ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ. ಅಧಿವೇಶನಕ್ಕೆ ಗೈರಾಗಿ ಬೆಂಗಳೂರಿಗೆ ಹಾರಿದ ಸಚಿವಾಕಾಂಕ್ಷಿಗಳು. ಪೂರ್ವ ಮಾತುಕತೆ ಮಾಡಿಯೇ ಅಧಿವೇಶನಕ್ಕೆ ಅತೃಪ್ತರ ಗೈರು. ನಿನ್ನೆ ಒಂದೇ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಆಗಮನ. ಮಾಜಿ ಸಚಿವರಾದ ರಮೇಶ್ ಜಾರಕಿಹೋಳಿ, ಈಶ್ವರಪ್ಪ ಪ್ರಯಾಣ. ಸಚಿವ ಸ್ಥಾನ ಸಿಗದೇ ತೀವ್ರ ಅಸಮಾಧಾನಗೊಂಡಿರುವ ನಾಯಕರು.
ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ಜಿದ್ದಿಗೆ ಬಿದ್ದಿದ್ದು ಫುಲ್ ಆ್ಯಕ್ಟೀವ್ ಆಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಿದ್ದಾರೆ.
ಚಳಿಗಾಲ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಆಗೋ ಸಾಧ್ಯತೆ ಇದೆ. ಖಾಲಿ ಇರುವ 5 ಸ್ಥಾನಗಳ ಬದಲಿಗೆ 2 ಸ್ಥಾನ ತುಂಬಲು ಚಿಂತನೆ ನಡೆಸಲಾಗಿದೆ. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆ ಆಗೋ ಸಾಧ್ಯತೆ ಇದೆ ಎನ್ನಲಾಗ್ತಿದೆ.
ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ,ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಸಹೋದರ ರಮೇಶ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಾಲೆಳೆದಿದ್ದಾರೆ.
ರಮೇಶ್ ಜಾರಕಿಹೊಳಿ - ಲಕ್ಷ್ಮಣ್ ಸವದಿ ಬೆಂಬಲಿಗರ ನಡುವೆ ವಾಕ್ಸಮರ ಶುರವಾಗಿದೆ. ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಎಂದು ಸವದಿ ಬೆಂಬಲಿಗರು ಹೇಳಿದ್ರೆ, ಇದಕ್ಕೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕೌಂಟರ್ ಕೊಟ್ಟಿದ್ದಾರೆ.
'ನನಗೂ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖೆ ಮಾಡಲಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಕಳೆದ 120 ದಿನಗಳಿಂದ ದೇಶದ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಅವರ ಮೇಲೆ ಮೊಕದ್ದಮೆಗಳನ್ನು ದಾಖಲಿಸುವ ಮೂಲಕ ದುಷ್ಟತನ ಪ್ರದರ್ಶಿಸುತ್ತಿದೆ. ಬೆಂಗಳೂರು ಮುತ್ತಿಗೆ ಹಾಕೋಣ ಎನ್ನುವುದರಲ್ಲಿ ಕೇಸ್ ದಾಖಲಿಸುವಂತ ಯಾವ ಪ್ರಚೋದನಕಾರಿ ಅಂಶವಿದೆ? ಎಂದು ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ಯಾವ ಕೇಸ್ ಹಾಕುವುದಾದರೂ ಹಾಕಲಿ, ಎದುರಿಸಲು ನಾನು ಸಿದ್ದ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ವಕೀಲರನ್ನು ಭೇಟಿಯಾಗಿ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಕೂಡಾ ಅವರು ಹೇಳಿದ್ದಾರೆ.
ನನ್ನ ಪರವಾಗಿ ನಿಂತು ಮಾನಸಿಕವಾಗಿ ಧೈರ್ಯ ತುಂಬಿದ ಮುಖ್ಯಮಂತ್ರಿ ಯಡಿಯೂರಪ್ಪ , ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ ಕುಮಾರಸ್ವಾಮಿ ಅವರಿಗೆ ನನ್ನ ಹೃದಯಪೂರ್ವಕ ವಂದನೆಗಳು. ಈ ಹೊತ್ತಿನಲ್ಲಿ ನನ್ನ ಜೊತೆ ನಿಂತ ಎಲ್ಲರಿಗೂ ವಂದನೆಗಳು. ಆ ಸೀಡಿ ನೂರಕ್ಕೆ ನೂರು ನಕಲಿ. ನಾನು ಅಪರಾಧಿಯಲ್ಲ. ಅಪರಾಧ ಎಸಗಿಲ್ಲ'' ಎಂದು ರಮೇಶ್ ಜಾರಕಿ ಹೊಳಿ ಹೇಳಿದ್ದಾರೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸಲ್ಲಿ ಕ್ಷಿಪ್ರಕ್ರಾಂತಿ ನೇತೃತ್ವ ವಹಿಸಿ ಕರ್ನಾಟಕದಲ್ಲಿ ಮತ್ತೆ ಯಡಿಯೂರಪ್ಪ ಸರ್ಕಾರ ಪ್ರತಿಷ್ಟಾಪಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿಗೆ ಈಗ `ಸರಸ ಸೀಡಿ'ಯ ಸಂಕಷ್ಟ ಎದುರಾಗಿದೆ. https://zeenews.india.com/kannada/karnataka/four-princliple-for-new-b-s-yediyurappa-government-b-s-yediyurappa-17688
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ರಾಜ್ಯ ಸಚಿವ ಸಂಪುಟ ಪುನರ್ರಚನೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ (JP Nadda) ಅವರೊಂದಿಗೆ ಚರ್ಚಿಸಲು ನವೆಂಬರ್ 18ರಂದು ದೆಹಲಿಗೆ ಆಗಮಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.