ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇವರ ನೆರವಿಗೆ ಎಲ್ಲ ಕೈಗಾರಿಕೋದ್ದಿಮೆದಾರರು ಉದಾರವಾಗಿ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ.
ಶಿವಮೊಗ್ಗ ನಗರದಲ್ಲಿ 32 ಕಿ.ಮೀ. ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಈಗಾಗಲೇ ಶೇ.30ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನುಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು.
ಅತಿವೃಷ್ಟಿಯಿಂದ ಹಾನಿಗೀಡಾದ ಹಾಗೂ ಸಂಪೂರ್ಣ ಬಿದ್ದು ಹೋಗಿರುವ ಮನೆಗಳ ಸಂಖ್ಯೆ, ರಸ್ತೆ, ಸೇತುವೆ, ಕಟ್ಟಡಗಳ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾಗಿರುವ ಹಾನಿಯ ಬಗ್ಗೆ ಸಮರ್ಪಕವಾದ ಸಮೀಕ್ಷೆ ನಡೆಸಬೇಕು. ಕೃಷಿ ಹಾಗೂ ತೋಟಗಾರಿಕೆ ಪ್ರದೇಶ ಹಾಗೂ ಬೆಳೆಗಳಿಗೆ ಹಾನಿಯ ಕುರಿತು ನೆರೆ ನೀರು ಖಾಲಿಯಾದ ಬಳಿಕ ನಿಖರವಾಗಿ ಅಂದಾಜಿಸಬೇಕು- ಅಧಿಕಾರಿಗಳಿಗೆ ಸಿಎಂ ಸೂಚನೆ
ರಾಜ್ಯದಲ್ಲಿ ಇದು ದೊಡ್ಡಮಟ್ಟದ ಮಳೆಯ ಅನಾಹುತ. ಹಿಂದೆ ಕೆಲವೇ ಜಿಲ್ಲೆಗಳಲ್ಲಿ ಇಂಥ ಅನಾಹುತವಾಗಿತ್ತು. ಆದರೆ ಈ ಬಾರಿಯ ಪರಿಸ್ಥಿತಿ ಎಲ್ಲರ ಕೈ ಮೀರಿ ಹೋಗಿದೆ. ಬೆಳಗಾವಿ ಜನರ ಬದುಕು ಶೋಚನೀಯವಾಗಿದೆ.
ರಾಜ್ಯದಲ್ಲಿ ನೆರೆ ಪರಿಸ್ಥಿತಿ ವಿಪರೀತವಾಗಿದೆ. ಈ ಪರಿಸ್ಥಿತಿ ನಿಭಾಯಿಸಲು ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸರಕಾರವೇ ಇಲ್ಲ. ಪ್ರಧಾನಿ ಅಥವಾ ಕೇಂದ್ರ ಗೃಹ ಸಚಿವರು ಕೂಡಲೇ ರಾಜ್ಯದಲ್ಲಿ ನೆರೆ ಪರಿಸ್ಥಿತಿಯನ್ನೂ ವೈಮಾನಿಕ ಸಮೀಕ್ಷೆ ನಡೆಸಿ, 10 ಸಾವಿರ ಕೋಟಿ ರೂ. ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಜೊತೆಗೆ ಕೇಂದ್ರದಿಂದ ತಂಡ ಆಗಮಿಸಿ ಸೂಕ್ತ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಬಾದಾಮಿ ಸಮೀಪದ ಪಟ್ಟದಕಲ್ಲು ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿರುವ 20ಕ್ಕೂ ಹೆಚ್ಚು ಗ್ರಾಮಸ್ಥರು ರಕ್ಷಣೆಗಾಗಿ ದೇವಾಲಯ ಏರಿ ಕುಳಿತಿದ್ದಾರೆ. ಹೆಲಿಕಾಪ್ಟರ್ ಮೂಲಕ ಅವರನ್ನು ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿಯವರಿಗೆ ತಿಳಿಸಿರುವ ಸಿದ್ದರಾಮಯ್ಯ.
ಉತ್ತರ ಕನ್ನಡದಲ್ಲಿ 5 ಅಣೆಕಟ್ಟುಗಳ ಗೇಟ್ ತೆಗೆದು ನೀರನ್ನು ಬಿಟ್ಟಿರುವ ಕಾರಣ ಹೆಚ್ಚಿನ ಪ್ರವಾಹ ಪರಿಸ್ಥಿತಿ ಉಂಟಾಗಿದೆಯೆಂದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಕೊಡಗು, ಉತ್ತರ ಕನ್ನಡ , ದಕ್ಷಿಣ ಕನ್ನಡ ಮತ್ತು ಉಡುಪಿಯ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶತಮಾನದಲ್ಲೇ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಬಾಗಲಕೋಟೆಗೆ 10 ಕೋಟಿ ರೂ. ಹಾಗೂ ವಿಜಯಪುರಕ್ಕೆ 5 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಮಾಜಿ ಸಚಿವ ಗೋವಿಂದ್ ಕಾರಜೋಳ ತಿಳಿಸಿದ್ದಾರೆ.
ಕಟ್ಟಡ ಕುಸಿತದ ನಂತರ ತಕ್ಷಣ ಎಚ್ಚೆತ್ತ ರೈಲ್ವೆ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಕ್ಷಣಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೀಘ್ರ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ- ಜೆಡಿಎಸ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.