ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭಾರತ-ರಷ್ಯಾ ಸ್ನೇಹವು ಸಮಯದ ಪರೀಕ್ಷೆಯಾಗಿದೆ ಮತ್ತು ಲಸಿಕೆ ಕಾರ್ಯಕ್ರಮ ಸೇರಿದಂತೆ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಉಭಯ ದೇಶಗಳ ನಡುವಿನ ಧೃಡವಾದ ಸಹಕಾರವನ್ನು ಗುರುತಿಸಿದೆ ಎಂದು ಹೇಳಿದರು.
Afghanistan Crisis: ಭಾರತ ತನ್ನ ರಾಜತಾಂತ್ರಿಕ ಕಾರ್ಯಾಚರಣೆಯನ್ನು ಕಾಬೂಲ್ನಿಂದ ಸ್ಥಳಾಂತರಿಸಿದೆ ಮತ್ತು ರಷ್ಯಾ ತನ್ನ ರಾಜತಾಂತ್ರಿಕರನ್ನು ಇನ್ನೂ ಕಾಬೂಲ್ನಲ್ಲಿಯೇ ಇರಿಸಿದೆ. ಭಾರತವು ಬಹುಶಃ ತಾಲಿಬಾನ್ನೊಂದಿಗೆ ಮಾತುಕತೆಯ ಮಾರ್ಗ ತೆರೆಯಲು ಬಯಸುತ್ತಿದೆ.
Afghanistan Crisis- ಅಫ್ಘಾನಿಸ್ತಾನ ಇದೀಗ ತಾಲಿಬಾನ್ (Taliban) ನಿಯಂತ್ರಣದಲ್ಲಿದೆ. ಅಫಘಾನ್ ಬಿಕ್ಕಟ್ಟು (Afghanistan Crisis) ಇಡೀ ಪ್ರಪಂಚದ ಮೇಲೆ ಪ್ರಭಾವ ಬೀರಿದೆ. ಎಲ್ಲಾ ದೇಶಗಳು ತಮ್ಮ ನಾಗರಿಕರನ್ನು ಅಲ್ಲಿಂದ ಸುರಕ್ಷಿತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿವೆ. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ (PM Narendra Modi), ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russian President Vladimir Putin)ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ಅಫ್ಘಾನಿಸ್ತಾನದ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸರ್ಕಾರ ಗುರುವಾರ ಸರ್ವಪಕ್ಷಗಳ ಸಭೆ ಕರೆದಿದೆ.ಯುದ್ಧದಿಂದ ಹಾನಿಗೊಳಗಾದ ದೇಶದ ಬೆಳವಣಿಗೆಗಳ ಬಗ್ಗೆ ರಾಜಕೀಯ ಪಕ್ಷಗಳ ನಾಯಕರಿಗೆ ಮಾಹಿತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ಸಚಿವಾಲಯಕ್ಕೆ ಸೂಚಿಸಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
National Hydrogen Mission: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಹಲವು ಘೋಷಣೆಗಳನ್ನು ಮಾಡಿದ್ದಾರೆ. ಇದೆ ಸರಣಿಯಲ್ಲಿ ಅವರು ಕೆಂಪು ಕೋಟೆಯಿಂದ ರಾಷ್ಟ್ರೀಯ ಹೈಡ್ರೋಜನ್ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.
PM Gatishakti National Plan Scheme- 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ ಪ್ರಧಾನಿ ಗತಿಶಕ್ತಿ ಯೋಜನೆಯನ್ನು ಘೋಷಿಸಿದ್ದಾರೆ. ಇದಕ್ಕಾಗಿ 100 ಲಕ್ಷ ಕೋಟಿ ಖರ್ಚು ಮಾಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Partition Horrors Remembrance Day - ಆಗಸ್ಟ್ 14 ರ ದಿನವನ್ನು ದೇಶದ ಇತಿಹಾಸದಲ್ಲಿ ಕಣ್ಣೀರಿನಿಂದ ಬರೆಯಲಾಗಿದೆ. ದೇಶ ವಿಭಜನೆಯಾದ ದಿನ ಇದು. ಪಾಕಿಸ್ತಾನವನ್ನು 14 ಆಗಸ್ಟ್ 1947 ರಂದು ಮತ್ತು ಭಾರತವನ್ನು 15 ಆಗಸ್ಟ್ 1947 ರಂದು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲಾಯಿತು.
Vehicle Scrappage Policy Launch: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದಲ್ಲಿ ನೂತನ ವಾಹನ ಸ್ಕ್ರಾಪೇಜ್ ನೀತಿಯನ್ನು ಪ್ರಾರಂಭಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ.
Pradhan Mantri Kisan Samman Nidhi: ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಇರುವ ಅನ್ನದಾತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 9 ನೇ ಕಂತನ್ನು ಆಗಸ್ಟ್ 9 ರಂದು ಮಧ್ಯಾಹ್ನ 12.35ಕ್ಕೆ ಬಿಡುಗಡೆ ಮಾಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 9 ನೇ ಕಂತನ್ನು ರೈತರ ಖಾತೆಗೆ ಆಗಸ್ಟ್ 9 ರಂದು 12:30 ಕ್ಕೆ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು MyGovIndia ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
Rajiv Gandhi Khel Ratna Award - ಖೇಲ್ ರತ್ನ (Rajiv Gandhi Khel Ratna Award) ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಜಿ (Major Dhyan Chand) ಅವರಿಗೆ ಅರ್ಪಿಸಬೇಕು ಎಂದು ಅನೇಕ ದೇಶವಾಸಿಗಳು ಒತ್ತಾಯಿಸಿದ್ದಾರೆ ಎಂದು ಪ್ರಧಾನಿ ಮೋದಿ (PM Narendra Modi) ಹೇಳಿದ್ದಾರೆ. ಜನರ ಭಾವನೆಗಳನ್ನು ಪರಿಗಣಿಸಿ, ಇದೀಗ ಅದನ್ನು ಇದನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ (Major Dhyan Chand Khel Ratna Award) ಎಂದು ಗುರುತಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.
e₹UPI Prepaid e-Voucher Launched - ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಣರಹಿತ ಹಾಗೂ ಸಂಪರ್ಕ ರಹಿತ ಹಣ ಪಾವತಿ ಸೇವೆಯಾಗಿರುವ e₹UPI ಗೆ ಚಾಲನೆ ನೀಡಿದ್ದಾರೆ. e₹UPI ಒಂದು ಡಿಜಿಟಲ್ ಹಣ ಪಾವತಿಯ ವೇದಿಕೆಯಾಗಿದೆ. ತನ್ಮೂಲಕ ಲಾಭಾರ್ಥಿಗಳಿಗೆ ನೇರ ಲಾಭ ಸಿಗಲಿದೆ.
Thousand Pillar Temple - 13 ನೇ ಶತಮಾನದಲ್ಲಿ ನಿರ್ಮಿಸಲಾದ 1000 ಕಂಬಗಳ ಶಿವ ದೇವಾಲಯವನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸೇರಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಸಂದರ್ಭದಲ್ಲಿ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.
Maharashtra Rain Updates: ಮಹಾರಾಷ್ಟ್ರದಲ್ಲಿ (Maharashtra) ಮಳೆಯ ಅಬ್ಬರ ಮುಂದುವರೆದದ್ದು, ಹಲವರು ಜನರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಮಹಾರಾಷ್ಟ್ರದ ಕರಾವಳಿ ತೀರದ ರಾಯಗಡ್ ಜಿಲ್ಲೆಯ ತಲಾಯಿಗಾವ್ ಹತ್ತಿರ ಸಂಭವಿಸಿದ್ದ ಭೂಕುಸಿತದಲ್ಲಿ ಇದುವರೆಗೆ ಸುಮಾರು 49 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಇದುವರೆಗೆ ಸುಮಾರು 47 ಜನ ನಾಪತ್ತೆಯಾಗಿದ್ದಾರೆ.
Covid-19 Third Wave - ಕರೋನಾ ವೈರಸ್ ಮೂರನೇ ಅಲೆಯ (Coronavirus Third Wave) ಭೀತಿಯ ನಡುವೆಯೇ ಕೇಂದ್ರ ಸರ್ಕಾರ ತನ್ನ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಪಿಎಂ ನರೇಂದ್ರ ಮೋದಿ (PM Narendra Modi) ಅವರು ಶುಕ್ರವಾರ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಲಭ್ಯತೆ ಕುರಿತು ಉನ್ನತ ಮಟ್ಟದ ಸಭೆ ನಡೆಸಿ 1,500 ಆಮ್ಲಜನಕ ಸ್ಥಾವರಗಳನ್ನು (Oxygen Plants) ಸ್ಥಾಪಿಸಲು ಆದೇಶಿಸಿದ್ದಾರೆ.
ಹೆಚ್ಚುತ್ತಿರುವ ಇಂಧನ ಬೆಲೆಗಳ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜೀ ಅವರು 'ಮನ್ ಕಿ ಬಾತ್' ಬದಲಿಗೆ 'ಪೆಟ್ರೋಲ್ ಮತ್ತು ಲಸಿಕೆ ಕಿ ಬಾತ್' ನಡೆಸಬೇಕು ಎಂದು ಬುಧವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.