ಜವಾಹರ್ ಲಾಲ್ ನೆಹರು ಸೇರಿದಂತೆ ಅನೇಕರು ಅರ್ಥಪೂರ್ಣ ಕೆಲಸಗಳನ್ನು ಮಾಡುವ ಮೂಲಕ ಭಾರತವನ್ನು ದೈತ್ಯ ಆರ್ಥಿಕ ಶಕ್ತಿಯಾಗಿ ಬೆಳೆಸಿದರು. ಇದನ್ನು ಮೋದಿ ಸೇರಿದಂತೆ ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ನೆಲ, ಜಲ, ಭಾಷೆಯ ಪ್ರಶ್ನೆ ಬಂದಾಗ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವೆಂದು ನಮ್ಮ ಸರಕಾರ ತೀರ್ಮಾನಿಸಿದೆ. ಇಲ್ಲಿ ನಾವೆಲ್ಲ್ರರೂ ಒಂದು ಎಂದು ಸಚಿವ ಎಂ ಬಿ ಪಾಟೀಲ ಅವರು ತಿಳಿಸಿದ್ದಾರೆ.
ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು/ಮಧ್ಯವರ್ತಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಬಿಟ್ಟುಕೊಡಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಶುಕ್ರವಾರ ವಿಧಾನಸಭೆಗೆ ತಿಳಿಸಿದರು.
Tata Technologies in Karnataka: ಕಂಪನಿಯ ಉನ್ನತ ಅಧಿಕಾರಿಗಳು ಬುಧವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಪ್ರಸ್ತಾವ ಸಲ್ಲಿಸಿ ಮಾತುಕತೆ ನಡೆಸಿದರು.
ಐಫೋನ್ ತಯಾರಿಕೆಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್ಎಫ್ಎಸ್ ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದು, ಇದಕ್ಕಾಗಿ 30 ಎಕರೆ ಭೂಮಿಯನ್ನು ಕೇಳಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕೈಗಾರಿಕಾಭಿವೃದ್ಧಿ ಮಂಡಲಿ (ಕೆಐಎಡಿಬಿ) ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಕೋರ್ಟ್ ಪ್ರಕರಣಗಳ ಅಂಕಿಸಂಖ್ಯೆ ಅವುಗಳ ಸ್ಥಿತಿಗತಿ,ಸಮಗ್ರ ವರದಿ ಸಲ್ಲಿಸಬೇಕು ಎಂದು ಎಂ ಬಿ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
KIADB case in court: ಕೆಐಎಡಿಬಿ ನಿವೇಶನ ಹಂಚಿಕೆ ಸಂಬಂಧ ಕಳೆದ 4-5 ವರ್ಷಗಳಲ್ಲಿ 1,748 ಮೊಕದ್ದಮೆಗಳು ದಾಖಲಾಗಿವೆ. ಈ ಪೈಕಿ 921 ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, 762 ಪ್ರಕರಣಗಳಲ್ಲಿ ಸರ್ಕಾರದ ಪರ ಆದೇಶ ಬಂದಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು. ಕಂಪನಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕೋರಿದ್ದಾರೆ.
ಈ ಕಂಪನಿಯು ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಸೌರಫಲಕಗಳು ಮತ್ತಿತರ ಪರ್ಯಾಯ ಇಂಧನ ಉತ್ಪನ್ನಗಳನ್ನು ತಯಾರಿಸುತ್ತದೆ. ಅಲ್ಲದೇ, ಸ್ಪೇಸ್- ಎಕ್ಸ್ ಕಂಪನಿ ಮೂಲಕ ಉಪಗ್ರಹ ಅಂತರ್ಜಾಲ ಸೇವೆ (ಸ್ಟಾರ್ ಲಿಂಕ್) ಒದಗಿಸುತ್ತಿದೆ.
ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಲು ಸರ್ಕಾರ ಯೋಚಿಸುತ್ತಿದೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೇಂದ್ರ ಸಚಿವ ಅಮಿತ್ ಶಾರೊಂದಿಗೆ ಈ ಸಂಬಂಧ ಮಾತುಕತೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಬೇರೆ ಬೇರೆ ಸಂಸ್ಥೆಗಳನ್ನೂ ಈ ಸಂಬಂಧ ಸಂಪರ್ಕಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಇವರು ಚೇಲಾ ಅಂತಾರೆ, ಬಿ.ಎಲ್ ಸಂತೋಷ್ ಚೇಳು ಅಂತಾರೆ
ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು
ಸಂಸದ ಪ್ರತಾಪ ಸಿಂಹ ವಿರುದ್ಧ ಎಂ.ಬಿ ಪಾಟೀಲ್ ವಾಗ್ದಾಳಿ
ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಅಂತ
ಸಂತೋಷ್ ಚೇಳು ಬಿಡ್ತಾರೆ ಅನಿಸುತ್ತದೆ ಎಂದು MBP ಕಿಡಿ
ಇವರು ಚೇಲಾ ಅಂತಾರೆ, ಬಿ.ಎಲ್ ಸಂತೋಷ್ ಚೇಳು ಅಂತಾರೆ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು ಸಂಸದ ಪ್ರತಾಪ ಸಿಂಹ ವಿರುದ್ಧ ಎಂ.ಬಿ ಪಾಟೀಲ್ ವಾಗ್ದಾಳಿ ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಅಂತ ಸಂತೋಷ್ ಚೇಳು ಬಿಡ್ತಾರೆ ಅನಿಸುತ್ತದೆ ಎಂದು MBP ಕಿಡಿ
ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಹತ್ತಿರವಿರುವ ಎನ್ಜಿಇಎಫ್ಗೆ ಸೇರಿದ 105 ಎಕರೆ ಜಾಗವನ್ನು ಹಾಗೆಯೇ ಉಳಿಸಿಕೊಂಡು, 30 ಕೋಟಿ ರೂ.ಗಳಿಗೂ ಅಧಿಕ ವೆಚ್ಚದಲ್ಲಿ ಆಕರ್ಷಕ ವೃಕ್ಷೋದ್ಯಾನ (ಟ್ರೀ ಪಾರ್ಕ್) ಅಭಿವೃದ್ಧಿಪಡಿಸಲಾಗುವುದು. ಈ ಮೂಲಕ ನಗರದಲ್ಲಿ ಹಸಿರನ್ನು ಉಳಿಸಿಕೊಂಡು, ಇದನ್ನು ಮನೋಹರವಾದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಅಕ್ಕಿ ರಾಜಕಾರಣದ ಬಗ್ಗೆ ಎಂ ಬಿ ಪಾಟೀಲ್ ಸದಾಶಿವನಗರ ನಿವಾಸದಲ್ಲಿ ಮಾತನಾಡಿ, “ಸಿಎಂ ಈಗಾಗಲೇ ಗಂಭೀರ ಪ್ರಯತ್ನ ಮಾಡ್ತಾ ಇದಾರೆ. ಛತ್ತೀಸ್ ಗಡ ರಾಜ್ಯದ ಜೊತೆ ಮಾತಾಡಿದ್ದಾರೆ. ಆದರೆ ಟ್ರಾನ್ಸ್ಪೋರ್ಟ್ ಖರ್ಚನ್ನು ಕೂಡಾ ನೋಡಬೇಕು. ನಾವೇನು ಕೇಂದ್ರ ಸರ್ಕಾರದ ಬಳಿ ಸುಮ್ಮನೆ ಕೊಡಲು ಕೇಳ್ತಾ ಇಲ್ಲ.v
ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರ ವಿದ್ಯುತ್ ದರ ಏರಿಕೆಗೂ ನಮಗೂ ಯಾವುದೇ ಸಂಬಂಧ ಇಲ್ಲ ಬೆಂಗಳೂರಲ್ಲಿ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ಒಂದು ವರ್ಷದ ಅವರೇಜ್ ಅದನ್ನು ತೆಗೆದುಕೊಳ್ಳುತ್ತೇವೆ ಯಾರ್ ಎಷ್ಟು ಬಳಕೆ ಮಾಡ್ತಾರೋ ಅವರಿಗೆ ದರ ನಿಗದಿ ಫಿಕ್ಸ್ ಬಿಜೆಪಿಯವ್ರಿಗೆ ಕೆಲಸ ಇಲ್ಲ, ಹೀಗಾಗಿ ಅಪಪ್ರಚಾರ ಮಾಡ್ತಾರೆ
ಒಳ ಒಪ್ಪಂದ ಬಗ್ಗೆ ಸಿಟಿ ರವಿ-ಪ್ರತಾಪ್ ಸಿಂಹ ಹೇಳಿಕೆ ವಿಚಾರ ಕೈ-ಬಿಜೆಪಿ ನಡುವೆ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಹೊಂದಾಣಿಕೆ ಮಾಡಿಕೊಂಡಿರೋ ಹೆಸರು ಘೋಷಣೆ ಮಾಡಲಿ ಪ್ರತಾಪ್ ಸಿಂಹ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ಹೊಂದಾಣಿಕೆ ಮಾಡಿಕೊಂಡ್ರೆ ಅವರ ಹೆಸರು ನಮಗೂ ಗೊತ್ತಾಗುತ್ತೆ ಸಿ.ಟಿ ರವಿ ಹಾಗೂ ಪ್ರತಾಪ್ ಸಿಂಹಗೆ ಸವಾಲ್ ಹಾಕಿದ ಎಂ.ಬಿ ಪಾಟೀಲ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.