ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ.
ಸಂವಿಧಾನವನ್ನು ಎಳ್ಳು ಕಾಳಿನಷ್ಟು ಕೂಡ ತಿರುಚಲು ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ.ಮುಸ್ಲಿಂ ಮೀಸಲಾತಿ ಮೊದಲಿಂದಲೂ ಇದೆ. ಬಿಜೆಪಿಯವರ ಅಧಿಕಾರಾವಧಿಯಲ್ಲೂ ಇತ್ತು. ಮೋದಿಯವರು ಹತಾಷರಾಗಿದ್ದು, ಅನಗತ್ಯವಾಗಿ ಪ್ರಸ್ತಾಪಿಸುತ್ತಿದ್ದಾರೆ.
MB Patil: ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಅಭ್ಯರ್ಥಿ ಪರವಾಗಿ ಜಯಘೋಷ ಮೊಳಗಿಸಿದರು. ಕಾರ್ಯಕರ್ತರ ಉತ್ಸಾಹವೇ ಪಕ್ಷದ ಬಲವಾಗಿದ್ದು, 1ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಶ್ರೀ ರಾಜು ಅವರು ವಿಜಯ ಸಾಧಿಸಲಿದ್ದಾರೆಂಬ ವಿಶ್ವಾಸ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಅಭಿವೃದ್ಧಿಯ ಬಗ್ಗೆ ಹಾಗೂ ಜನರ ಕಷ್ಟನಷ್ಟಗಳ ಬಗ್ಗೆ ನಿಜವಾದ ಕಾಳಜಿ ಇತ್ತು. ಪ್ರವಾಹ, ಬರ ಸೇರಿದಂತೆ ಯಾವುದೇ ನೈಸರ್ಗಿಕ ವಿಪತ್ತು ಉಂಟಾದಾಗ ಕರ್ನಾಟಕ ಸೇರಿದಂತೆ ದೇಶದ ಯಾವುದೇ ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತಿದ್ದರು. ಆದರೆ, ಮೋದಿ ಅವರಿಗೆ ಇಂತಹ ನಿಜವಾದ ಕಾಳಜಿ ಇಲ್ಲ. - ಸಚಿವ ಎಂ.ಬಿ. ಪಾಟೀಲ
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಲಾಭಾಂಶದ ಈ ಬಾಬ್ತಿನ ₹19.84 ಕೋಟಿ ರೂ.ಗಳನ್ನು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಗುರುವಾರ ಚೆಕ್ ರೂಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಧಾನಸೌಧದಲ್ಲಿ ಹಸ್ತಾಂತರಿಸಿದರು.
Minister MB Patil: ಸುಜ್ಲಾನ್ ಸಮೂಹದ ಸಿಇಒ ಜೆ ಪಿ ಚಲಸಾನಿ ಮತ್ತು ರೆನೈಸಾನ್ಸ್ ಸೋಲಾರ್ ಮತ್ತು ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯ ಸಿಇಒ ಮಿಲಿಂದ್ ಕುಲಕರ್ಣಿ ಈ ಮಹತ್ವದ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದರು.
ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಇಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯ ಸಭೆ ನಡೆಸಿದರು.
ಸೋಮವಾರ ಖನಿಜ ಭವನದಲ್ಲಿ ತಮ್ಮನ್ನು ಭೇಟಿಯಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸನ್ ನೇತೃತ್ವದ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು.
ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ.
ನಿಯಮಾವಳಿಗಳ ಪ್ರಕಾರ, ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಅರ್ಹರಿಗೆ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಈಗ ಸಂಕಷ್ಟಕ್ಕೆ ಸಿಲುಕಿರುವವರ ಬದುಕನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಮಂಗಳೂರು ಎಸ್ಇಜೆಡ್ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ.
ಆದಾಯ ತೆರಿಗೆಯಲ್ಲಿ ಜನರು ಹೆಚ್ಚಿನ ರಿಯಾಯಿತಿ/ವಿನಾಯಿತಿ ಬಯಸಿದ್ದರು. ಈಗ ನೋಡಿದರೆ ಮೋದಿ ಏನನ್ನೂ ಕೊಟ್ಟಿಲ್ಲ. ಸುಮ್ಮನೆ ಅಭಿವೃದ್ಧಿಯ ಮಂತ್ರ ಹೇಳುತ್ತ, ಜನರ ಭಾರವನ್ನು ಹಾಗೆಯೇ ಉಳಿಸಿದ್ದಾರೆ.
ರಾಜ್ಯದಲ್ಲಿ ಹೂಡಿಕೆಗೆ ಮುಂದಾಗಿರುವ ಮೈಕ್ರೋಸಾಫ್ಟ್ ಕಂಪನಿಯು ಕೌಶಲ್ಯಾಭಿವೃದ್ಧಿ ಮತ್ತು ಸುಗಮ ಆಡಳಿತ ಉಪಕ್ರಮಗಳ ತರಬೇತಿ ಕೊಡಲಿದೆ. ಹಿಟಾಚಿ ಕಂಪನಿಯು ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಸೇವೆ, ಶಿಕ್ಷಣ ಮತ್ತು ಇ-ಗವರ್ನೆನ್ಸ್ ಕ್ಷೇತ್ರಗಳಲ್ಲಿ ಬಂಡವಾಳ ತೊಡಗಿಸಲಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.
ಯತ್ನಾಳ್ ಅವರಿಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ಆದರೆ ಬಿಜೆಪಿಯವರು ತಮ್ಮ ಸಮಾಧಾನಕ್ಕೆ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಬಹುಶಃ, ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ಬಗ್ಗೆ ಯತ್ನಾಳ್ ಅವರ ಹತ್ತಿರ ಮಾಹಿತಿ ಇರುವುದರಿಂದಲೇ ಅವರು ಹಿಂದೇಟು ಹಾಕುತ್ತಿರಬಹುದು ಎಂದರು.
`ಮೃತ ಕಾರ್ಮಿಕರೆಲ್ಲರೂ ಬಿಹಾರದವರು. ಇವರ ಪಾರ್ಥಿವ ಶರೀರಗಳನ್ನು ಬೆಳಗಾವಿ ಅಥವಾ ಕಲಬುರಗಿ ವಿಮಾನ ನಿಲ್ದಾಣದ ಮೂಲಕ ಪಾಟ್ನಾಗೆ ಕಳಿಸಿ ಕೊಡಲಾಗುವುದು. ಬಳಿಕ, ಮೃತ ಕಾರ್ಮಿಕರ ಊರುಗಳಲ್ಲಿರುವ ಕುಟುಂಬಗಳಿಗೆ ಶವಗಳನ್ನು ತಲುಪಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ.
Minister MB Patil: ಸ್ಪಷ್ಟ ಗುರಿಗಳೊಂದಿಗೆ ವಿಷನ್ ಗ್ರೂಪ್ ಗಳನ್ನು ರಚಿಸಲಾಗುವುದು ಎಂದು ಹೇಳಿದ್ದ ಸರಕಾರವು ವೈಮಾಂತರಿಕ್ಷ ಮತ್ತು ರಕ್ಷಣೆ, ಮಶೀನ್ ಟೂಲ್ಸ್, ಎಲೆಕ್ಟ್ರಾನಿಕ್ಸ್ ಸಿಸ್ಟಂ ಡಿಸೈನ್ ಮತ್ತು ಮ್ಯಾನಫ್ಯಾಕ್ಚರಿಂಗ್, ಫಾರ್ಮಸುಟಿಕಲ್ಸ್, ಕೋರ್ ಮ್ಯಾನಫ್ಯಾಕ್ಚರಿಂಗ್, ಆಟೋಮೋಟೀವ್/ಎಲೆಕ್ಟ್ರಿಕ್ ವೆಹಿಕಲ್ಸ್, ಇಂಡಸ್ಟ್ರಿ 5.0, ಜವಳಿ ಮತ್ತು ಹಸಿರು ಇಂಧನ ವಲಯಗಳಿಗೆ ಈ ಉಪಕ್ರಮವನ್ನು ಕೈಗೊಂಡಿದೆ.
ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿ ಇರುವ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಅತ್ಯಾಧುನಿಕ ಇ.ವಿ.ಮೊಬಿಲಿಟಿ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವನ್ನು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಎಸ್ ಟಿ ಸೋಮಶೇಖರ್ ಜತೆಯಲ್ಲಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.