ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಬಳ್ಳಾರಿ ರೈಲ್ವೆ ಸೇರಿದಂತೆ ಭಾರತೀಯ ರೈಲ್ವೆಯ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿಯವರು ಭಾನುವಾರದಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
ಕರ್ನಾಟಕದ ಬಿಜೆಪಿ ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ. ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟುಕೊಂಡು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿಬಿಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ಇದ್ದ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ, ಈ ಸಾಲವನ್ನು ಒಂಬತ್ತು ವರ್ಷಗಳಲ್ಲಿ 170 ಲಕ್ಷ ಕೋಟಿಗೆ ಏರಿಸಿದ್ದೇ ಮೋದಿಯವರ ಸಾಧನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ನ ಅತ್ಯುನ್ನತ ನಾಗರಿಕ ಮತ್ತು ಮಿಲಿಟರಿ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ಅನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ಪಡೆದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಾರಂಗಲ್ನಲ್ಲಿ ₹ 6100 ಕೋಟಿ ಮೌಲ್ಯದ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಭಾರತದ ಇತಿಹಾಸದಲ್ಲಿ ತೆಲಂಗಾಣದ ಜನರು ನೀಡಿದ ಮಹಾನ್ ಕೊಡುಗೆಗಾಗಿ ಶ್ಲಾಘಿಸಿದರು.ತೆಲಂಗಾಣ ರಾಜ್ಯವು ಹೊಸದಾಗಿರಬಹುದು. ಆದರೆ ಭಾರತದ ಇತಿಹಾಸದಲ್ಲಿ ತೆಲಂಗಾಣ ಮತ್ತು ಅದರ ಜನರ ಕೊಡುಗೆ ಯಾವಾಗಲೂ ದೊಡ್ಡದಾಗಿದೆ ಎಂದು ವಿವಿಧ ಯೋಜನೆಗಳ ಶಂಕುಸ್ಥಾಪನೆ ಮಾಡಿದ ನಂತರ ಪ್ರಧಾನಿ ಮೋದಿ ಹೇಳಿದರು.
ಏಕರೂಪ ನಾಗರಿಕ ಸಂಹಿತೆ (UCC) 2024 ರ ಮುಂಬರುವ ಲೋಕಸಭಾ ಚುನಾವಣೆಗಳನ್ನು ಗಮನಿಸಿದರೆ ಇಂದು ಭಾರತೀಯ ರಾಜಕೀಯದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ವಿಷಯಗಳಲ್ಲಿ ಒಂದಾಗಿದೆ, ಅಲ್ಲಿ ಬಿಜೆಪಿಯು ಅದನ್ನು ಪ್ರಮುಖ ಚುನಾವಣಾ ಯೋಜನೆಯನ್ನಾಗಿ ಮಾಡುವ ಸಾಧ್ಯತೆಯಿದೆ.ಇಸ್ಲಾಮಿಕ್ ಸಂಘಟನೆಗಳು ಈಗಾಗಲೇ ಈ ಕ್ರಮವನ್ನು ವಿರೋಧಿಸಿದ್ದರೆ, ಬಿಜೆಪಿಯ ಕೆಲವು ಮಿತ್ರಪಕ್ಷಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಯುಸಿಸಿ ವಿರುದ್ಧ ತಮ್ಮ ಆತಂಕವನ್ನು ವ್ಯಕ್ತಪಡಿಸಿವೆ. ಇದೀಗ, ಹಿರಿಯ ರಾಜಕಾರಣಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಕೂಡ ವಿವಾದಾತ್ಮಕ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದಕ ಚಟುವಟಿಕೆಗಳನ್ನು ಎದುರಿಸುವಲ್ಲಿ ಯಾವುದೇ ದ್ವಂದ್ವ ನೀತಿ ಇರಬಾರದು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ರಾಷ್ಟ್ರಗಳನ್ನು ಟೀಕಿಸಲು ಬಣ ಹಿಂಜರಿಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ಬಗ್ಗೆ ಮುಸುಕಿನ ಗುದ್ದಾಟದಲ್ಲಿ ಇಂದು ಎಸ್ಸಿಒ ರಾಷ್ಟ್ರಗಳ ನಾಯಕರಿಗೆ ಹೇಳಿದ್ದಾರೆ.
Boeing CEO met PM Modi: ಭಾರತದ ವಾಣಿಜ್ಯಾತ್ಮಕ ವಾಯುಯಾನ ಮಾರುಕಟ್ಟೆಯ ತ್ವರಿತ ವಿಸ್ತರಣೆಯಲ್ಲಿ ಮತ್ತು ರಾಷ್ಟ್ರದ ರಕ್ಷಣಾ ಪಡೆಗಳ ಆಧುನೀಕರಣ ಮತ್ತು ಕಾರ್ಯಸಿದ್ಧವಾಗಿರುವಂತೆ ಮಾಡುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವುದು ಬೋಯಿಂಗ್ ಗೆ ಹೆಮ್ಮೆಯಾಗಿದೆ- ಬೋಯಿಂಗ್ ಅಧ್ಯಕ್ಷ ಹಾಗೂ ಸಿಇಓ ಡೇವಿಡ್ ಕಲ್ಹೌನ್
ಪ್ರಧಾನಿ ನರೇಂದ್ರ ಮೋದಿಯನ್ನು ರಷ್ಯಾದ "ದೊಡ್ಡ ಸ್ನೇಹಿತ ಎಂದು ಕರೆದಿರುವ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅವರ 'ಮೇಕ್ ಇನ್ ಇಂಡಿಯಾ' ಅಭಿಯಾನವು ದೇಶದ ಆರ್ಥಿಕತೆಯ ಮೇಲೆ "ನಿಜವಾದ ಪ್ರಭಾವಶಾಲಿ ಪರಿಣಾಮವನ್ನು" ಹೊಂದಿದೆ ಎಂದು ಹೇಳಿದ್ದಾರೆ.
Uniform Civil Code: ಈ ಕುರಿತು ಮಾತನಾಡಿದ್ದ ಕಾಂಗ್ರೆಸ್ ಹಿರಿಯ ಮುಖಂಡಚಿದಂಬರಂ, “ಪ್ರಧಾನಿ ಯುಸಿಸಿ ಒಂದು ಸರಳ ಪ್ರಕ್ರಿಯೆ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ, ಈ ಹಿಂದೆ ಇದ್ದ ಕಾನೂನು ಆಯೋಗದ ವರದಿಯನ್ನು ಪ್ರಧಾನಿಗಳು ಒಮ್ಮೆ ಓದಬೇಕು. ಅದು ಈ ಸಮಯದಲ್ಲಿ ಪ್ರಸ್ತುತವಲ್ಲ ಎಂದು ಹೇಳುತ್ತದೆ ಎಂದಿದ್ದರು. ಬಿಜೆಪಿಯವರ ಮಾತು ಮತ್ತು ನಡೆಗಳಿಂದಾಗಿ ಇಂದು ದೇಶ ಇಬ್ಭಾಗವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಜನರ ಮೇಲೆ ಹೇರಿದ ಯುಸಿಸಿ ವಿಭಜನೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅಜೆಂಡಾ ಆಧಾರಿತ ಬಹುಮತದ ಸರ್ಕಾರ ಅದನ್ನು ಜನರ ಮೇಲೆ ಹೇರಲು ಸಾಧ್ಯವಿಲ್ಲ" ಎಂಬುದು ಅವರ ಅಭಿಪ್ರಾಯವಾಗಿದೆ.
Vande Bharat Express: ಧಾರವಾಡ - ಬೆಂಗಳೂರು ಸೇರಿ ದೇಶದ ಒಟ್ಟು ಐದು ರೈಲುಗಳಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚ್ಯೂವಲ್ ಮೂಲಕ ಚಾಲನೆ ನೀಡಲಿದ್ದಾರೆ. ಭೂಪಾಲದ ರಾಣಿ ಕಮಲಾಪಥಿ ರೈಲ್ವೇ ನಿಲ್ದಾಣದಿಂದ ಪ್ರಧಾನಿ ಮೋದಿ ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ.
Owaisi On PM Modi: ಈ ಕುರಿತು ಮಾತನಾಡಿರುವ ಒವೈಸಿ, ಯುಎಇ, ಸೌದಿ ಅರೇಬಿಯಾ ಹಾಗೂ ಈಜಿಪ್ಟ್ ನಂತಹ ರಾಷ್ಟ್ರಗಳು ಪ್ರಧಾನಿ ಮೋದಿಯನ್ನು ಗೌರವಿಸಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳುತ್ತಾರೆ. ಆದರೆ, ಸೌದಿ ಅರೇಬಿಯಾದ ರಾಷ್ಟ್ರಪತಿಗಳ ಜೊತೆಗೆ ಭಾರತ ಅಥವಾ ಅಮರಾವತಿಯ ಮುಸ್ಲಿಮರ ಯಾವುದೇ ಸಂಬಂಧವಿಲ್ಲ. ಯುಎಇ ರಾಷ್ಟ್ರಪತಿಗಳ ಜೊತೆಗೂ ಕೂಡ ಅವರು ಯಾವುದೇ ಸಂಬಂಧ ಹೊಂದಿಲ್ಲ ಎಂದು ನಾನು ಅವರಿಗೆ ಹೇಳಬಯಸುತ್ತೇನೆ ಎಂದು ಒವೈಸಿ ಹೇಳಿದ್ದಾರೆ.
GE Aerospace-HAL Deal: GE ಏರೋಸ್ಪೇಸ್ ಭಾರತದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಜೊತೆಗೆ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು. ಇದರ ಅಡಿಯಲ್ಲಿ, GE ಏರೋಸ್ಪೇಸ್ ಭಾರತದಲ್ಲಿ ಜಂಟಿಯಾಗಿ F414 ಎಂಜಿನ್ ಅನ್ನು ಉತ್ಪಾದಿಸಲಿದೆ.
PM Modi US Visit: ಈ ಹಿಂದೆ, 2015 ರಲ್ಲಿ ಕ್ಯಾಲಿಫೋರ್ನಿಯಾದ ಟೆಸ್ಲಾ ಮೋಟಾರ್ಸ್ ಕಂಪನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲೋನ್ ಮಸ್ಕ್ ಭೇಟಿಯಾಗಿದ್ದರು ಮತ್ತು ಆಗ ಟೆಸ್ಲಾ ಮುಖ್ಯಸ್ಥರು ಟ್ವಿಟರ್ನ ಮಾಲೀಕರಾಗಿರಲಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರ ೬ ದಿನಗಳ ಅಮೆರಿಕ ಮತ್ತು ಈಜಿಪ್ಟ್ ಪ್ರವಾಸ ಇದೇ ೨೦ ಮಂಗಳವಾರದಿಂದ ಆರಂಭಗೊಳ್ಳಲಿದೆ. ಜೂನ್ ೨೧ರಂದು ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದು, ಬಳಿಕ ವಾಷಿಂಗ್ಟನ್ಗೆ ತೆರಳಲಿದ್ದಾರೆ.
ಯುಎಸ್ ನಿರ್ಮಿತ ಸಶಸ್ತ್ರ MQ-9B ಸೀಗಾರ್ಡಿಯನ್ ಡ್ರೋನ್ಗಳ ಖರೀದಿಗೆ ರಕ್ಷಣಾ ಸಚಿವಾಲಯವು ಅನುಮೋದನೆ ನೀಡಿದೆ ಎಂದು ಮೂಲಗಳು ಇಂದು ರಾಯಿಟರ್ಸ್ಗೆ ತಿಳಿಸಿವೆ.3 ಬಿಲಿಯನ್ ಡಾಲರ್ಗಳಷ್ಟು ಮೌಲ್ಯದ ಜನರಲ್ ಅಟಾಮಿಕ್ಸ್ ತಯಾರಿಸಿದ 31 ಡ್ರೋನ್ಗಳನ್ನು ಭಾರತ ಖರೀದಿಸಲಿದೆ ಎಂದು ಮೂಲವೊಂದು ತಿಳಿಸಿದೆ.
PM Modi: ಈ ಹಿಂದೆ ನೇಮಕಾತಿ ಪ್ರಕ್ರಿಯೆ ನಡೆಸಲು ಸಂಪೂರ್ಣ ಒಂದರಿಂದ ಒಂದೂವರೆ ವರ್ಷ ಬೇಕಾಗುತ್ತಿತ್ತು, ಆದರೆ ಇಂದು ಕೆಲವೇ ತಿಂಗಳಲ್ಲಿ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ಪೂರ್ಣಗೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.