ವರುಣನ ರೌದ್ರಾವತಾರಕ್ಕೆ 90ಕ್ಕೂ ಹೆಚ್ಚು ತಂಗಿನಮರ ನೆಲಸಮ. ಕೆ ಆರ್ ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ತೆಂಡೇಕೆರೆ ಗ್ರಾಮಪಂಚಾಯತಿಯ ವ್ಯಾಪ್ತಿಗೆ ಬರುವ ಅಂಚನಹಳ್ಳಿ ಗ್ರಾಮದಲ್ಲಿ ಘಟನೆ.
ನಿನ್ನೆ ರಾತ್ರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದೆ. ಈ ವೇಳೆ ಮರದ ಬುಡ ಸಹಿತ ಕೆಳಗೆ ಬಿದ್ದು ಹಲವು ಗಿಳಿಗಳು ಮತ್ತು ಮರಿಗಳು ಮೃತಪಟ್ಟರೆ, ಉಳಿದವು ಆಲಿಕಲ್ಲುಗಳ ಪೆಟ್ಟು ತಾಳಲಾರದೆ ಮೃತಪಟ್ಟಿವೆ.
ನಮ್ಮ ಭಾಷೆಗೆ ಧಕ್ಕೆಯಾದ್ರೆ ಯಾರು ಕೂಡ ಸುಮ್ಮನೆ ಇರಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.. ಒಂದು ರಾಷ್ಟ್ರ ಭಾಷೆ ಅನ್ನೋ ಪ್ರಶ್ನೆಯೇ ಬರಲ್ಲ ಎಂದ ಸುಮಲತಾ, ಉತ್ತರ ಭಾರತದಲ್ಲಿ ಹಿಂದಿ ಪ್ರಾಮುಖ್ಯತೆ ಇದೆ. ಕರ್ನಾಟಕದಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ಇದೆ. ಇದು ನಮ್ಮ ಸ್ವಾಭಿಮಾನ. ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಯಾರು ಸುಮ್ಮನೆ ಇರಲ್ಲ ಎಂದು ಸುಮಲತಾ ಹೇಳಿದ್ದಾರೆ.
ಅಂದು ನಡೆಯುವ ಸಭೆಯಲ್ಲಿ ನಾಯಕರ ದಂಡೊಂದು ಬಿಜೆಪಿ ಸೇರಲಿದೆ. ಅಂದು ಬೃಹತ್ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ
ಮುಂದಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ನಾಲ್ಕರಿಂದ ಐದು ಶಾಸಕರು ಹಾಗೂ ಒಂದು ಸಂಸದ ಸ್ಥಾನವನ್ನು ಬಿಜೆಪಿ ಪಡೆಯಲಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ ಆಪರೇಷನ್ ಕಮಲದ ಬಗ್ಗೆ ಸುಳಿವು ನೀಡಿದರು.
ಮಂಡ್ಯ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದ್ದಾರೆ. ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಬಳಿ ಜನತಾ ಜಲಧಾರೆ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ.
ಸಾಮಾನ್ಯವಾಗಿ ಹಬ್ಬಗಳಲ್ಲಿ ಅಂಗಡಿಗಳಲ್ಲಿ ರಿಯಾಯಿತಿ ನೀಡೋದನ್ನು ನೋಡಿರ್ತಿವಿ,ಕೇಳಿರ್ತಿವಿ. ಆದ್ರೆ ಮಂಡ್ಯದಲ್ಲಿ ನೀಲಿ ಸಿನಿಮಾ ತಾರೆ ಸನ್ನಿಲಿಯೋನ್ ರ ಅಪ್ಪಟ ಅಭಿಮಾನಿಯೊಬ್ಬ ಸನ್ನಿ ಲಿಯೋನ್ ಮೇಲಿನ ಅಭಿಮಾನಕ್ಕೆ ವರ್ಷ ಪೂರ್ತಿ ವಿಶೇಷ ಆಫರ್ ನೀಡುವ ಮೂಲಕ ಚಿಕನ್ ಪ್ರಿಯರ ಸೆಳೆದಿದ್ದಾನೆ.
ಮುಸ್ಕಾನ್ ಮುಗ್ಧ ಹುಡುಗಿ, ಈ ಘಟನೆ ಅತ್ಯಂತ ವಿಷಾಧನೀಯ. ಭಯೋತ್ಪಾದಕ ಸಂಘಟನೆಗಳಿಂದ ಹೆಚ್ಚೇನು ನಿರೀಕ್ಷಿಸಲು ಸಾಧ್ಯ? ಅವರು ಮೂಲಭೂತವಾದಿಗಳಷ್ಟೆ ಅಲ್ಲ, ಮೂಲ ಭಯೋತ್ಪಾದಕರು. ಭಯೋತ್ಪಾದಕರು ಜನರಲ್ಲಿ ಭಯ ಹುಟ್ಟಿಸಲಷ್ಟೆ ಸಾಧ್ಯ, ಈ ನಿಟ್ಟಿನಲ್ಲಿ ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಬಳಸುತ್ತಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಮಂಡ್ಯದ ಮುಸ್ಕಾನ್ ಹೇಳಿಕೆಗೆ ಅಲ್ ಖೈದಾ ಬೆಂಬಲ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಯಾರೋ ಏನೋ ಅಂದ್ಬಿಟ್ರು ಎಂದು ಅನುಕಂಪ ಗಿಟ್ಟಿಸುವುದು ಯಾವಾಗಲೂ ನಡೆಯಲ್ಲ.ಸಂಸದೆ ಸುಮಲತಾ ಅವರು ಆತ್ಮಾವಲೋಕನ ಮಾಡ್ಕೊಳಬೇಕು ಎಂದು ಸಂಸದೆ ಸುಮಲತಾಗೆ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಸಕ್ಕರೆನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಮತ್ತೊಂದು ಕೊಂಡ ದುರಂತ ಪ್ರಕರಣ ನಡೆದಿದ್ದು,ಕೊಂಡಕ್ಕೆ ಬಿದ್ದು ಪೂಜಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ತಮ್ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ದೇವರನ್ನು ಹೊತ್ತು ಕೊಂಡ ಹಾಯುತ್ತಿದ್ದ ಅರ್ಚಕ ನಿಂಗರಾಜು ಗಂಭೀರವಾಗಿ ಗಾಯಗೊಂಡಿದ್ದು ಮಳವಳ್ಳಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.