Balakot Air Strike : 26 ಫೆಬ್ರವರಿ 2019 ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಾರತೀಯ ಯುದ್ಧ ವಿಮಾನಗಳು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕಿಸ್ತಾನದ ಗಡಿಯನ್ನು ಪ್ರವೇಶಿಸುವ ಮೂಲಕ ಭಯೋತ್ಪಾದಕರ ಮೇಲೆ ಗುಂಡಿನ ಸುರಿಮಳೆಗೈದಿದ್ದರು. ಪಾಕ್ ನೆಲದಲ್ಲೇ ಉಗ್ರರನ್ನು ಸದೆಬಡೆದಿದ್ದರು.
2019ರ ಪ್ರೇಮಿಗಳ ದಿನದಂದು ಜೈಷ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಗೆ ಸೇರಿದ ಓರ್ವ ವ್ಯಕ್ತಿ ವಾಹನವೊಂದನ್ನು ಚಲಾಯಿಸುತ್ತಾ ಬಂದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧರನ್ನು ಕರೆದೊಯ್ಯುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು, ಸ್ಫೋಟಿಸಿದನು. ಇದರ ಪರಿಣಾಮವಾಗಿ 40ಕ್ಕೂ ಹೆಚ್ಚು ಸಿಆರ್ಪಿಎಫ್ ಯೋಧರು ಅಸುನೀಗಿದರು.
Pulwama Attack 4 Year Anniversary: ಪುಲ್ವಾಮ ದಾಳಿ ನಡೆದು ಇಂದಿಗೆ ನಾಲ್ಕು ವರ್ಷ ಪೂರ್ಣಗೊಂಡಿದೆ. 2019 ರಲ್ಲಿ ನಡೆದ ಈ ದಾಳಿಯಲ್ಲಿ ಭಾರತಾಂಬೆಯ 40 ವೀರ ಪುತ್ರರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದರು. ಆತ್ಮಹತ್ಯಾ ಬಾಂಬರ್ ಸ್ಫೋಟಕಗಳನ್ನು ತುಂಬಿದ ವಾಹನ ಬೆಂಗಾವಲು ಪಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿತ್ತು.
ಪುಲ್ವಾಮಾ ದಾಳಿಯ (Pulwama attack) ಬಗ್ಗೆ ಪಾಕಿಸ್ತಾನ ಸಂಸದ ಪಾಕ್ ಸಂಸತ್ತಿನಲ್ಲಿ ನೀಡಿದ ಹೇಳಿಕೆಯ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
2019ರ ಪುಲ್ವಾಮಾ ದಾಳಿಯನ್ನು (Pulwama Attack) ಮಾಡಿದ್ದು ತಾನೇ ಎಂದು ಪಾಕಿಸ್ತಾನವು ತನ್ನ ಸಂಸತ್ತಿನಲ್ಲೇ ಖುಲ್ಲಂಖುಲ್ಲಾ ಒಪ್ಪಿಕೊಂಡಿದೆ. ಅಷ್ಟೇ ಅಲ್ಲ, ಪುಲ್ವಾಮಾ ದಾಳಿಯು ಇಮ್ರಾನ್ ಖಾನ್ ಸರ್ಕಾರದ ಮಹತ್ವದ ಸಾಧನೆ ಎಂದು ಬಣ್ಣಿಸಿದೆ.
ಪುಲ್ವಾಮಾ ದಾಳಿಯ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 5000 ಪುಟಗಳ ಚಾರ್ಜ್ಶೀಟ್ ಸಿದ್ಧಪಡಿಸಿದೆ. ಚಾರ್ಜ್ಶೀಟ್ನಲ್ಲಿ ಒಟ್ಟು 20 ಭಯೋತ್ಪಾದಕರ ಹೆಸರುಗಳಿವೆ. ಜೈಶ್ ದರೋಡೆಕೋರ ಮಸೂದ್ ಅಜರ್ ಮತ್ತು ರೌಫ್ ಅಸ್ಗರ್ ಮಸೂದ್ ಅವರ ಹೆಸರನ್ನು ಚಾರ್ಜ್ಶೀಟ್ನಲ್ಲಿ ಸೇರಿಸಲಾಗಿದೆ.
ಪುಲ್ವಾಮಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ (ಮಾರ್ಚ್ 6, 2020) ಇನ್ನೂ ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ಐಇಡಿ ತಯಾರಿಸಲು ರಾಸಾಯನಿಕಗಳನ್ನು ಸಂಗ್ರಹಿಸಲು ಅಮೆಜಾನ್ ಆನ್ಲೈನ್ ಶಾಪಿಂಗ್ ಖಾತೆಯನ್ನು ಬಳಸಲಾಗಿದೆ ಎಂದು ಹೇಳಿದೆ.
ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮತ್ತೊಮ್ಮೆ ಬಿಸಿ ಮುಟ್ಟಿಸಿದೆ. ಹೌದು, ಈ ವರ್ಷದ ಡಿಸೆಂಬರ್ ನಿಂದ ಭಾರತದಿಂದ ಪಾಕಿಸ್ತಾನಕ್ಕೆ ಹೋಗುವ ನದಿಗಳ ನೀರನ್ನು ತಡೆಹಿಡಿಯಲಾಗುವುದು ಎಂದು ಭಾರತ ಹೇಳಿದೆ.
ಇಂದು ಶುಕ್ರವಾರವಾದ್ದರಿಂದ, ನಿಮ್ಮ ಮನಸ್ಸಿನಲ್ಲಿ ಹೊಸ ಚಿತ್ರವನ್ನು ನೋಡುವ ಯೋಜನೆ ಇರಬಹುದು. ನಿಮ್ಮಲ್ಲಿ ಹೆಚ್ಚಿನವರು ಇದನ್ನು ಚೆನ್ನಾಗಿ ನೆನಪಿಸಿಕೊಳ್ಳುತ್ತಾರೆ, ಕಳೆದ ಒಂದು ವರ್ಷದಲ್ಲಿ ಯಾವ ಚಲನಚಿತ್ರ ತಾರೆಯರು ಬಂದಿದ್ದಾರೆ ಎಂಬುದನ್ನು ನೆನೆಪಿಸಿಕೊಳ್ಳುತ್ತಾರೆ. ಆದರೆ ಪುಲ್ವಾಮಾ ದಾಳಿಯಲ್ಲಿ ಮೃತಪಟ್ಟ ಯಾವುದೇ ಜವಾನ್ ಹೆಸರು ನಿಮ್ಮಲ್ಲಿ ಯಾರಿಗಾದರೂ ನೆನಪಿದೆಯೇ?
2019 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಆತ್ಮಾಹುತಿ ದಾಳಿಯ ಸಂದರ್ಭದಲ್ಲಿ ಸಿಆರ್ಪಿಎಫ್ ಜವಾನರು ಹುತಾತ್ಮರಾದರು. ಈ ದುರಂತ ಘಟನೆಯ ಮೊದಲ ವಾರ್ಷಿಕೋತ್ಸವದಂದು ಪುಲ್ವಾಮಾ ದಾಳಿಯ ಹುತಾತ್ಮರನ್ನು ರಾಷ್ಟ್ರವು ನೆನಪಿಸಿಕೊಳ್ಳುತ್ತಿದ್ದರೂ, ಅವರ ಕುಟುಂಬಗಳಿಗೆ ನೀಡಿದ ಭರವಸೆಗಳು ಇನ್ನೂ ಈಡೇರಿಲ್ಲ.
ಪಾಕಿಸ್ತಾನವು ಜೈಶ್-ಎ-ಮೊಹಮ್ಮದ್ ಅವರ ಬಾಲಕೋಟ್ನಲ್ಲಿ ಪ್ರಮುಖ ಪಿತೂರಿ ನಡೆಸಿದ್ದು, ಭಾರತಕ್ಕೆ ನುಸುಳಲು ಮತ್ತು ದಾಳಿ ನಡೆಸಲು ಒಟ್ಟು 27 ಭಯೋತ್ಪಾದಕರಿಗೆ ತರಬೇತಿ ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಮುದಾಸೀರ್ ಅಹ್ಮದ್ ಖಾನ್ ನ ಆಪ್ತ ಸಹಾಯಕ ಸಜ್ಜಾದ್ ಅಹ್ಮದ್ ಖಾನ್ ಸೇರಿದಂತೆ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ಚಾರ್ಜ್ಶೀಟ್ ಸಲ್ಲಿಸಿದೆ.
ಪುಲ್ವಾಮಾ ಭಯೋತ್ಪಾದಕ ದಾಳಿಯ ಜವಾಬ್ದಾರಿ ಹೊತ್ತಿದ್ದ ಜೈಷ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕ ಸಂಘಟನೆಯ ಮುಖಂಡ ಮೌಲಾನಾ ಮಸೂದ್ ಅಜರ್'ನನ್ನು ಪಾಕಿಸ್ತಾನ ಎಂದಿಗೂ ಜೈಲಿನಲ್ಲಿ ಇಟ್ಟುಕೊಂಡಿಲ್ಲ.
ಭಯೋತ್ಪಾದಕರು ಭಾನುವಾರ ಮತ್ತೊಂದು ಪುಲ್ವಾಮಾ-ಮಾದರಿಯ ದಾಳಿಯನ್ನು ಯೋಜಿಸುತ್ತಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಹೇಳಿವೆ. ಈ ದಾಳಿ ನಡೆಸಲು ಅವರು ಮೋಟಾರು ಬೈಕನ್ನು ಬಳಸಬಹುದೆಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.