Karnataka Assembly Election 2023: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ದಿಸಲಾಗದ ವ್ಯಕ್ತಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ. ತಾಕತ್ತಿದ್ದರೆ ಚುನಾವಣೆಗೆ ಸ್ಪರ್ಧಿಸಿ ಜನಬೆಂಬಲ ಪಡೆದು ಬರಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.
Karnataka Assembly Election 2023: ಮೇ 10ರಂದು ಯಾರ ಡ್ಯಾಂ ಲೇವಲ್ ಎಷ್ಟಿದೆ ಅಂತಾ ಗೊತ್ತಾಗುತ್ತೆ. ಪ್ರತಿದಿನ ಡ್ಯಾಂ ಲೇವಲ್ ಗೇಜ್ ಮಾಡ್ತಿರ್ತೇವೆ. ಅದೇ ರೀತಿ ಮೇ 10ರಂದು ಲಿಂಗಾಯತ ಮತಗಳು ಹರಿದುಬಂದು ಬಿಜೆಪಿ ತುಂಬಿ ತುಳಕುತ್ತದೆ ಎಂದು ಸಿಸಿ ಪಾಟೀಲ್ ಹೇಳಿದ್ದಾರೆ.
Karnataka Assembly Election 2023: 2006ರ ಚಾಮುಂಡೇಶ್ವರಿ ಚುನಾವಣೆಯಲ್ಲಿ ಸಿದ್ದರಾಮಯ್ಯಗೋಸ್ಕರ ಒದೆ ತಿಂದಿದ್ದೇನೆ. ಬರಿಮೈಯಲ್ಲಿ ದೇವಾಲಪುರದಿಂದ ಮೈಸೂರಿಗೆ ಹೋಗಿದ್ದೇನೆ. ನನ್ನ ಕಾರಿನ ಗ್ಲಾಸ್ ಒಡೆದಿದ್ದರು ಪ್ಯಾಂಟ್ ಹರಿದು ಹಾಕಿದ್ದರು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
Karnataka Assembly Election 2023: ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಮೈಸೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಆಗಮಿಸಿದ ಸಿದ್ದರಾಮಯ್ಯನವರು ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
Karnataka Assembly Election 2023: ಸರ್ಕಾರಿ ಹುದ್ದೆಗಳ ಮಾರಾಟದ ಅಕ್ರಮ, 40% ಕಮಿಷನ್ ಲೂಟಿ, ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ, ಶಾಸಕರನ್ನು ಖರೀದಿಸುವ ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಮತ್ತು ಭರವಸೆಗಳನ್ನು ಈಡೇರಿಸದ ವಚನ ಭ್ರಷ್ಟತೆ. ಇವೆಲ್ಲವೂ ಬಿಜೆಪಿ ಸರ್ಕಾರದ ಹೈಲೈಟ್ಸ್ಗಳು ಎಂದು ಕಾಂಗ್ರೆಸ್ ಕುಟುಕಿದೆ.
Karnataka Assembly Election 2023: ಈ ಚುನಾವಣೆಯಲ್ಲಿ ಬಿಜೆಪಿ 125ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಪಡೆದು ಮತ್ತೊಮ್ಮೆ ಕನ್ನಡನಾಡಿನ ಸೇವೆ ಮಾಡಲು ಬಿಜೆಪಿಗೆ ಜನರು ಆಶೀರ್ವಾದ ಮಾಡುತ್ತಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Karnataka Assembly Election 2023: ಬಿಜೆಪಿಯ ಈ ಎಲ್ಲಾ ಬೆಳವಣಿಗೆಗೆ ಬಿ.ಎಲ್.ಸಂತೋಷ್ ನೇರ ಕಾರಣ. ಜಗದೀಶ್ ಶೆಟ್ಟರ್ ಅವರು ಬಿ.ಎಲ್.ಸಂತೋಷ ಮೇಲೆ ಮಾಡಿರುವ ಆರೋಪಗಳು ಸರಿ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Karnataka Assembly Election 2023: ನಮ್ಮದು ಕಾರ್ಯಕರ್ತರ ಆಧಾರಿತ ಪಕ್ಷ. ಶೆಟ್ಟರ್ ಇಷ್ಟು ದಿನ ಸಜ್ಜನರ ಸಂಘದಲ್ಲಿದ್ದರು, ಈಗ ದುರ್ಜನರ ಸಂಘ ಮಾಡಿದ್ದಾರೆ. ಬಸವಣ್ಣ ದುರ್ಜನರ ಸಂಘ ಮಾಡಬೇಡಿ ಎಂದು ಹೇಳಿದ್ದರು. ಇದನ್ನು ಎಲ್ಲರೂ ನೆನಪಿಟ್ಟುಕೊಳ್ಳಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Karnataka Election 2023: ಹಿಂದುಳಿದವರ ಕೈಗೆ ನಾಯಕತ್ವ ಕೊಡುತ್ತೇವೆ, ದಲಿತರ ಕೈಗೆ ನಾಯಕತ್ವ ಕೊಡುತ್ತೇವೆ, ಶೋಷಿತರ ಕೈಗೆ ಅಧಿಕಾರ ಕೊಡುತ್ತೇವೆ ಎಂದು ಬಿಜೆಪಿ ಹೇಳುವುದಿಲ್ಲವೇಕೆ? ಇದೇನಾ ಸಾಮಾಜಿಕ ನ್ಯಾಯ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Karnataka Assembly Election 2023: ತುಂಬಾ ಹಾಸ್ಯದಿಂದ ಕೂಡಿರುವ ಈ ಹಾಡಿನಲ್ಲಿ ಬಿಜೆಪಿ ಸರ್ಕಾರದ ಹಲವು ಹಗರಣಗಳ ಬಗ್ಗೆ ಉಲ್ಲೇಖಿಸಲಾಗಿದೆ. ೪೦% ಕಮಿಷನ್ ಸರ್ಕಾರ, ಪಿಎಸ್ಐ ಹಗರಣ, ಮೊಟ್ಟೆ ಹಗರಣ, ಬಿಡಿಎ ಹಗರಣ, ಕೋವಿಡ್ ಹಗರಣ ಮತ್ತು ಇತರ ಹಗರಣಗಳ ಬಗ್ಗೆ ಹಾಡಿನಲ್ಲಿ ಪ್ರಸ್ತಾಪಿಸಲಾಗಿದೆ.
Karnataka Assembly Election 2023: ಲಕ್ಷ್ಮಣ ಸವದಿ ಪಕ್ಷದಲ್ಲಿ ಹಿರಿಯ ನಾಯಕರಾಗಿದ್ದವರು. ಅವರು ಸೋತಾಗಲೂ ಎಂಎಲ್ಸಿ ಮಾಡಿ ಡಿಸಿಎಂ ಮಾಡಲಾಗಿತ್ತು. ಅವರು ಡಿಸಿಎಂ ಆಗಲು ನಮ್ಮ ತ್ಯಾಗ ಕಾರಣ. ನಾವು 17 ಮಂದಿ ರಾಜೀನಾಮೆ ಕೊಟ್ಟಿದ್ದಕ್ಕೆ ಬಿಜೆಪಿ ಆಡಳಿತಕ್ಕೆ ಬಂತು ಅಂತಾ ಬಿಸಿ ಪಾಟೀಲ್ ಹೇಳಿದ್ದಾರೆ.
Karnataka Assembly Election 2023: ಹಲವು ಪ್ರಕರಣಗಳಿರುವ ಸೈಲೆಂಟ್ ಸುನೀಲನ ರೌಡಿ ಶೀಟನ್ನು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ನೋಡೇ ಇಲ್ಲವಂತೆ. ಹಾಗಾದ್ರೆ ಕಮಿಷನರ್ ಆಗಿದ್ದಾಗ ಇವರು ಮಾಡಿದ ಕೆಲಸವಾದರೂ ಏನು?! ಎಂದು ಕಾಂಗ್ರೆಸ್ ಟೀಕಿಸಿದೆ.
Karnataka Assembly Election 2023: ಲಕ್ಷ್ಮಣ ಸವದಿ ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದು, 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಡಿಕೆಶಿ ತಿಳಿಸಿದರು.
ಈಗಾಗಲೇ ಸ್ಕ್ರೀನಿಂಗ್ ಕಮಿಟಿ ಮೀಟಿಂಗ್ ಮುಗಿದಿದೆ. ಟಿಕೆಟ್ ಸಂಬಂಧ ಸ್ಕ್ರೀನಿಂಗ್ ಕಮಿಟಿ, ಸಿಇಸಿ ಸಭೆ ಆಗಿದೆ. ಮಧ್ಯಾಹ್ನ ಮತ್ತೊಂದು ಸಭೆ ನಡೆಸಿ ಚರ್ಚೆ ಮಾಡುತ್ತೇವೆ ಎಂದು ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ರು.
ಬಿಜೆಪಿ ಸರ್ಕಾರಿ ನೌಕರಿಯನ್ನು ಮಾರಾಟ ಮಾಡ್ತಿದೆ. ಗುತ್ತಿಗೆ ಕಾಮಗಾರಿಗಳನ್ನು ಮಾರಾಟ ಮಾಡುತ್ತಾರೆ. ಟ್ರಾನ್ಸಫರ್ ಪೋಸ್ಟಿಂಗ್ ಕೂಡ ಮಾರಾಟ ಮಾಡಲಾಗ್ತಿದೆ ಎಂದು ಬಿಜೆಪಿ ವಿರುದ್ಧ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.