ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶನಿವಾರದಂದು ಆಸ್ಟ್ರೇಲಿಯಾದ ವಿರುದ್ಧ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 10,000 ರನ್ ಗಳ ಕ್ಲಬ್ ಗೆ ಸೇರಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಐದನೇ ಭಾರತೀಯ ಆಟಗಾರರಾಗಿದ್ದಾರೆ.
ಟೆಸ್ಟ್ ಇನ್ನಿಂಗ್ಸ್ ವೊಂದರಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದಿರುವ ದಾಖಲೆ ನಿರ್ಮಿಸಿರುವ ಭಾರತದ ವಿಕೆಟ್ ಕೀಪರ್ ರಿಷಬ್ ಪಂತ್ , ಈಗ ಮಹೇಂದ್ರ ಸಿಂಗ್ ಧೋನಿಯವರನ್ನು ಈ ದೇಶದ ಹೀರೋ ಎಂದು ಹೊಗಳಿದ್ದಾರೆ.
ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ಸರಣಿ ವೇಳೆ ಎಂ.ಎಸ್ ಧೋನಿ ಯವರಿಗೆ ವಿಶ್ರಾಂತಿ ನೀಡಿದ ನಿಟ್ಟಿನಲ್ಲಿ ಅವರು ನಿವೃತ್ತಿ ಘೋಶಿಸಬೇಕೆನ್ನುವ ಮಾತುಗಳು ಕೇಳಿ ಬಂದಿದ್ದವು. ಈಗ ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಪಾಕ್ ಮಾಜಿ ಸ್ಪೋಟಕ ಆಟಗಾರ ಶಾಹಿದ್ ಆಫ್ರಿದಿ ಧೋನಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಧೋನಿ ಅಂದ್ರೆನೆ ಹಾಗೆ, ಕ್ರಿಸ್ ನಲ್ಲಿರುವ ಬ್ಯಾಟ್ಸ್ಮನ್ ಸ್ವಲ್ಪ ಆಯ ತಪ್ಪಿದರೆ ಸಾಕು ವಿಕೆಟ್ ಹಾಗೆ ಎಗರಿಹೋಗಿರುತ್ತದೆ. ಇಂತಹ ಹಲವು ಅದ್ಬುತ ಸ್ಟಂಪಿಂಗ್ ಮಾಡುವುದನ್ನು ಕರತಲಾಮಲಕ ಮಾಡಿಕೊಂಡಿರುವ ಮಾಜಿ ಕ್ಯಾಪ್ಟನ್ ಕೂಲ್ ಈಗ ಮೊನ್ನೆ ನಡೆದ ವಿಂಡಿಸ್ ವಿರುದ್ದ ನಾಲ್ಕನೆ ಪಂದ್ಯದಲ್ಲಿ ಮತ್ತೊಮ್ಮೆ ಇಂತಹ ಕೈಚಳಕದ ಮೂಲಕ ಗಮನ ಸೆಳೆದಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಾವು ನಾಯಕತ್ವವನ್ನು ತೊರೆದದ್ದು ಮುಂಬರುವ ವಿಶ್ವಕಪ್ ಗೆ ಹೊಸ ನಾಯಕ ಸಜ್ಜಾಗಲು ಸಮಯ ಬೇಕು ಆ ಕಾರಣಕ್ಕಾಗಿ ನಾಯಕತ್ವದ ಹುದ್ದೆಯಿಂದ ಕೆಳಗಿಳಿದಿದ್ದು ಎಂದು ತಿಳಿಸಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು 2017-18ರ ಸಾಲಿನಲ್ಲಿ 12.17 ಕೋಟಿ ರೂ. ಆದಾಯ ತೆರಿಗೆಯನ್ನು ಪಾವತಿಸಿದ್ದು, ಜಾರ್ಖಂಡ್ನಲ್ಲಿ ಅತಿ ಹೆಚ್ಚು ಆದಾಯ ತೆರಿಗೆ ಪಾವತಿಸುವ ವ್ಯಕ್ತಿಯಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ನಾವು ಪಂದ್ಯಾವಳಿಯಲ್ಲಿ ಇರಲಿಲ್ಲ, ಆದರೆ ನಮ್ಮ ಅಭಿಮಾನಿ-ಬೆಂಬಲಿಗರು ನಿರಂತರವಾಗಿ ಬೆಳೆಯುತ್ತಿದ್ದಾರೆ. ನಾವು ಚೆನ್ನೈನಲ್ಲಿ ಆಡಲು ಸಾಧ್ಯವಾಗಲಿಲ್ಲ. ಅದು ದುರದೃಷ್ಟಕರವೆಂದು ಮಹೇಂದ್ರ ಸಿಂಗ್ ಧೋನಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.