ವಿಧಾನಸಭೆ ಚುನಾವಣಾ ಫಲಿತಾಂಶ ಮುಗಿದ ಸುಮಾರು 20 ದಿನಗಳ ನಂತರ ಯಾವುದೇ ಸರ್ಕಾರ ರಚನೆಯಾಗದಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟವು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತಕ್ಕೆ ಶಿಫಾರಸು ಮಾಡಿದೆ ಎಂಬ ವರದಿಗಳ ನಂತರ ಶಿವಸೇನೆ ಇಂದು ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆಗಿನ ಸಮರದೊಂದಿಗೆ ಎನ್ಡಿ ಮೈತ್ರಿಕೂಟದಿಂದ ಹೊರ ಬಂದಿರುವ ಶಿವಸೇನಾ ಈಗ ಕಾಂಗ್ರೆಸ್ ಹಾಗೂ ಎನ್ಸಿಪಿ ನೆರವಿನೊಂದಿಗೆ ಸರ್ಕಾರ ರಚನೆಗೆ ಮುಂದಾಗಿದೆ. ಈಗ ಶಿವಸೇನಾ ಬಿಜೆಪಿ ಸಖ್ಯದಿಂದ ಹೊರಬಂದಿರುವುದು ಎನ್ಡಿಎ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಶಿವಸೇನೆ-ಎನ್ಸಿಪಿ ಬಿಡ್ಗೆ ಹೊರಗಿನ ಬೆಂಬಲ ನೀಡುವುದನ್ನು ಕಾಂಗ್ರೆಸ್ ಪರಿಗಣಿಸುತ್ತಿರುವುದರಿಂದ, ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಮಧ್ಯಕಾಲೀನ ಚುನಾವಣೆಗಳ ಬಗ್ಗೆ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಎಚ್ಚರಿಕೆ ನೀಡಿದ್ದಾರೆ.
ಸೈದ್ಧಾಂತಿಕ ಹೊಂದಾಣಿಕೆಯಿಲ್ಲದಿದ್ದರೂ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವಲ್ಲಿ ಶಿವಸೇನೆಗೆ ಬೆಂಬಲ ನೀಡುವುದಕ್ಕೆ ಕಾಂಗ್ರೆಸ್ ಸಿದ್ದತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅಂತಿಮ ಕರೆ ತೆಗೆದುಕೊಳ್ಳಲು ಅಧಿಕಾರ ನೀಡಿದೆ ಎಂದು ತಿಳಿದುಬಂದಿದೆ.
ದೇವೇಂದ್ರ ಫಡ್ನವೀಸ್ ಮತ್ತು ಇತರ ಹಿರಿಯ ಬಿಜೆಪಿ ಮುಖಂಡರು ಭಾನುವಾರ ಸಂಜೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿಯಾಗಿ ಮಿತ್ರಪಕ್ಷ ಶಿವಸೇನೆ ಸಹಕರಿಸಲು ಸಿದ್ಧವಿಲ್ಲದ ಕಾರಣ ಸರ್ಕಾರವನ್ನು ರಚಿಸುವ ಹಕ್ಕು ಪಕ್ಷಕ್ಕೆ ಇಲ್ಲ ಎಂದು ಹೇಳಿದ್ದಾರೆ.
ಶಿವಸೇನಾಗೆ ಕಾಂಗ್ರೆಸ್ ಮತ್ತು ಎನ್ಸಿಪಿ ಮೈತ್ರಿಕೂಟ ಬೆಂಬಲ ನೀಡಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಈಗ ಕಾಂಗ್ರೆಸ್ ನ ನಾಯಕ ಮಲ್ಲಿಕಾರ್ಜುನ್ ಖರ್ಗೆ ಜನರು ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಲು ಹೇಳಿದ್ದಾರೆ ಅದನ್ನು ಪಕ್ಷ ಸ್ವೀಕರಿಸಿದೆ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮುಂದಿನ ಸರ್ಕಾರ ರಚಿಸಲು ಎನ್ಸಿಪಿ-ಕಾಂಗ್ರೆಸ್ ಮೈತ್ರಿಕೂಟವನ್ನು ಆಹ್ವಾನಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ರಾಜ್ಯಪಾಲರು ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ. 50:50 ಸೂತ್ರದನ್ವಯ ಸರ್ಕಾರ ರಚಿಸಬೇಕೆಂದು ಶಿವಸೇನಾ ಪಟ್ಟು ಹಿಡಿದಿರುವ ಬೆನ್ನಲ್ಲೇ ಈಗ ಬಿಜೆಪಿಗೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿರುವುದು ರಾಜಕೀಯ ವಲಯದಲ್ಲಿ ಕೂತೂಹಲ ಮೂಡಿಸಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ತಮ್ಮ ಪಕ್ಷ ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಹುಸೇನ್ ದಲ್ವಾಯ್ ಶುಕ್ರವಾರ ಹೇಳಿದ್ದಾರೆ. ಕಾಂಗ್ರೆಸ್ ಶಾಸಕರು ಪಕ್ಷದ ಹೈಕಮಾಂಡ್ ನಿರ್ದೇಶನವನ್ನು ಅನುಸರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ನಡೆಸುವ ವಿಚಾರದಲ್ಲಿ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.