ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ಸದ್ಯದ ಪರಿಸ್ಥಿತಿಯಲ್ಲಿ ಅಂಗೀಕರಿಸಲು ಸಾಧ್ಯವಿಲ್ಲ. ರಾಜೀನಾಮೆ ಅಂಗೀಕಾರಕ್ಕೆ ಅದರದ್ದೇ ಆದ ನಿಯಮಗಳಿವೆ. ಅದರಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ವಿಧಾನಸೌಧಕ್ಕೆ ಆಗಮಿಸುವ ವೇಳೆಗೆ ಸಮಯ 6 ಗಂಟೆ ಮೀರಿದ್ದ ಹಿನ್ನೆಲೆಯಲ್ಲಿ ಬಸ್ ಇಳಿಯುತ್ತಿದ್ದಂತೆ ಶಾಸಕ ಬೈರತಿ ಬಸವರಾಜು ಸೇರಿದಂತೆ ಇತರ ಶಾಸಕರು ಸಮಯ ಮೀರಿದ್ದರಿಂದ ಓಡೋಡಿ ಸ್ಪೀಕರ್ ಕಚೇರಿ ತಲುಪಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ, ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಮುಂಬೈ ಭೇಟಿಗೆ ಮುಂಚಿತವಾಗಿ ಭದ್ರತಾ ರಕ್ಷಣೆ ಕೋರಿ ಮುಂಬೈನ ಹೋಟೆಲ್ವೊಂದರಲ್ಲಿ ವಾಸ್ತವ್ಯ ಹೂಡಿರುವ ಹತ್ತು ಭಿನ್ನಮತೀಯ ಕಾಂಗ್ರೆಸ್-ಜೆಡಿಎಸ್ ಶಾಸಕರು ಮುಂಬೈ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಶಾಸಕರ ರಾಜೀನಾಮೆಗೆ ಸಂಬಂಧಪಟ್ಟಂತೆ ರಾಜ್ಯಪಾಲರೂ ನನಗೆ ಪತ್ರ ಬರೆದಿದ್ದು, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಉತ್ತರಿಸಿದ್ದೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ಡಿ ತಿಳಿಸಿದ್ದಾರೆ.
ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವ ಮಾತೇ ಇಲ್ಲ. ರಾಜಕಾರಣದಲ್ಲೇ ಇರಬೇಕು ಎಂಬ ಅನಿವಾರ್ಯತೆ ನಮಗಿಲ್ಲ. ಮನೆಯಲ್ಲಿ ಬೇಕಾದರೂ ಇರುತ್ತೇವೆ ಆದರೆ ರಾಜೀನಾಮೆ ವಾಪಸ್ ಪಡೆಯಲ್ಲ ಎಂದು ಅತೃಪ್ತ ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ.
ಬೆಳಿಗ್ಗೆಯಿಂದ ರಾಜೀನಾಮೆ ಸಲ್ಲಿಸಲು ವಿಧಾನಸಭೆಯ ಸ್ಪೀಕರ್ ಕಚೇರಿಯಲ್ಲಿ ಕಾದು ಕುಳಿತಿದ್ದ ಅತೃಪ್ತ ಶಾಸಕರು, ಸ್ಪೀಕರ್ ಕಚೇರಿಯಲ್ಲಿ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿ, ಸ್ವಿಕೃತಿ ಪಡೆದು ರಾಜಭವನದತ್ತ ತೆರಳಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.