ಸಕ್ಕರೆ ನಾಡಲ್ಲಿ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ. ಮದ್ದೂರು ತಾಲೂಕಿನ ಕದಲೂರು ಗ್ರಾಮ ಮಳೆಯಿಂದ ಜಲಾವೃತವಾಗಿದೆ. ಗ್ರಾಮದಲ್ಲಿ ಸರಿಯಾದ ಒಳಚರಂಡಿ ಇಲ್ಲದೆ ಗ್ರಾಮಕ್ಕೆ ಮಳೆ ನೀರು ನುಗ್ಗಿದೆ.
KRS ಡ್ಯಾಂ ಮೇಲೆ ಸುಮಲತಾ ಫೋಟೋಶೂಟ್ ಮಾಡಿದ್ದಾರೆ. ಡ್ಯಾಂ ಮೇಲೆ ವೈಯುಕ್ತಿಕ ಫೋಟೋಶೂಟ್ ಮಾಡಿದ್ದಾರೆ. ಹಾಗಾಗಿ ಕೂಡಲೇ ಸಂಸದೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂಸದೆ ವಿರುದ್ದ ಶಾಸಕ ರವೀಂದ್ರ ಶ್ರೀಕಂಠಯ್ಯ ಗುಡುಗಿದ್ದಾರೆ.
ರಾಜಕೀಯವಾಗಿ ನಮ್ಮ ಕುಟುಂಬಕ್ಕೆ ಜನ್ಮ ಕೊಟ್ಟ ಜಿಲ್ಲೆ ಮಂಡ್ಯ, ನೀವು ಯಾವುದೇ ಕಾರ್ಯಕ್ರಮಕ್ಕೆ ಕರೆದರು ಬರೋದು ನನ್ನ ಧರ್ಮ. ಈ ಭಾಗದಲ್ಲಿ ಅನ್ನದಾನಿ 24 ತಾಸು ಜನಗಳ ನಡುವೆ ಕೆಲಸ ಮಾಡ್ತಿದ್ದಾರೆ.
ಕೋವಿಡ್ನಿಂದ ಗುಣಮುಖರಾಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಎಂದಿನ ಕೆಲಸ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿಡುತ್ತಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮತ್ತು ಪೂರ್ಣಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಮಂಡ್ಯದಲ್ಲಿ ಸಿಎಂಗೆ ನಟ ಯಶ್ ಸಾಥ್ ನೀಡಿದ್ದಾರೆ.
CM Basavaraj Bommai : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳಿದರು. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಖ್ಯಾತ ಚಿತ್ರ ನಟ ಯಶ್ ಅವರ ಜೊತೆ ಹೆಲಿ ಕ್ಯಾಪ್ಟರ್ ನಲ್ಲಿ ಮೈಸೂರಿಗೆ ತೆರಳಿದರು.
ಮಂಡ್ಯದಲ್ಲಿ JDS ನಾಯಕರ ಮುನಿಸು ಹೆಚ್ಚಾಗಿದೆ. ವರಿಷ್ಠರ ವಿರುದ್ಧ JDS ಮುಖಂಡರ ಮುನಿಸು, ಭಿನ್ನಮತ ಹೊರ ಬಿದ್ದಿದೆ. ನಾಗಮಂಗಲದಲ್ಲಿ ನಿನ್ನೆ ನಡೆದ ಸಮಾವೇಶಕ್ಕೆ ಮಾಜಿ-ಹಾಲಿ ಶಾಸಕರು ಗೈರಾಗಿದ್ದಾರೆ. ಮದ್ದೂರಿನ ಶಾಸಕ ತಮ್ಮಣ್ಣ, ಮೇಲುಕೋಟೆ ಶಾಸಕ ಪುಟ್ಟರಾಜು, ಮಾಜಿ ಪರಿಷತ್ ಸದಸ್ಯರಾದ ಶ್ರೀಕಂಠೇಗೌಡ ಹಾಗೂ ಅಪ್ಪಾಜಿಗೌಡ, ಮನ್ಮುಲ್ ಹಾಗೂ ಒಕ್ಕಲಿಗ ಸಂಘದ ನಿರ್ದೇಶಕ ನೆಲ್ಲಿಗೆರೆ ಬಾಲು ಸಮಾವೇಶಕ್ಕೆ ಗೈರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.