ರಜನಿಕಾಂತ್ ಸೋಮವಾರ ತಮ್ಮ ರಜಿನಿ ಮಕ್ಕಳ್ ಮಂಡ್ರಂ ವಿಸರ್ಜಿಸಲಾಗಿದೆ ಎಂದು ಘೋಷಿಸಿದ್ದಾರೆ. ಜೊತೆಗೆ ಭವಿಷ್ಯದಲ್ಲಿ ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದು ಸೂಪರ್ಸ್ಟಾರ್ ಸ್ಪಷ್ಟಪಡಿಸಿದ್ದಾರೆ.
ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರನ್ನು ಕನಿಷ್ಠ ರಾಜಕೀಯ ಆಟಗಾರರು ಎಂದು ಬಣ್ಣಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಮಣಿಶಂಕರ್ ಅಯ್ಯರ್ ಅವರು ಬಹಳ ಜನಪ್ರಿಯ ಚಲನಚಿತ್ರ ತಾರೆಯರಾಗಿ ಉಳಿದಿದ್ದಾರೆ, ಆದರೆ ರಾಜಕೀಯ ದೃಷ್ಟಿಯಿಂದ ತಮ್ಮ ಅಭಿಪ್ರಾಯಕ್ಕೆ ಸಾರ್ವಜನಿಕ ಅಭಿಪ್ರಾಯವನ್ನು ಸೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಸುದೀರ್ಘವಾದ ಪತ್ರ ಬರೆದು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ರಜನಿಕಾಂತ್, ಅನಾರೋಗ್ಯದ ಕಾರಣಕ್ಕೆ ಸಕ್ರೀಯ ರಾಜಕಾರಣ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಜೊತೆಗೆ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ನಿರೀಕ್ಷೆಗಳನ್ನು ಹುಸಿ ಗೊಳಿಸುತ್ತಿರುವ ಕಾರಣಕ್ಕೆ ಕ್ಷಮೆ ಕೇಳುತ್ತಿದ್ದೇನೆ ಎಂದು ಕೂಡ ಹೇಳಿದ್ದಾರೆ.
ರಜನಿಕಾಂತ್ ಅವರಿಗೆ ಕೋವಿಡ್ ನೆಗೆಟಿವ್ ಬಂದಿದ್ದರೂ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೂ ವೈದ್ಯರು 'ಒಂದು ವಾರ ವಿಶ್ರಾಂತಿ ಪಡೆಯುವಂತೆ ಸೂಚಿಸಿರುವುದರಿಂದ' ಹೊಸ ಪಕ್ಷದ ಅಧಿಕೃತ ಘೋಷಣೆ ಆಗುತ್ತೋ ಇಲ್ಲವೋ ಎಂಬ ಅನುಮಾನ ಶುರುವಾಗಿದೆ.
ನಟ ರಜನಿಕಾಂತ್ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೀರಾ? ಎಂದು ಕೇಳಿದ ಪ್ರಶ್ನೆಗೆ ಮಕ್ಕಲ್ ನೀಧಿ ಮಯಂ ಮುಖ್ಯಸ್ಥ ಕಮಲ್ ಹಾಸನ್ ಮಂಗಳವಾರ ಸೌಹಾರ್ದಯುತ ಪರಿಹಾರವನ್ನು ಸೂಚಿಸಿದ್ದಾರೆ.
ರಜನಿಕಾಂತ್ ಅವರ ರಾಜಕೀಯ ಪಕ್ಷವು ಮುಂದಿನ ಎಲ್ಲಾ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಜ್ಜಾಗಿದೆ ಎಂದು ಅವರ ರಾಜಕೀಯ ಸಲಹೆಗಾರ ತಮಿಲಾರುವಿ ಮಣಿಯನ್ ಶನಿವಾರ ಖಚಿತಪಡಿಸಿದ್ದಾರೆ.ರಾಜಕೀಯ ಪಕ್ಷವು ಆಧ್ಯಾತ್ಮಿಕ ರಾಜಕೀಯವನ್ನು ಮಾಡುತ್ತದೆ ಮತ್ತು ಯಾರನ್ನೂ ದೂಷಿಸುವುದಿಲ್ಲ ಎಂದು ಅವರು ಭರವಸೆ ನೀಡಿದರು.
ಬುಧವಾರದಂದು ನಟ ರಜನಿಕಾಂತ್ ಅವರು ಬರೆದ ಆರೋಗ್ಯದ ಕಾರಣದಿಂದಾಗಿ ಅವರು ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಹೇಳಿರುವ ಸಂದೇಶವು ವೈರಲ್ ಆಗಿರುವುದು ಈಗ ಸಾಕಷ್ಟು ಚರ್ಚೆಗೆ ಈಡು ಮಾಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನತಾ ಕರ್ಫ್ಯೂ ಗೆ ಕರೆ ಬೆಂಬಲಿಸಿದ ನಟ-ರಾಜಕಾರಣಿ ರಜನಿಕಾಂತ್ ಅವರ ಪೋಸ್ಟ್ ಅನ್ನು ಟ್ವಿಟ್ಟರ್ ಅಳಿಸಿಹಾಕಿದೆ. ತಪ್ಪು ಮಾಹಿತಿ ಒಳಗೊಂಡಿದೆ ಎನ್ನುವ ಹಿನ್ನಲೆಯಲ್ಲಿ ರಜನಿಕಾಂತ್ ಅವರ ಟ್ವೀಟ್ ನ್ನು ಅಳಿಸಿಹಾಕಿದೆ ಎನ್ನಲಾಗಿದೆ.
ಸೂಪರ್ಸ್ಟಾರ್ ರಜನಿಕಾಂತ್ ಅವರು ಮುಖ್ಯಮಂತ್ರಿಯಾಗಲು ಎಂದಿಗೂ ಆಶಿಸಲಿಲ್ಲ, ಆದರೆ ತಾವು ಬದಲಾವಣೆಯನ್ನು ಮಾತ್ರ ಬಯಸಿರುವುದಾಗಿ ಎಂದು ಹೇಳಿದ್ದಾರೆ. ಈಗ ಅವರ ಹೇಳಿಕೆಗಳು ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಂದಿವೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಗೆ ಭೇಟಿ ನೀಡಿದ ಸಮಯದಲ್ಲಿ ಹಿಂಸಾಚಾರ ನಡೆದಿರುವುದು ಗುಪ್ತಚರ ಸಂಸ್ಥೆಗಳು ಮತ್ತು ಗೃಹ ಸಚಿವಾಲಯದ ವೈಫಲ್ಯ ಎಂದು ನಟ ರಜನಿಕಾಂತ್ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಒಂದು ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಭಾರತೀಯ ಮುಸ್ಲಿಂಮರಿಗೆ ಯಾವುದೇ ರೀತಿಯ ತೊಂದರೆ ಉಂಟು ಮಾಡಿದರೆ, ಅವರನ್ನು ಬೆಂಬಲಕ್ಕೆ ನಿಲ್ಲುವ ಮೊದಲ ವ್ಯಕ್ತಿ ನಾನಾಗಲಿದ್ದೇನೆ ಎಂದು ದಕ್ಷಿಣ ಚಿತ್ರರಂಗದ ಖ್ಯಾತ ಸೂಪರ್ ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ. ಅಷ್ಟೇ ಅಲ್ಲ NPR ಕೂಡ ದೇಶದ ಹಿತದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ ಎಂದೂ ಕೂಡ ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.