ಬಿಜೆಪಿಯ ಮಹಿಳಾ ಕಾರ್ಯಕರ್ತರ ಗಂಡಂದಿರು ನರೇಂದ್ರ ಮೋದಿಯವರನ್ನು ಭೇಟಿಯಾಗಿದರೆ ಅವರಿಗೆ ಭಯವಾಗುತ್ತದೆ ಏಕೆಂದರೆ ಮೋದಿಯಂತೆ ತಮ್ಮ ಹೆಂಡತಿಯನ್ನು ಅವರು ತೊರೆದು ಹೋಗಬಹುದೆಂದು ಅವರು ಭಯಪಡುತ್ತಾರೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಸೋಮವಾರದಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ವಿರುದ್ಧ ಬಿಎಸ್ಪಿ ಮಾಯಾವತಿ ಟೀಕಾಪ್ರಹಾರ ಮುಂದುವರೆಸಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಖಾಸಗಿ ಚಾನಲ್ ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಪ್ರತಿಕ್ರಿಯಿಸುತ್ತಾ ಮಾಯಾವತಿ ರಾಷ್ಟ್ರದ ಪತ್ರೀಕ ಅವರ ಕೊಡುಗೆಯನ್ನು ಗೌರವಿಸುವುದಾಗಿ ಹೇಳಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಬಿಎಸ್ಪಿ ಮಾಯಾವತಿ "ಚುನಾವಣೆಯಲ್ಲಿ ಗೆಲುವು ಸಾಧಿಸಲು ಮೋದಿ ಸರ್ಕಾರವು ಅಧಿಕಾರವನ್ನು ದುರೋಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಬಿಎಸ್ಪಿ ನಾಯಕಿ ಮಾಯಾವತಿ ರಾಜಕೀಯ ಉದ್ದೇಶಕ್ಕಾಗಿ ಮೋದಿ ತಮ್ಮ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇತ್ತೀಚೆಗೆ ಪ್ರಧಾನಿ ಪ್ರತಿಪಕ್ಷಗಳು ತಮ್ಮನ್ನು ನೀಚ್ ಎಂದು ಆರೋಪಿಸುತ್ತಿವೆ ಎಂದು ಹೇಳಿದ ಬೆನ್ನಲ್ಲೇ ಈಗ ಮಾಯಾವತಿ ಮೋದಿಗೆ ತಿರುಗೇಟು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮೇಲೆ ವಾಗ್ದಾಳಿ ನಡೆಸಿರುವ ಬಿಎಸ್ಪಿ ನಾಯಕಿ ಮಾಯಾವತಿ 'ಉತ್ತರ ಪ್ರದೇಶ ನಿಮ್ಮನ್ನು ಪ್ರಧಾನಿ ಮಾಡಿರಬಹುದು ಆದರೆ ಈಗ ಅದಕ್ಕೆ ತೆಗೆದು ಹಾಕುವ ಸಾಮರ್ಥ್ಯವು ಕೂಡ ಇದೆ' ಎಂದು ಹೇಳಿದರು.
24 ವರ್ಷಗಳ ದ್ವೇಷವನ್ನುಮರೆತು ಇದೇ ಮೊದಲ ಬಾರಿಗೆ ವೇದಿಕೆಯಲ್ಲಿ ಕಾಣಿಸಿಕೊಂಡ ಮುಲಾಯಂ ಸಿಂಗ್ ಯಾದವ್, ಮಾಯಾವತಿ ಈ ಬಾರಿ ಮೈತ್ರಿಕೂಟದ ಮೂಲಕ ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯಕ್ಕೆ ಸವಾಲನ್ನೊಡ್ಡಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಅವರನ್ನ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದರು.
ಹಣ ಕೊಟ್ಟ ತಕ್ಷಣ ಬಡತನ ದೂರವಾಗುವುದಿಲ್ಲ. ಕರ್ನಾಟಕದಲ್ಲೂ ಕಡು ಬಡವರು, ಅಸಹಾಯಕರು ಇದ್ದಾರೆ. ಅವರಿಗೆ ಒಳಿತು ಮಾಡುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಹಾಗಾಗಿ ಬಿಎಸ್ಪಿ ಬಡವರಿಗೆ ಉದ್ಯೋಗ ಕೊಟ್ಟು ಬಡತನ ನಿರ್ಮೂಲನ ಮಾಡುವ ಪಣ ತೊಟ್ಟಿದೆ ಎಂದು ಮಾಯಾವತಿ ಹೇಳಿದರು.
1995 ರಲ್ಲಿ ಎಸ್ಪಿ ಮುಖಂಡರು ರಾಜ್ಯ ಅತಿಥಿ ಗೃಹದಲ್ಲಿ ಮಾಯಾವತಿಯವರ ಮೇಲೆ ಆಕ್ರಮಣ ನಡೆಸಿದ ವೇಳೆ, ಬಿಜೆಪಿ ಅವರನ್ನು ರಕ್ಷಿಸಿತ್ತು. ಅಖಿಲೇಶ್ ಯಾದವ್ ಮೇ 23ರ ನಂತರ ಮಾಯಾವತಿಗೆ ದ್ರೋಹ ಮಾಡಲಿದ್ದಾರೆ. ಆಗ ಬಿಜೆಪಿ ಮತ್ತೆ ಬಿಎಸ್ಪಿ ಮುಖಂಡರಿಗೆ ಸಹಾಯ ಮಾಡುತ್ತದೆ ಎಂದು ಉತ್ತರಪ್ರದೇಶ ಉಪಮುಖ್ಯಮಂತ್ರಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.