ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಲು ಮೋದಿ ರಣತಂತ್ರ ಹೆಣೆದಿದ್ದಾರೆ. ಗುಜರಾತ್ ಬಳಿಕ ಕರುನಾಡಿನತ್ತ ಮೋದಿ ಚಿತ್ತ ಹರಿಸಿದ್ದಾರೆ. ದೆಹಲಿಯಲ್ಲಿ ಇಂದಿನಿಂದ ಪದಾಧಿಕಾರಿಗಳ ಸಭೆ ನಡೆಯಲಿದೆ.
ಗುಜರಾತ್ನಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. 93 ವಿಧಾನಸಭಾ ಸ್ಥಾನಗಳಿಗೆ 833 ಅಭ್ಯರ್ಥಿಗಳ ಸ್ಪರ್ಧೆ ಮಾಡಿದ್ದಾರೆ. ಸ್ವಕ್ಷೇತದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ವೋಟಿಂಗ್ ಮಾಡಿದ್ದಾರೆ.
Gujarat Assembly Election: ಅವಿ (14) ಮತ್ತು ಜೈ (11) ಅವರ ಪೋಷಕರು ದೀರ್ಘಕಾಲದ ಅನಾರೋಗ್ಯದ ಕಾರಣದಿಂದ ಆರು ವರ್ಷಗಳ ಹಿಂದೆ ನಿಧನರಾದರು. ಅಂದಿನಿಂದ ಇಬ್ಬರೂ ಕೂಲಿ ಮಾಡುತ್ತಾ ಒಬ್ಬರನ್ನೊಬ್ಬರು ನೋಡಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ಕಷ್ಟಗಳ ನಡುವೆಯೂ ಸಹೋದರರಿಬ್ಬರೂ ಶಿಕ್ಷಣ ಬಿಡಲಿಲ್ಲ, ಅವಿ 9ನೇ ತರಗತಿಯಲ್ಲಿ ಓದುತ್ತಿದ್ದರೆ, ಜೈ 6ನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ.
PM Modi to Distribute 71000 Appointment Letters: ನಿರುದ್ಯೋಗದ ಭಾಗವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯನ್ನು ಉಳಿಸಿಕೊಳ್ಳುವ ಪ್ರಯತ್ನದ ಭಾಗವಾಗಿ ಈ ರೋಜಗಾರ್ ಮೇಳವನ್ನು ನಡೆಸಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ದಾಖಲೆಗಳನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
Megastar Chiranjeevi : ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) 53ನೇ ಆವೃತ್ತಿಯಲ್ಲಿ ʻಇಂಡಿಯನ್ ಫಿಲ್ಮ್ ಪರ್ಸನಾಲಿಟಿ ಆಫ್ ದಿ ಇಯರ್ʼ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಸೋಮವಾರ, ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಚಿರಂಜೀವಿ ಅವರನ್ನು ಅಭಿನಂದಿಸಿದರು.
ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾ ಅವರು ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಭಾರತ ತಂಡದ ನಾಯಕ ಎಂಎಸ್ ಧೋನಿಗೆ ಹೇಗೆ ಪರಿಚಯಿಸಿದರು ಎಂಬುದನ್ನು ಈಗ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಸ್ಮರಿಸಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ. ಇನ್ನು ಈ ವಿಚಾರವಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿಯವರು ಹಿಂದೂ ಧರ್ಮದ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ ಬಗ್ಗೆ, ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ. "ಅವರ ಹೇಳಿಕೆ ನನಗೆ ಆಶ್ಚರ್ಯ ತಂದಿಲ್ಲ, ಅವರು ತಮ್ಮ ಪಕ್ಷದ ನಿಜ ಧೋರಣೆಯನ್ನು, ಧ್ವನಿಸಿದ್ದಾರೆ". - ಗೃಹ ಸಚಿವ ಆರಗ ಜ್ಞಾನೇಂದ್ರ
ಇನ್ನು ಗುಜರಾತ್ ಸರ್ಕಾರ ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಹೇಳಿದ್ದಾರೆ.
"ಭಾರತದ ಡಿಜಿಟಲ್ ರೂಪಾಂತರ ಮತ್ತು ಸಂಪರ್ಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಮೂಲಕ, ಗೌರವಾನ್ವಿತ ಪ್ರಧಾನಿ ನರೆಂದ್ರ ಮೋದಿ ಅವರು ಭಾರತದಲ್ಲಿ 5G ಸೇವೆಗಳನ್ನು ಹೊರತರಲಿದ್ದಾರೆ" ಎಂದು ಅದು ಹೇಳಿದೆ.
ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತಿಮ ಸಂಸ್ಕಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಈ ತಿಂಗಳ ಕೊನೆಯಲ್ಲಿ ಟೋಕಿಯೊಗೆ ತೆರಳಲಿದ್ದಾರೆ. ಈ ಭೇಟಿಯು ಸೆಪ್ಟೆಂಬರ್ 27, 2022 ರಂದು ನಡೆಯಲಿದೆ. ಮೋದಿ ಅವರು ಜಪಾನ್ನ ಪ್ರಸ್ತುತ ಪ್ರಧಾನಿ ಫುಮಿಯೊ ಕಿಶಿಡಾ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಕೆನಡಾದ ಜಸ್ಟಿನ್ ಟ್ರುಡೊ, ಆಸ್ಟ್ರೇಲಿಯಾದ ಆಂಥೋನಿ ಅಲ್ಬನೀಸ್, ಯುನೈಟೆಡ್ ಸ್ಟೇಟ್ಸ್ನ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಸಿಂಗಾಪುರದ ಪ್ರಧಾನಿ ಲೀ ಸಿಯೆನ್-ಲೂಂಗ್ ಅವರಂತಹ ಇತರ ಪ್ರಮುಖ ವಿಶ್ವ ನಾಯಕರು ಭಾಗವಹಿಸಲಿದ್ದಾರೆ.
ಜುಲೈ 8, 2022 ರಂದು ನಾರಾ ನಗರದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಅಬೆ ಅವರನ್ನು ಬಂದೂಕುಧಾರಿಯಿಂದ ಹತ್ಯೆ ಮಾಡಲಾಯಿತು.
ಐದು ದಶಕಗಳ ಕಾಲದ ತಮ್ಮ ರಾಜಕೀಯ ಜೀವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಅವರ ನೀತಿಗಳು ಆಗಾಗ್ಗ ಟೀಕಿಸಲ್ಪಟ್ಟಿವೆ. ಆದರೆ ಒಂದು ಕಡೆ ಇತರ ದೇಶಗಳೊಂದಿಗೆ ಭಾರತದ ಸಂಬಂಧಗಳನ್ನು ಬಲಪಡಿಸಲು ಮತ್ತು ಮತ್ತೊಂದೆಡೆ ದೇಶವಾಸಿಗಳ ಜೀವನವನ್ನು ಸುಧಾರಿಸಲು ಇವರ ನೀತಿಗಳು ನಿರಂತರ ಶ್ರಮಿಸುತ್ತಿದೆ ಎಂದರೆ ತಪ್ಪಾಗಲಾರದು. ಇಂದು ಪ್ರಧಾನಿ ನರೇಂದ್ರ ಮೋದಿ ಅವರ 72 ನೇ ವರ್ಷದ ಸಂಭ್ರಮ. ದೇಶದ ಮಹಾನ್ ನಾಯಕ ಮಾತ್ರವಲ್ಲದೆ, ವಿಶ್ವವೇ ಭಾರತವನ್ನು ಕೊಂಡಾಡುವಂತೆ ಮಾಡಿರುವ ಪ್ರಧಾನಿ ಬಗ್ಗೆ ನಿಮಗರಿಯದ ಅನೇಕ ಅಸಾಮಾನ್ಯ ಸಂಗತಿಗಳಿವೆ. ಈ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜಂಟಿ ಹೇಳಿಕೆ ನೀಡಿದ್ದಾರೆ. ಇಂದು ಬಾಂಗ್ಲಾದೇಶ ಭಾರತದ ಅತಿದೊಡ್ಡ ಅಭಿವೃದ್ಧಿ ಪಾಲುದಾರ. ಜನರಿಂದ ಜನರ ಸಹಕಾರ ನಿರಂತರವಾಗಿ ಸುಧಾರಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಇದರ ಪರಿಣಾಮವಾಗಿ ನೇಪಾಳದ ವಿವಿಧ ಕೇಂದ್ರಗಳಲ್ಲಿ ಆಗಸ್ಟ್ 26 ರಂದು ಪ್ರಾರಂಭವಾಗಿ ಸೆಪ್ಟೆಂಬರ್ 29 ರಂದು ಕೊನೆಗೊಳ್ಳಬೇಕಿದ್ದ ಒಂದು ತಿಂಗಳ ನೇಮಕಾತಿ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿಗೆ ತಡೆಹಿಡಿಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಿದ ಪ್ರಧಾನಿ ಮೋದಿ, ದೇಶದ ಸಂಕಲ್ಪವನ್ನು ಪ್ರಸ್ತಾಪಿಸಿದರು. “ನಾವು ಸ್ವಾತಂತ್ರ್ಯದ ಅಮೃತ ವರ್ಷವನ್ನು. ಮುಂದಿನ 25 ವರ್ಷಗಳಲ್ಲಿ, ಭಾರತದ ಸ್ವಾತಂತ್ರ್ಯದ 100 ವರ್ಷಗಳು ಪೂರ್ಣಗೊಳ್ಳುತ್ತದೆ. ಈ ಸಂದರ್ಭದಲ್ಲಿ ಭಾರತಕ್ಕೆ 5 ನಿರ್ಣಯಗಳು ಅವಶ್ಯಕ” ಎಂದು ಪ್ರಧಾನಿ ಹೇಳಿದರು,
ಬಸ್ ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ. ಇಲ್ಲಿನ ಖಾಲ್ಘಾಟ್ ಸೇತುವೆಯಿಂದ ಉರುಳಿದ ಬಸ್ ನದಿಗೆ ಬಿದ್ದಿದೆ ಎಂದು ಮಧ್ಯ ಪ್ರದೇಶದ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.