ಒಂದು ವೇಳೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಅವಕಾಶ ಸಿಕ್ಕರೆ, ಉತ್ತರಪ್ರದೇಶದ ವಿಧಾನವನ್ನು ಅಳವಡಿಸಿಕೊಂಡು ಎಲ್ಲಾ ದೃಷ್ಟಿಕೋನಗಳಿಂದಲೂ ಉತ್ತಮ ಸರ್ಕಾರ ನೀಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ವಾರಣಾಸಿಯಿಂದ ಕಣಕ್ಕೆ ಇಳಿಸುವ ಮೂಲಕ ದಲಿತರ ಮತಗಳನ್ನು ವಿಭಜನೆ ಮಾಡಲು ಮುಂದಾಗಿದ್ದಾರೆ ಎಂದು ಬಿಎಸ್ಪಿ ಮಾಯಾವತಿ ಆರೋಪಿಸಿದ್ದಾರೆ.
ಏಪ್ರಿಲ್-ಮೇ ತಿಂಗಳಿನಲ್ಲಿ ಒಟ್ಟು 7 ಹಂತಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಜಂಟಿಯಾಗಿ 11 ರ್ಯಾಲಿಗಳಲ್ಲಿ ಭಾಗವಹಿಸಲಿದ್ದು, ಎಸ್ಪಿ-ಬಿಎಸ್ಪಿ-ಆರ್ಎಡಿ ಮೈತ್ರಿ ಬೆಂಬಲಿಸುವಂತೆ ಮತದಾರರನ್ನು ಮನವಿ ಮಾಡಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಮಾಡಿಕೊಂಡಿದ್ದು, ಮೊದಲ ಜಂಟಿ ರ್ಯಾಲಿ ಏಪ್ರಿಲ್ 7ರಂದು ಮುಸ್ಲಿಂ ಸಮುದಾಯದ ಪ್ರಧಾನವಾಗಿರುವ ಸಹರಾನ್ಪುರದ ದೇವಬಂದ್ನಲ್ಲಿ ನಡೆಯಲಿದೆ.
ಉತ್ತರಪ್ರದೇಶದಲ್ಲಿರುವ 80 ಲೋಕಸಭಾ ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ 37 ಮತ್ತು ಬಹುಜನ ಸಮಾಜ ಪಕ್ಷ 38 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಎರಡೂ ಪಕ್ಷಗಳು ಒಮ್ಮತದ ನಿರ್ಧಾರ ಪ್ರಕಟಿಸಿವೆ.
ಉತ್ತರಪ್ರದೇಶದ ಚಂದೌಲಿಯಲ್ಲಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಮಾಯಾವತಿ ಮಹಿಳೆ ಮತ್ತು ಪುರುಷ ಎರಡು ಅಲ್ಲ ಎಂದು ವಿವಾದಾತ್ಮಕ ಹೇಳಿಕೆ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿ ಶಾಸಕಿ ಸಾಧನಾ ಸಿಂಗ್ ಈಗ ತಮ್ಮ ಹೇಳಿಕೆ ವಿಚಾರವಾಗಿ ಕ್ಷಮೆಯಾಚನೆ ಕೋರಿದ್ದಾರೆ.
ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಯಿಂದಾಗಿ ಬಿಜೆಪಿಗೆ ವಿಶ್ರಾಂತಿ ಇಲ್ಲದ ಹಾಗೆ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಲೋಕಸಭಾ ಚುನಾವಣೆಗೂ ಮುನ್ನ ಮೈತ್ರಿ ಘೋಷಣೆ ಮಾಡಿಕೊಂಡಿರುವ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಈ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.