"ಸಿಎಎ ಮತ್ತು ಎನ್ಆರ್ಸಿ ಮೂಲಕ, ಬಡವರನ್ನು ಸಾಲಿನಲ್ಲಿರಿಸಲು ಮತ್ತು ಅದರ 15 ಕೈಗಾರಿಕೋದ್ಯಮಿ ಸ್ನೇಹಿತರಿಗೆ ಸಹಾಯ ಮಾಡಲು ಸರ್ಕಾರ ಬಯಸಿದೆ" ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಲ್ಲಿ ಹಿಂಸಾಚಾರ ಹುಟ್ಟುಹಾಕಿದ ಮಾಸ್ಟರ್ ಮೈಂಡ್ ಯಾರು? ಈ ಪ್ರಕರಣದಲ್ಲಿ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಅಂದರೆ PFI ಇರುವ ಶಂಕೆ ದಟ್ಟವಾಗಿದೆ.
ದೇಶಾದ್ಯಂತ ನಡೆಯುತ್ತಿರುವ ಹಿಂಸಾಚಾರಗಳ ಕುರಿತು ಶುಕ್ರವಾರ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದ ದೀದಿ, ಕಾಯ್ದೆಯ ಅನುಷ್ಠಾನದ ಕುರಿತು ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು ಮತ್ತು ಈಗಾಗಲೇ ಹಲವು ಜನರ ಸಾವಿಗೆ ಕಾರಣವಾದ ಪ್ರತಿಭಟನೆಗಳನ್ನು ತಡೆಯಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.
ರಾಮಲೀಲಾ ಮೈದಾನದಿಂದ ಜನರನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, NRC ಹಾಗೂ CAA ಕುರಿತು ಹಬ್ಬಿಸಲಾಗಿರುವ ವದಂತಿಗಳನ್ನು ಅಲ್ಲಗಳೆದಿದ್ದು, ಇವುಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳ ಮೇಲೂ ಕೂಡ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಹೈ ಕಮಾಂಡ್ ಮೇಲೆ ಪ್ರಶಾಂತ್ ಕಿಶೋರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋನಿಯಾ ಗಾಂಧಿ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹರಿಬಿಟ್ಟ ವೀಡಿಯೊ ಸಂದೇಶಕ್ಕೆ ರೀಟ್ವೀಟ್ ಮಾಡಿರುವ ಅವರು ಸೋನಿಯಾ ಗಾಂಧಿ ಅವರಿಗೆ ಮನವಿಯೊಂದನ್ನು ಮಾಡಿದ್ದಾರೆ.
ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಕಾರ್ಯವನ್ನು ದೇಶಾದ್ಯಂತ ಧಾರ್ಮಿಕ ದೃಷ್ಟಿಯಿಂದ ನಡೆಸುವ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. ಈ ವಿಚಾರವಾಗಿ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದರು.
ಅಸ್ಸಾಂನಲ್ಲಿನ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಒಂದು ಸಾಧನವಾಗಿದೆ ಎಂದು ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಫೆಡರಲ್ ಯುಎಸ್ ಆಯೋಗ ಆರೋಪಿಸಿದೆ.
ಎನ್ಆರ್ಸಿ ಕಾಂಗ್ರೆಸ್ಸಿನ ಸೃಷ್ಟಿ, ಆದರೆ ಈಗ ಅದನ್ನು ಬಿಜೆಪಿ ಸಮಾಜವನ್ನು ಧ್ರುವೀಕರಿಸಲು ಬಳಸುತ್ತಿದೆ. ಈಗಿನ ಮಸೂದೆ ದೇಶದ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ.
ಲೋಕಸಭಾ ಚುನಾವಣೆ ನಂತರ ಬಂಗಾಳಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎನ್ಆರ್ಸಿ ಬಗ್ಗೆ ಭೀತಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪಶ್ಚಿಮ ಬಂಗಾಳದಲ್ಲಿ ಎನ್ಆರ್ಸಿ ಜಾರಿಗೆ ಬರುವುದಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪದೇ ಪದೇ ಭರವಸೆ ನೀಡುತ್ತಿರುವ ಮಧ್ಯೆ, ಈಗ ಅಲ್ಲಿಯೂ ಕೂಡ ಎನ್ಆರ್ಸಿ ಜಾರಿಗೆ ತರಲಾಗುವುದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಬುಧವಾರ ಹೇಳಿದ್ದಾರೆ.
ಎನ್ಆರ್ಸಿಯನ್ನು ದೆಹಲಿಯಲ್ಲಿ ಜಾರಿಗೆ ತರಬೇಕು. ದೆಹಲಿಯಲ್ಲಿ ಎನ್ಆರ್ಸಿ ಜಾರಿಗೆ ಬಂದರೆ ಮನೋಜ್ ತಿವಾರಿ ಅವರೇ ಮೊದಲು ಹೊರಹೋಗಬೇಕಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರೊಂದಿಗಿನ ಸಭೆಯಲ್ಲಿ ನಾಗರಿಕರ ನೋಂದಣಿ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಅಕ್ರಮವಾಗಿ ಒಳನುಗ್ಗುವವರ ಬಗ್ಗೆ ಸರ್ಕಾರ ಕಟ್ಟುನಿಟ್ಟಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆಗೆ ಉತ್ತರ ಪ್ರದೇಶದ ಇಂಧನ ಸಚಿವ ಶ್ರೀಕಾಂತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. ಈ ವಿಷಯವು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿರುವುದರಿಂದ ರಾಜ್ಯದಲ್ಲಿ ಕೂಡ ಎನ್ಆರ್ಸಿ ಬಗ್ಗೆ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.