರ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ಇಂದು ಮುಂಬೈಗೆ ಶಿವಸೇನೆ ನಾಯಕ ಏಕನಾಥ್ ಶಿಂಧೆ ತೆರಳಿದ್ದಾರೆ ಎನ್ನಲಾಗಿದೆ.
ಮಾಹಿತಿಯ ಪ್ರಕಾರ, ಮಹಾರಾಷ್ಟ್ರದ ಸತಾರಾದಿಂದ ಶಿವಸೇನೆ ನಾಯಕ ಸಂಜಯ್ ಭೋಸ್ಲೆ ಕೈಯಲ್ಲಿ ಪೋಸ್ಟರ್ ಹಿಡಿದು ರಾಡಿಸನ್ ಬ್ಲೂ ಹೋಟೆಲ್ಗೆ ಆಗಮಿಸಿದ್ದಾರೆ. ಈ ಪೋಸ್ಟರ್ನಲ್ಲಿ ಮರಾಠಿಯಲ್ಲಿ 'ಶಿವಸೇನೆ ಜಿಂದಾಬಾದ್, ಏಕನಾಥ್ ಶಿಂಧೆ ಭಾಯ್ ವಾಪಾಸ್ ಮಾತೋಶ್ರೀ ಚಲೋʼ ಎಂದು ಬರೆಯಲಾಗಿದೆ.
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಹಾರಾಷ್ಟ್ರ ಸರ್ಕಾರವನ್ನು ಅನೈತಿಕ ರೀತಿಯಲ್ಲಿ ಬೀಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣ ಈಗ ಮಹಾರಾಷ್ಟ್ರದಲ್ಲಿ ಬಂಡಾಯ ಎದ್ದಿರುವ ಬೆನ್ನಲ್ಲೇ ಶಿವಸೇನಾ ವಕ್ತಾರ ಸಂಜಯ್ ರಾವತ್ ಅವರು ಬಂಡಾಯ ಶಾಸಕರಿಗೆ ಬಿಜೆಪಿ ಜೊತೆ ವೀಲಿನವಾಗಿರಿ, ನಾವು ಹೊಸದಾಗಿ ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಮಧ್ಯೆ, ಶಿವಸೇನೆ ಶಾಸಕರೊಬ್ಬರ ಪತ್ರ ವೈರಲ್ ಆಗುತ್ತಿದೆ, ಇದು ಶಿವಸೇನೆಯ ಉಳಿದ ಶಾಸಕರ ಭಾವನೆಗಳ ಸಂಕೇತ ಎಂದು ಬಣ್ಣಿಸಲಾಗುತ್ತಿದೆ.
ಈ ಕುರಿತು ಫೇಸ್ಬುಕ್ ಲೈವ್ ಬಂದು ಮರಾಠಿ ಭಾಷೆಯಲ್ಲಿ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, ನನಗೆ ಅಧಿಕಾರದ ದುರಾಸೆ ಇಲ್ಲ. ಒಂದು ವೇಳೆ ನಾನು ಶಾಸಕರ ವಿಶ್ವಾಸ ಕಳೆದುಕೊಂಡಿದ್ದರೆ ಈ ಕುರ್ಚಿಗೆ ನಾನು ಅರ್ಹನಲ್ಲ ಎಂದರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.