ಈದ್ಗಾ ಮೈದಾನದಲ್ಲಿನ ಗಣಪತಿ ದರ್ಶನ ಪಡೆದು ಮಾತನಾಡಿದ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಮೂರು ದಿನ ಯಾವುದೇ ಗೊಂದಲ ಇಲ್ಲದೆ ಗಣೇಶ ಪ್ರತಿಷ್ಠಾಪನೆಯಾಗಿದೆ. ಹಿಂದೂ ಸಮಾಜ ಶಾಂತಿಯಿಂದ ಆಚರೆಣೆ ಮಾಡಿದ್ದು ಈದ್ಗಾ ಮೈದಾನ ಶುದ್ದಿಯಾಗಿದೆ ಎಂದರು.
ಹುಬ್ಬಳ್ಳಿ ತಾಲೂಕಿನ ವರೂರಿನ ಜೈನಮುನಿಯನ್ನು ಭೇಟಿಯಾದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಗಣುನಂದಿ ಮಹಾರಾಜರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಜೈನ ಮುನಿ ಕಾಮಕುಮಾರ ಮಹಾರಾಜರ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.
ಚುನಾವಣೆ ಕಾರ್ಯ ಮತ್ತು ಕೆಲಸಗಳನ್ನು ಕಾಂಗ್ರೆಸ್-ಜೆಡಿಎಸ್ ದಾರಿ ತಪ್ಪಿಸುತ್ತಿದೆ. ಕಾಂಗ್ರೆಸ್ ನಾಯಕರು ಟೀಕೆ ಮಾಡೋಕೆ ಇರೋದು. ಅಭಿವೃದ್ಧಿಯ ವಿಚಾರವಾಗಿ ಅವರು ಚರ್ಚೆಗೆ ಬರಲಿ ಎಂದು ಕಟೀಲ್ ಕಿಡಿಕಾರಿದ್ದಾರೆ.
ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಆಸ್ಪತ್ರೆಯ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇನ್ನು ಬೆಳಗಾವಿಯ ಆಸ್ಪತ್ರೆಗೆ ಪ್ರಮೋದ್ ಮುತಾಲಿಕ್ ಆಗಮಿಸಿದ್ದಾರೆ. ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಕಾಂಗ್ರೆಸ್ ಓಲೈಕೆಯಿಂದ ಭಯೋತ್ಪಾದಕ ಚಟುವಟಿಕೆ ಬೆಳೆದಿದೆ. ಬೇಕಾದರೆ ಇದನ್ನು ನಾನು ದಾಖಲೆ ಸಮೇತ ಸಾಬೀತು ಪಡಿಸುತ್ತೇನೆ. ದೇಶದ್ರೋಹಿ ಚಟುವಟಿಕೆಗೆ ಮೈಸೂರು ಪ್ರಯೋಗಶಾಲೆಯಾಗಿ ಬದಲಾಗಿದೆ, ಪಿಎಫ್ಐ ನಿಷೇಧಕ್ಕೊಳಗಾದರೂ ಪಿಎಫ್ಐ ಮಾನಸಿಕ ಸ್ಥಿತಿಯ ಸಾವಿರಾರು ಮಂದಿ ಇನ್ನೂ ಇದ್ದಾರೆ ಎಂದು ಶ್ರೀರಾಮಸೇನೆ ರಾಷ್ಟೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡ್ತೇವೆ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ಖಂಡನೀಯ, ಇಸ್ಲಾಂ ನಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಮುಸ್ಲಿಂ ಸಮುದಾಯದವರೇ ಅದನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ದೀಪಾವಳಿ ಹಬ್ಬದಲ್ಲೂ ಧರ್ಮಯುದ್ಧ ತೀವ್ರತೆ ಪಡೆಯೋ ಲಕ್ಷಣ ಇದೆ.. ಹಲಾಲ್ ಬಾಯ್ಕಾಟ್ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ.. ಹಲಾಲ್ ಮುಕ್ತ ದೀಪಾವಳಿ ಆಚರಣೆಗೆ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ.
ಜೇವರ್ಗಿಯಲ್ಲಿ ಸೆ.21 ರಂದು ಸಾರ್ವಜನಿಕ ಭಾಷಣಕ್ಕೆ ಮುತಾಲಿಕ್ಗೆ ನಿಷೇಧ ಹೇರಲಾಗಿದೆ. ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಕಾಳಿಸ್ವಾಮಿ ಮತ್ತು ಹಾರಿಕಾ ಭಾಷಣ ನಿರ್ಬಂಧಿಸಲಾಗಿದೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶಕ್ಕೆ ಸ್ವಾಗತ ಕೋರುತ್ತೇನೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಅಂಜುಮಾನ್ ಇಸ್ಲಾಮ್ ಸಂಸ್ಥೆ ಸಂವಿಧಾನ ವಿರೋಧಿ ಅಂತಾ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.
ದುರ್ಗದ ಬೈಲಿಂದ ದಾಜಿಬಾನ್ ಪೇಟೆವರೆಗೂ ಭಾರೀ ಪ್ರತಿಭಟನೆ . ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭಾಗಿ . ಸಾರ್ವಜನಿಕರಿಂದ ಸಹಿ ಸಂಗ್ರಹಿಸುತ್ತಿರುವ ಹಿಂದೂ ಸಂಘಟನೆ
ಭಜರಂಗದಳ, ಹಿಂದೂ ಜಾಗರಣ ವೇದಿಕೆ , ಶ್ರೀರಾಮ ಸೇನೆ,..
ಚಾಮರಾಜಪೇಟೆ ಈದ್ಗಾ ಮೈದಾನದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಆ ಜಾಗ ಕಂದಾಯ ಇಲಾಖೆಯದ್ದು ಅಂತ ಸರ್ಕಾರ ಡಿಕ್ಲೇರ್ ಮಾಡಿದೆ. ಅದು ಸರ್ಕಾರದ್ದು ಅಂದ ಮೇಲೂ ಸಹ ಅಲ್ಲಿಯ ಶಾಸಕ ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ. ಹಿಂದೂಗಳ ಮೇಲೆಯೇ ಹೆಚ್ಚು ಕೇಸ್ಗಳಾಗಿವೆ. ಅದಕ್ಕಾಗಿಯೇ ರಾಜ್ಯದಲ್ಲಿ ಬಿಜೆಪಿ ಮೇಲೆ ಜನರು ಸಿಟ್ಟಾಗಿದ್ದಾರೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.