ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ., ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.
ನೇಹಾ ತಂದೆ ನಿರಂಜನ ಹಿರೇಮಠ (Niranjan Hiremath) ಅವರು ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು ಎಂದು ಒತ್ತಾಯಿಸಿದರು- ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Basavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Neha Hiremath Murder: ಮಗಳ ಕಗ್ಗೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ದಕ್ಕಿಸಿ ಕೊಡಿ... ದಯವಿಟ್ಟು ಹಿಂದೂ ವಿದ್ಯಾರ್ಥಿನಿ- ಯುವತಿಯರ ಜೀವಕ್ಕೆ ಗ್ಯಾರೆಂಟಿ ಕೊಡಿಸಿ...ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ...ಇದು ನಿಮ್ಮಿಂದ ಮಾತ್ರವೇ ಸಾಧ್ಯ ಸರ್, ಪ್ಲೀಸ್... ಹಂತಕನಿಗೆ ಕಠಿಣ ಶಿಕ್ಷೆ ಕೊಡಿಸಿ.
ಟೀ ಅಂಗಡಿ ಮಾಲೀಕನ ಮೇಲೆ ಪೊಲೀಸ್ ಸಿಬ್ಬಂದಿ ದೌರ್ಜನ್ಯ. ಅಂಗಡಿ ಮಾಲೀಕ 10 ಗಂಟೆಯಾದ್ರೂ ಶಾಪ್ ಮುಚ್ಚದಕ್ಕೆ ಆಕ್ರೋಶ. ತುಮಕೂರಿನ ಕಾಲ್ ಟ್ಯಾಕ್ಸ್ ಬಳಿಯ ಎನ್.ಎಚ್.ಕೆಫೆಯಲ್ಲಿ ಘಟನೆ. ಶೆಟರ್ ಬೇಗ ಮುಚ್ಚಿಕೊಳ್ಳದಿದ್ದಕ್ಕೆ ಲಾಠಿ ರುಚಿ ತೋರಿಸಿದ ಖಾಕಿ. ಕೆಫೆ ಮಾಲೀಕ ಶಶಿ , ಕೆಲಸಗಾರರಾದ ರಾಜೇಶ್, ಶಫಿ ಮೇಲೆ ಹಲ್ಲೆ . ಕೆಲಸಗಾರರ ಮೇಲೆ ಮನಸೋಇಚ್ಚೆ ಹಲ್ಲೆ ಮಾಡಿದ ಪೊಲೀಸರು.
SSC Recruitment : ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಹಿನ್ನೆಲೆ 4187 'ಸಬ್ ಇನ್ಸ್ ಪೆಕ್ಟರ್' ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಈಚರ್ ವಾಹನದಲ್ಲಿ ಹನೂರು ಭಾಗದಲ್ಲಿ ಮಾರಾಟ ಮಾಡಲು ಗಾಂಜಾ ತರಲಾಗುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಈ ಗಾಂಜಾ ಸಾಗಾಟ ಪತ್ತೆ ಹಚ್ಚಿದ್ದಾರೆ.
Crime News: ಜಯನಗರ ಹಾಗೂ ಕೋಣನಕುಂಟೆ ಠಾಣೆಯ ರೌಡಿ ಶೀಟರ್ ಆಗಿರುವ ಸದ್ದಾಮ್ ಕೊಲೆ ಯತ್ನ, ರಾಬರಿ , ಕಳ್ಳತನ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದ. 2023 ಅಕ್ಟೋಬರ್ ನಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಎ1 ಆರೋಪಿಯಾಗಿ ಅರೆಸ್ಟ್ ಆಗಿ ಜೈಲಿ ಸೇರಿದ್ದ. ನಂತರ ಜಾಮೀನಿನ ಮೇಲೆ ಹೊರಗೆ ಬಂದು ಪೊಲೀಸರ ಸಂಪರ್ಕಕ್ಕೂ ಸಿಗದೆ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
Tumakuru Crime News: ಜಗಳ ಬಿಡಿಸಲು ಮುಂದಾದ ಅತ್ತೆಯ ತಲೆಗೆ ಅಳಿಯ ಸುಹೇಲ್ ದೊಣ್ಣೆಯಿಂದ ಹೊಡೆದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಆಕೆಯನ್ನು ಮಧುಗಿರಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
Fake Marriages: ಮದುವೆ ಹೆಸರಿನಲ್ಲಿ ಅವಿವಾಹಿತರಿಗೆ ಟೋಪಿ ಹಾಕುತ್ತಿದ್ದ 8 ಜನ ಮಹಿಳೆಯರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಘೋಲಿಯ ಕೇಘ್ನಾಂಡ್ ಫಾಟಾ ನಿವಾಸಿ ಜ್ಯೋತಿ ರವೀಂದ್ರ ಪಾಟೀಲ್(35), ವಿದ್ಯಾ ಸತೀಶ್ ಖಂಡೇಲ್ ಸೇರಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು 4 ದಿನಗಳ ಕಾಲ ಕಸ್ಟಡಿಯಲ್ಲಿರಿಸಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.
Lakhs Worth Gold Jewelry Seized: ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗ್ರಾಮೀಣ ಭಾಗದಲ್ಲಿ 2021 ರಿಂದ 2024 ವರೆಗೆ ಕಳ್ಳತನ ಮಾಡಿದ್ದ ಕಳ್ಳತನ ಪ್ರಕರಣ ಭೇಸಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಕಳ್ಳನನ್ನ ಬಂಧಿಸಿದ್ದಾರೆ.
Crime News: ರಕ್ತ ಸಿಕ್ತವಾಗಿ ಹೆಣವಾಗಿ ಬಿದ್ದಿದ್ದವನ ಹೆಸರು ಅರ್ಬಾಜ್ ಪಾಷ.. ಇಲ್ಲಿಗೆ ನಾಲ್ಕು ದಿನಗಳ ಹಿಂದೆ ಈತ ನೋಡಿದವರಿಗೆ ಗುರುತು ಸಿಗದೆ ಹಾಗೆ ರೈಲ್ವೇ ಟ್ರ್ಯಾಕ್ ಬಳಿ ಸತ್ತುಬಿದ್ದಿದ್ದ.. ರಾಮನಗರದ ರೈಲ್ವೇ ನಿಲ್ದಾಣದ ಬಳಿ ಅಪರಿಚಿತ ಶವ ಇರುವ ಬಗ್ಗೆ ರೈಲ್ವೇ ಪೊಲೀಸರಿಗೆ ಮಾಹಿತಿ ಬಂದಿತ್ತು.
Property Returan Parade: ಜಿಲ್ಲಾ ಪ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೊಬೈಲ್, ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೂರು ಟ್ರ್ಯಾಕ್ಟರ್ ಟ್ರೇಲರ್, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 10 ಬೈಕ್ ಗಳು, ಗ್ರಾಮಾಂತರ ಪೊಲೀಸ್ ಠಾಣೆ ಬ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಚಿನ್ನದ ಮಾಂಗಲ್ಯ, ಬೆಳ್ಳೆ ಮೂರ್ತಿಯನ್ನ ಮಾಲಿಕರಿಗೆ ಹಿಂತಿರುಗಸಲಾಯಿತು.
ವಿಜಯನಗರ ಜಿಲ್ಲಾ ಕೇಂದ್ರ ಸ್ಥಾನ ಹೊಸಪೇಟೆಯ ಹೃದಯಭಾಗದಲ್ಲಿರೋ ಲಾಡ್ಜ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ವಿಜಯನಗರ ಪೊಲೀಸರು ಮತ್ತು ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ಬಯಲು ಮಾಡಿದೆ. ಈ ಕುರಿತು ಒಂದು ಸ್ಟೋರಿಯನ್ನು ನೋಡೋಣ ಬನ್ನಿ....!
Crime News: ಉದ್ಯಮಿಯಾಗಿರುವ ಚೇತನ್ ಶಾರವರು 2023ನೇ ಸಾಲಿನಲ್ಲಿ ತಮ್ಮ ಮಗಳಿಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಬಿಬಿಎ ಸೀಟಿಗಾಗಿ ಪ್ರಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಚೇತನ್ ಶಾರ ಮಗಳ ಸ್ನೇಹಿತನೊಬ್ಬನ ಮೂಲಕ ಆರೋಪಿ ಸಚಿನ್ ಪರಿಚಯವಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.