ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಹಿಂಗಾರು ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಜಿಲ್ಲೆಯಲ್ಲಿ ಡಿಸೆಂಬರ್ 30 ರಿಂದ ಆರಂಭವಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆ್ಯಪ್ ಮೂಲಕ ವಿವರಗಳನ್ನು ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದಾಗಿದೆ.
2023-24ನೇ ಸಾಲಿನ “ನನ್ನ ಬೆಳೆ ನನ್ನ ಹಕ್ಕು” ಆಶಯದಂತೆ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತ: ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರಗಳನ್ನು ದಾಖಲಿಸಲು “ಮುಂಗಾರು ರೈತರ ಬೆಳೆ ಸಮೀಕ್ಷೆ 2023” ಆಪ್ ಬಳಸಿಕೊಳ್ಳಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ.
Google: ನಿಯಮಗಳನ್ನು ಉಲ್ಲಂಘಿಸಿದ ಆರೋಪದ ನಂತರ ಗೂಗಲ್ ಪ್ಲೇ ಸ್ಟೋರ್ನಿಂದ ಹತ್ತಕ್ಕೂ ಹೆಚ್ಚು ಅಪ್ಲಿಕೇಶನ್ಗಳನ್ನು ತೆಗೆದುಹಾಕಿದೆ. ಇವುಗಳಲ್ಲಿ ಪ್ರಸಿದ್ಧ ಮುಸ್ಲಿಂ ಪ್ರಾರ್ಥನೆ ಅಪ್ಲಿಕೇಶನ್ ಕೂಡ ಸೇರಿದೆ. ಇದು 1 ಕೋಟಿಗೂ ಹೆಚ್ಚು ಬಾರಿ ಡೌನ್ಲೋಡ್ ಆಗಿದೆ.
ಚೆಕ್ ಪಾಯಿಂಟ್ ರಿಸರ್ಚ್ (The Check Point Research) ತಂಡವು ಇತ್ತೀಚೆಗೆ ಮೋಸದ ಮೊಬೈಲ್ ಅಪ್ಲಿಕೇಶನ್ಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ತಂಡದ ಪ್ರಕಾರ, ಹ್ಯಾಕರ್ಗಳು ಈ ಅಪ್ಲಿಕೇಶನ್ಗಳನ್ನು ಬಳಸಿಕೊಂಡು ಮೊಬೈಲ್ ಅನ್ನು ಹ್ಯಾಕ್ ಮಾಡಬಹುದು ಮತ್ತು ಗೌಪ್ಯ ಮಾಹಿತಿಯನ್ನು ಕದಿಯಬಹುದು.
ಡಿಜಿಟಲ್ ಇಂಡಿಯಾದ ಹಿನ್ನೆಲೆಯಲ್ಲಿ ಅಂಚೆ ಕಚೇರಿಗಳನ್ನು ನಿರಂತರವಾಗಿ ಅಪ್ ಡೇಟ್ ಮಾಡಲಾಗುತ್ತಿದೆ. ಈಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ಮೊಬೈಲ್ ಆ್ಯಪ್ ಅನ್ನು ಪ್ರಾರಂಭಿಸಲಾಗಿದೆ.
‘ಇದೊಂದು ಖಾಸಗಿ ಮೊಬೈಲ್ ಆ್ಯಪ್ ಆಗಿದೆ. ಇದರ ನೀತಿಯನ್ನು ಒಪ್ಪಿಕೊಳ್ಳುವುದಿಲ್ಲ ಎನ್ನುವುದಾದರೆ ವಾಟ್ಸಾಪ್ ಬಳಸಬೇಡಿ. ಬೇರೆ ಇನ್ನಾವುದಾದರೂ ಆ್ಯಪ್ ಬಳಸಿ, ಎಂದ ದಿಲ್ಲಿ ಹೈಕೋರ್ಟ್
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ (ಆಗಸ್ಟ್ 26, 2020) ಇಲ್ಲಿ ನಿರ್ದೇಶನಾಲಯ ಜನರಲ್ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಡಿಜಿಎನ್ಸಿಸಿ) ಮೊಬೈಲ್ ತರಬೇತಿ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದರು. ಇದು ದೇಶಾದ್ಯಂತ ಎನ್ಸಿಸಿ ಕೆಡೆಟ್ಗಳ ಆನ್ಲೈನ್ ತರಬೇತಿ ನಡೆಸಲು ಅಪ್ಲಿಕೇಶನ್ ಸಹಾಯ ಮಾಡುತ್ತದೆ.
ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವತಿಯಿಂದ ಸೋಮವಾರ 'Saksham' ಹೆಸರಿನ ಮೊಬೈಲ್ ಆಪ್ ಬಿಡುಗಡೆಗೊಳಿಸಲಾಗಿದೆ. ಸಚಿವಾಲಯದ ಸಚಿವ ನಾಗೇಂದ್ರ ನಾಥ್ ಸಿನ್ಹಾ ಈ ಆಪ್ ಬಿಡುಗಡೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.