ಮೋದಿ ಬರ್ತಾರೆ ಅಂದ್ರೆ ಅವರಿಗೆ ಹೆದರಿಕೆ ಯಾಕೆ? ಮೋದಿ ಅವರು ಹಾಲಿಡೇ ಟ್ರಿಪ್ ಮಾಡುವರಲ್ಲ. ನಮ್ಮ ಕ್ಯಾಪ್ಟನ್ ಅವರು. 24*7 ಕೆಲಸ ಮಾಡುವವರು ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಆರೋಪಕ್ಕೆ CT ರವಿ ಕಿಡಿಕಾರಿದ್ರು.
ಸಿನಿಮಾ ರಂಗದವರ ಜತೆ ಪಿಎಂ ಮೋದಿ ಡಿನ್ನರ್. ಸರ್ಕಾರ ಕಾರ್ಯವೈಖರಿ, ಚಿತ್ರರಂಗದ ಸಮಸ್ಯೆ ಬಗ್ಗೆ ಚರ್ಚೆ. ನಟ ಯಶ್, ರಿಷಬ್ ಶೆಟ್ಟಿ ಸೇರಿದಂತೆ ಇನ್ನಿತರರು ಭಾಗಿ. ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ಮಾಡಿದ ಪಿಎಂ.
ಫೆಬ್ರವರಿ 10 ರಂದು ಗಾಂಧಿ ಅವರಿಗೆ ಪತ್ರ ಬರೆದಿರುವ ಕಾರ್ಯದರ್ಶಿ, ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಲೋಕಸಭೆಗೆ ಫೆಬ್ರವರಿ 15 ರೊಳಗೆ ತಮ್ಮ ವಿರುದ್ಧ ವಿಶೇಷ ಹಕ್ಕುಗಳ ಉಲ್ಲಂಘನೆಯ ನೋಟಿಸ್ಗೆ ಉತ್ತರವನ್ನು ನೀಡುವಂತೆ ಕೇಳಿಕೊಂಡಿದ್ದಾರೆ.ಈ ಮನವಿಯನ್ನು ಸ್ಪೀಕರ್ ಪರಿಗಣಿಸಿದ್ದಾರೆ.
PM To Inaugurate Delhi-Mumbai Expressway: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 12 ರ ಭಾನುವಾರದಂದು ದೆಹಲಿ - ಮುಂಬೈ ಎಕ್ಸ್ಪ್ರೆಸ್ ವೇ 1 ನೇ ಹಂತವನ್ನು ಉದ್ಘಾಟಿಸಲಿದ್ದಾರೆ. ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿ ಅವರು ದೆಹಲಿ - ಮುಂಬೈ ಗ್ರೀನ್ಫೀಲ್ಡ್ ಎಕ್ಸ್ಪ್ರೆಸ್ವೇಯ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ.
ಮೋದಿ ನೀಡಿದ್ದ ಗುರಿಯನ್ನ ಈಗಾಗಲೇ ಸಾಧಿಸಿದ್ದೇವೆ. ಪ್ರಧಾನಿ ಸಹಕಾರದಿಂದ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ ಎಂದು ಇಂಡಿಯಾ ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು.
Riot in Delhi University: ಕ್ಯಾಂಪಸ್ನಲ್ಲಿ ಶಾಂತಿ ಕದಡುವ ಕಾರಣ ವಿದ್ಯಾರ್ಥಿಗಳನ್ನು ಅಲ್ಲಿಂದ ಹೊರಡುವಂತೆ ಸೂಚಿಸಲಾಯಿತು. ಆದರೆ ಕದಲದಿದ್ದಾಗ ಅವರನ್ನು ಶಾಂತಿಯುತವಾಗಿ ವಶಕ್ಕೆ ತೆಗೆದುಕೊಳ್ಳಲಾಯಿತು. ಒಟ್ಟು 24 ಮಂದಿಯನ್ನು ಬಂಧಿಸಲಾಗಿದ್ದು, ಸದ್ಯ ಪರಿಸ್ಥಿತಿ ಸಹಜವಾಗಿದೆ.
ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಜಾಸ್ತಿಯಾಗ್ತಿದೆ.ಒಂದೆಡೆ ರಾಜ್ಯ ನಾಯಕರು ವಾಗ್ಯುದ್ಧಲ್ಲಿ ತೊಡಗಿದ್ರೆ, ಇತ್ತ ದೆಹಲಿ ನಾಯಕರೂ ಕೂಡಾ ಚುನಾವಣೆ ಕಹಳೆ ಉದಿದ್ದಾರೆ.ಇದೇ ತಿಂಗಳು ರಾಜ್ಯಕ್ಕೆ ಮೋದಿ ಎರಡು ಸಾರಿ ಬಂದು ಹೋಗಿದ್ದಾರೆ. ಅದರಲ್ಲೂ ಹುಬ್ಬಳ್ಳಿಯಲ್ಲಿ ಬೃಹತ್ ಶೋ ಮಾಡಿದ್ದ ಮೋದಿ ಚುನಾಚಣೆ ಕಹಳೆ ಮೊಳಗಿಸಿದ್ರು, ಇದೀಗ ಮೋದಿ ಬೆನ್ನಲ್ಲೆ ಬಿಜೆಪಿ ಚುನಾವಣಾ ಚಾಣಕ್ಯ ಹುಬ್ಬಳ್ಳಿ ಎಂಟ್ರಿ ಆಗ್ತೀದಾರೆ. ಅಮಿತ್ ಶಾ ಕೂಡಾ ಭರ್ಜರಿ ರೋಡ್ ಶೋ ಮಾಡಲಿದ್ದಾರೆ. ಒಂದೇ ತಿಂಗಳಲ್ಲಿ ಬಿಜೆಪಿಯ ಇಬ್ಬರು ಮಾಸ್ ಲೀಡರ್ ಗಳು ಹುಬ್ಬಳ್ಳಿಗೆ ಬರುತ್ತಿರೋದು ಬಿಜೆಪಿಯಲ್ಲಿ ರಣೋತ್ಸಾಹ ಹೆಚ್ಚಿಸಿದೆ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 28ರಂದು ಬೆಳಿಗ್ಗೆ 10.30ಕ್ಕೆ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಧಾರವಾಡಕ್ಕೆ ತೆರಳಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
BBC Documentary on PM Narendra Modi: ದೆಹಲಿಯ ಜೆಎನ್ಯು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಎಡ ಸಂಘಟನೆಗಳು ಈ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಬೇಕೆಂದು ಉದ್ದೇಶಿಸಿತ್ತು. ಆದರೆ ಯೂನಿಯನ್ ಕಚೇರಿಯಲ್ಲಿ ವಿದ್ಯುತ್ ಹಾಗೂ ಇಂಟರ್ ನೆಂಟ್ ಸಂಪರ್ಕವನ್ನು ವಿವಿ ಆಡಳಿತ ಕಡಿತಗೊಳಿಸಿದ್ದು ಡಾಕ್ಯುಮೆಂಟರಿ ಪ್ರದರ್ಶಿಸಲು ಸಾಧ್ಯವಾಗಲಿಲ್ಲ ಎಂದು JNUSU ಅನ್ನು ಆಕ್ರಮಿಸಿಕೊಂಡಿರುವ ಕಮ್ಯುನಿಸ್ಟ್ ಸಂಘಟನೆಗಳು ಆರೋಪಿಸಿವೆ.
ಕರ್ನಾಟಕದ ಜನತೆಯ ನಡುವೆ ಇರಲು ಉತ್ಸುಕನಾಗಿದ್ದೇನೆ. ಸುಮಾರು 10 ಸಾವಿರ ಕೋಟಿ ರೂಪಾಯಿಗಳ ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲು ರಾಜ್ಯಕ್ಕೆ ಬರುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವಿಟ್ ಮಾಡಿದ್ದಾರೆ.
Modi message to BJP leaders : ಪ್ರಧಾನಿ ನರೇಂದ್ರ ಮೋದಿ ಕೂಡ ಬಾಲಿವುಡ್ ಚಿತ್ರಗಳ ಬಹಿಷ್ಕಾರದ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಕೊನೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ನಾಯಕರಿಗೆ ಹಲವು ಮಹತ್ವದ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.
ರಾಜ್ಯದಲ್ಲಿ ಶತಾಯಗತಾಯವಾಗಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ನಾಯಕರು ಚುನಾವಣೆ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ಈಗಿಂದಲೇ ಪ್ರಧಾನಿ ಮೋದಿ ಅವ್ರನ್ನ ರಾಜ್ಯದ ನಾನಾ ಭಾಗಗಳಿಗೆ ಕರೆ ತಂದು ಬಿಜೆಪಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅಹಮದಾಬಾದ್ U.N.ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು.
PM Modi mother Heeraben Modi passed away: ಹೀರಾಬೆನ್ ಅವರು ಪ್ರಧಾನಿ ಮೋದಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರ ನಗರದ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದರು. ಪ್ರಧಾನಿಯವರು ಸಮಯ ಮಾಡಿಕೊಂಡು ಆಗಾಗ್ಗೆ ತಾಯಿಯನ್ನು ಭೇಟಿಯಾಗುತ್ತಿದ್ದರು. ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಗುರುವಾರ ಹೇಳಿಕೆ ನೀಡಿತ್ತು.
PM Modi mother Heeraben Modi passed away : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನರಾಗಿದ್ದಾರೆ. ಬುಧವಾರ ಅನಾರೋಗ್ಯದ ಕಾರಣ ಅವರನ್ನು ಬುಧವಾರ ಬೆಳಗ್ಗೆ ಅಹಮದಾಬಾದ್ನ 'ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್'ಗೆ ದಾಖಲಿಸಲಾಗಿತ್ತು.
ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಜನವರಿ 12 ರಿಂದ ಜನವರಿ 16 ರವರೆಗೆ ಧಾರವಾಡ- ಹುಬ್ಬಳ್ಳಿ ಮಹಾನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಯುಕ್ತವಾಗಿ ರಾಷ್ಟ್ರೀಯ ಯುವಜನೋತ್ಸವ ಆಯೋಜಸಲಿದ್ದು, ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಯುವಜನೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.
ಈ ಭೇಟಿ ನಂತರ ಟ್ವೀಟ್ ಮಾಡಿರುವ ಅವರು “ಇಂದು ನಡೆದ ಅದ್ಭುತ ಸಭೆಗೆ ಧನ್ಯವಾದಗಳು ಪ್ರಧಾನಿ ಮೋದಿ ಅವರೇ ನಿಮ್ಮ ನಿರ್ದೇಶನದಲ್ಲಿ ತಂತ್ರಜ್ಞಾನವು ಎಷ್ಟು ವೇಗವಾಗಿ ಪ್ರಗತಿ ಹೊಂದುತ್ತಿದೆ ಎಂಬುದನ್ನು ಗಮನಿಸುವುದು ನಿಜಕ್ಕೂ ಉತ್ತೇಜನಕಾರಿಯಾಗಿದೆ.
ಈ ಹಿಂದೆ ಚರ್ಚೆಯಲ್ಲಿದ್ದ ರಾಮ ಜನ್ಮ ಭೂಮಿ ಅಯೋಧ್ಯೆಯಂತೆ ಸದ್ಯ ಚರ್ಚೆಯಲ್ಲಿರೋ ಧಾರ್ಮಿಕ ಸ್ಥಳ ಅಂದ್ರೆ ಅಂಜನಾದ್ರಿ ಬೆಟ್ಟ. ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಂತೆ, ರಾಮನ ಬಂಟ ಹನುಮಂತನ ಜನ್ಮ ಭೂಮಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಮಾಡುತ್ತೇವೆ ಅಂತಾ ಈಗಾಗಲೇ ರಾಜ್ಯ ಸರ್ಕಾರ ಘೋಷಿಸಿದೆ. ಅಂಜನಾದ್ರಿ ಅಭಿವೃದ್ಧಿಯ ಜಪದಲ್ಲೇ ಈ ಬಾರಿಯ 2023ರ ವಿಧಾನಸಭೆ ಚುನಾವಣೆ ನಡೆಸಲು ಬಿಜೆಪಿ ಮುಂದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.