Building collapses in Mumbai Kurla: ಮಹಾರಾಷ್ಟ್ರದ ಮುಂಬೈನ ಕುರ್ಲಾ ನಾಯ್ಕ್ ನಗರ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 4 ಅಂತಸ್ತಿನ ಕಟ್ಟಡ ಕುಸಿದಿದೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ.
ವಿಕೃತಿ ಮನಸ್ಸಿನವರು ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.. ಎಂಇಎಸ್ ಪ್ರತಿಭಟನೆ ವಿಚಾರ ಬೆಳಗಾವಿಯಲ್ಲಿ ಮಾತನಾಡಿದ ಕಾರಜೋಳ, ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಮರಾಠಿಯಲ್ಲಿ ದಾಖಲೆ ನೀಡಲು ಆಗ್ರಹಿಸಿ ಎಂಇಎಸ್ ಪ್ರತಿಭಟನೆ ನಡೆಸೋದ್ರಲ್ಲಿ ಅರ್ಥವಿಲ್ಲ. ಅವರೇನು ಪಾಕಿಸ್ತಾನದವರಲ್ಲ ಅಂತಾ ತಿರುಗೇಟು ಕೊಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿರುವುದು ಮೂರಾಬಟ್ಟೆ ಸರ್ಕಾರ ಎಂದು ಬೆಳಗಾವಿಯಲ್ಲಿ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.. ಕಾಂಗ್ರೆಸ್ ಮತ್ತು ಶಿವಸೇನೆ ಎಂದೂ ಹೊಂದಾಣಿಕೆ ಆಗಲು ಸಾಧ್ಯವಿಲ್ಲ. ನೀರಿಗೆ ಎಣ್ಣೆ ಸೇರಿಸಿದ ಹಾಗೆ ಆಗಿದೆ. ನೀರು ಎಣ್ಣೆ ಪ್ರತ್ಯೇಕ ಇರುತ್ತವೆ. ಶಿವಸೇನೆ ಹುಟ್ಟಿದ್ದು ಹಿಂದುತ್ವದ ಆಧಾರದ ಮೇಲೆ. ಅಧಿಕಾರದ ಆಸೆಗಾಗಿ ಉದ್ಧವ್ ಠಾಕ್ರೆ ತತ್ವ ಸಿದ್ಧಾಂತ ಇಲ್ಲದ ಪಕ್ಷದ ಜತೆಗೆ ಕೈಜೋಡಿಸಿ ಸರ್ಕಾರ ಮಾಡಿದ್ದೇ ಮಹಾ ಅಪರಾಧ ಎಂದಿದ್ದಾರೆ..
ಅವರಾಗೇ ನಮ್ಮ ಬಳಿ ಬಂದ್ರೆ ಸುಮ್ಮನೆ ಕೂರಲು ಬಿಜೆಪಿ ಸನ್ಯಾಸಿಗಳ ಪಕ್ಷ ಅಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.. ಮಹಾರಾಷ್ಟ್ರ ರಾಜಕೀಯ ಅಸ್ಥಿರತೆ ವಿಚಾರ ಪ್ರತಿಕ್ರಿಯೆ ನೀಡಿದ ನಿರಾಣಿ, ಕಾಂಗ್ರೆಸ್, ಎನ್ಸಿಪಿ, ಶಿವಸೇನೆ ಮೂರು ಸೇರಿ ಸರ್ಕಾರ ಮಾಡಿರುವುದೇ ಒಂದು ಅನೈತಿಕ. ನಿಶ್ಚಿತವಾಗಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ನಿರಾಣಿ ಹೇಳಿದ್ದಾರೆ
ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆಗೆ 40 ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂದು ಹೇಳಲಾಗಿದೆ. ಇದೇ ವೇಳೆ ಮಾತನಾಡಿದ ಬಂಡಾಯ ಶಿವಸೇನೆ ಬಣದ ಶಾಸಕ ದೀಪಕ್ ಕೇಸರ್ಕರ್, ನಾವೇ ನಿಜವಾದ ಶಿವಸೇನೆ, ನಮಗೆ ಮೂರನೇ ಎರಡರಷ್ಟು ಬಹುಮತವಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಪರಮೇಶ್ವರ್, ಮಹಾರಾಷ್ಟ್ರ ಸರ್ಕಾರ ಬೀಳಿಸೋದು ಬಿಜೆಪಿಯ ವ್ಯವಸ್ಥಿತ ಸಂಚು. ಅವರು ಕರ್ನಾಟಕದಲ್ಲೂ ಇದನ್ನೇ ಮಾಡಿದ್ದಾರೆ. ಬೇರೆ ರಾಜ್ಯದಲ್ಲಿಯೂ ಇದನ್ನೇ ಮಾಡಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ ಅಂತಾ ಹೇಳಿದ್ದಾರೆ.
ಶಿಂಧೆ ಬೆಂಬಲಿಗರು ತಮ್ಮ ಪ್ರತ್ಯೇಕ ಬಣದ ಹೆಸರನ್ನು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವರು 'ಶಿವಸೇನೆ-ಬಾಳಾಸಾಹೇಬ್ ಠಾಕ್ರೆ ಬಣ' (Shiv Sena (Balasaheb)) ಎಂಬ ಹೆಸರನ್ನು ಇಡಲು ನಿರ್ಧರಿಸಿದೆ.
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಹಾರಾಷ್ಟ್ರ ಸರ್ಕಾರವನ್ನು ಅನೈತಿಕ ರೀತಿಯಲ್ಲಿ ಬೀಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಕಾರಣಕ್ಕೆ ಮಹಾರಾಷ್ಟ್ರದಲ್ಲಿ ಸದ್ಯದಲ್ಲೇ ಭಾರಿ ಬದಲಾವಣೆ ಆಗಲಿದೆ ಎನ್ನಲಾಗುತ್ತಿದೆ. ಈ ರಾಜಕೀಯ ಹಗ್ಗ ಜಗ್ಗಾಟದ ನಡುವೆಯೇ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ದೆಹಲಿಗೆ ತೆರಳಿದ್ದಾರೆ.
ಮಲಾಡ್ಗೆ ತೆರಳುವಾಗ ಬಾಂದ್ರಾ ವರ್ಲಿ ಸೀಲಿಂಕ್ ಬಳಿ ಅಮರ್ ಕಾರಿಗೆ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಗಾಯಗೊಂಡು ನೆಲಕ್ಕೆ ಬಿದ್ದ ಪಕ್ಷಿಯನ್ನು ಕಾಪಾಡಲು ಕಾರಿನಿಂದ ಕೆಳಗಿಳಿದ ಚಾಲಕ ಮತ್ತು ಅಮರ್ಗೆ ಇದ್ದಕ್ಕಿದ್ದಂತೆ ವೇಗವಾಗಿ ಬಂದ ಟ್ಯಾಕ್ಸಿಯೊಂದು ಡಿಕ್ಕಿ ಹೊಡೆದಿದೆ.
ಎಕ್ಯೂಐಎಸ್ ಜೂನ್ 6ರಂದು ಬೆದರಿಕೆ ಪತ್ರ ನೀಡಿದ್ದು, ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್ನಲ್ಲಿ 'ಪ್ರವಾದಿ ಗೌರವಕ್ಕಾಗಿ ಹೋರಾಡಲು' ಆತ್ಮಾಹುತಿ ದಾಳಿ ನಡೆಸುವುದಾಗಿ ತಿಳಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.