ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್ಗೆ ಮಾಸ್ಟರ್ ಸ್ಟ್ರೋಕ್ ನೀಡಿ ರಾಜ್ಯದಲ್ಲಿ ಬಿಜೆಪಿ-ಎನ್ಸಿಪಿ ಮೈತ್ರಿ ಸರ್ಕಾರ ರಚಿಸಿದೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರೆ, ಎನ್ಸಿಪಿಯಾ ಅಜಿತ್ ಪವಾರ್ ಉಪಮುಖ್ಯಮಂತ್ರಿ ಪದಗ್ರಹಣ ಮಾಡಿದರು.
ಶಿವಸೇನೆ ಎನ್ಸಿಪಿ ಮತ್ತು ಕಾಂಗ್ರೆಸ್ ಜೊತೆಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಇತ್ತ ಸಜ್ಜಾಗಿರುವಂತೆ, ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ವಿರುದ್ಧ ರಾಜ್ಯದ ಮತದಾರರಿಗೆ ಮೋಸ ಮಾಡಿದ್ದಕ್ಕಾಗಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.
ಕಾಂಗ್ರೆಸ್-ಎನ್ಸಿಪಿ-ಶಿವಸೇನೆ ಮೈತ್ರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದರೆ ಮಹತ್ವಾಕಾಂಕ್ಷೆಯ ಬುಲೆಟ್ ರೈಲು ಯೋಜನೆಗೆ ರಾಜ್ಯ ಸರ್ಕಾರದ ಹಣವನ್ನು ನೀಡುವುದು ಅನುಮಾನ ಎನ್ನಲಾಗುತ್ತದೆ.
ಶಿವಸೇನೆಯ (Shiv Sena) ಮುಖವಾಣಿ ಸಾಮ್ನಾದಲ್ಲಿ ದೇಶದ ಆರ್ಥಿಕತೆ(Economy)ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ತೀವ್ರ ದಾಳಿ ನಡೆಸಿದೆ. ಸಿಎಂಐಇ(CMIE) ಬಿಡುಗಡೆ ಮಾಡಿದ ವರದಿಯನ್ನು ಉಲ್ಲೇಖಿಸಿ ಶಿವಸೇನೆ ಕೇಂದ್ರ ಸರ್ಕಾರವನ್ನು ಟೀಕಿಸಿದೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಉಭಯ ಪಕ್ಷಗಳು ತಮ್ಮ ಚರ್ಚೆಯನ್ನು ಪೂರ್ಣಗೊಳಿಸಿವೆ ಮತ್ತು ಈಗ ಮೈತ್ರಿಕೂಟದ ರೂಪುರೇಷೆಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಶಿವಸೇನೆಯೊಂದಿಗೆ ಮಾತುಕತೆ ನಡೆಸಲಿದೆ ಎಂದು ಕಾಂಗ್ರೆಸ್-ಎನ್ಸಿಪಿ ಒಕ್ಕೂಟ ಗುರುವಾರ ತಿಳಿಸಿದೆ.
ಶಿವಸೇನೆ, ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಮುಖ್ಯಮಂತ್ರಿ ಹುದ್ದೆಯು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಹೋಗುವ ಸಾಧ್ಯತೆ ಇದೆ ಎಂದು ತಿಳಿಸಿವೆ.
ರಾಜಕೀಯದ ಪ್ರಮುಖ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆಯೊಂದಿಗಿನ ಮೈತ್ರಿಗೆ ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಹಾರಾಷ್ಟ್ರದಲ್ಲಿ ರೈತರ ಸಂಕಷ್ಟದ ಬಗ್ಗೆ ತಿಳಿಸಿದರು ಮತ್ತು ಬೆಳೆ ಹಾನಿ ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ಕೃಷಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅವರ ತುರ್ತು ಮಧ್ಯಸ್ಥಿಕೆಗೆ ಕೋರಿದರು.
ಮಹಾರಾಷ್ಟ್ರದ ರಾಜಕೀಯ ನಾಟಕ ಈಗ ದೆಹಲಿಗೆ ಸ್ಥಳಾಂತರಗೊಂಡಿದೆ. ಮೊದಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾದರು. ಇದಾದ ನಂತರ ಶಿವಸೇನೆ ಸಂಸದ ಸಂಜಯ್ ರೌತ್ ಅವರು ಎನ್ಸಿಪಿ ಮುಖ್ಯಸ್ಥರನ್ನು ಭೇಟಿ ಮಾಡಲು ಅವರ ನಿವಾಸವನ್ನು ತಲುಪಿದರು.
ಮಹಾರಾಷ್ಟ್ರದ ಮುಂದಿನ ಸರ್ಕಾರವನ್ನು ಶಿವಸೇನೆ ನೇತೃತ್ವ ವಹಿಸಲಿದ್ದು, ಕಾಂಗ್ರೆಸ್ ಮತ್ತು ಎನ್ಸಿಪಿ ಜೊತೆಗೆ ರಾಜ್ಯದ ಹಿತದೃಷ್ಟಿಯಿಂದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ಕಾರ್ಯರೂಪಕ್ಕೆ ಬರುತ್ತದೆ ಎಂದು ಪಕ್ಷದ ವಕ್ತಾರ ಸಂಜಯ್ ರೌತ್ ಶುಕ್ರವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದ್ದಕ್ಕಾಗಿ ಅಲ್ಲಿನ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಗುರಿಯಾಗಿಸಿಕೊಂಡು ಕೆಲವರು ಬಿಜೆಪಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ಮಹಾರಾಷ್ಟ್ರದ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿರುವ ಶಿವಸೇನಾ ವಕ್ತಾರ ಸಂಜಯ್ ರೌತ್ ಬಿಜೆಪಿ ಅಧ್ಯಕ್ಷ ಶಾ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಉಭಯ ಕಡೆಯವರ ನಡುವೆ ಮಾತುಕತೆ ಆರಂಭವಾಗಿದ್ದು, ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಹೇಳಿದರು.
ವಿಧಾನಸಭೆ ಚುನಾವಣಾ ಫಲಿತಾಂಶ ಮುಗಿದ ಸುಮಾರು 20 ದಿನಗಳ ನಂತರ ಯಾವುದೇ ಸರ್ಕಾರ ರಚನೆಯಾಗದಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟವು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತಕ್ಕೆ ಶಿಫಾರಸು ಮಾಡಿದೆ ಎಂಬ ವರದಿಗಳ ನಂತರ ಶಿವಸೇನೆ ಇಂದು ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.