ಒಕ್ಕಲಿಗ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒಕ್ಕಲಿಗ ಹಾಗೂ ಲಿಂಗಾಯತರಿಗೆ ಪ್ರತ್ಯೇಕ ಕ್ಯಾಟಗರಿ 2 ಪ್ರತ್ಯೇಕ ಸಮುದಾಯಕ್ಕೆ ಪ್ರತ್ಯೇಕ ಕ್ಯಾಟಗರಿ ಹೊಸದಾಗಿ 2C ಮತ್ತು 2D ಕ್ಯಾಟಗರಿ ರಚನೆ 3Aನಲ್ಲಿದ ಒಕ್ಕಲಿಗರಿಗೆ 2C ಕ್ಯಾಟಗರಿಗೆ ಸೇರ್ಪಡೆ 3Bಬಿನಲ್ಲಿದ್ದ ಲಿಂಗಾಯತರಿಗೆ 2D ಮೀಸಲಾತಿ ಪಂಚಮಸಾಲಿ ಸಮುದಾಯ 2Cಗೆ ಸೇರ್ಪಡೆ ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿಕೆ 2A, 2B ಕ್ಯಾಟಗರಿಯ ಮೀಸಲಾತಿ ಬದಲಾಗಲ್ಲ ಹೊಸ ಕ್ಯಾಟಗರಿ ರಚಿಸಿ ಪ್ರಮಾಣ ನಿಗದಿ ಮಾಡಿದ ಸರ್ಕಾರ
ಪಂಚಮಸಾಲಿಗೆ ಎಷ್ಟು ಮೀಸಲಾತಿ ನೀಡಬೇಕು ಎಂದು ಸ್ಪಷ್ಟತೆ ಇಲ್ಲ. ಮಾಧುಸ್ವಾಮಿ ಅವ್ರು ಅಧಿಕೃತವಾಗಿ ಎಷ್ಟು ಮೀಸಲಾತಿ ಅಂತ ಹೇಳಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ನಿರ್ಣಯ ಪ್ರತಿ ಸಿಗುವವರೆಗೆ ಯಾವುದೇ ಪ್ರತಿಕ್ರಿಯೆ ಕೊಡೋದು ಸೂಕ್ತ ಅಲ್ಲ ಎಂದಿದ್ದಾರೆ.
'ಕೇವಲ ಶೇ.3ರಷ್ಟು ಮೀಸಲಾತಿ ಪಡೆಯಲು ಒಕ್ಕಲಿಗರು ಭಿಕ್ಷುಕರಲ್ಲ. ಜನಸಂಖ್ಯೆ ಅನುಗುಣವಾಗಿ ಈ ಸಮುದಾಯಕ್ಕೆ ಶೇ.12 ರಷ್ಟು ಮೀಸಲಾತಿ ಸಿಗಬೇಕು. ಬೇರೆ ಸಮುದಾಯದವರು ತಮ್ಮ ಹಕ್ಕು ಕೇಳುವುದರಲ್ಲಿ ತಪ್ಪಿಲ್ಲ. ನಾವು ಅದನ್ನು ವಿರೋಧಿಸುವುದಿಲ್ಲ. ಒಕ್ಕಲಿಗರಿಗೆ ಸಿಗಬೇಕಾದ ಹಕ್ಕನ್ನು ಆಗ್ರಹಿಸುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಈಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಅವರ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ. ಈ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ. ಹೀಗಾಗಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಬಿಜೆಪಿಯಿಂದ ಅಸಾಧ್ಯ. ಇದು ಕೇವಲ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ನಾವು ಅದನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ಮೀಸಲಾತಿಗಾಗಿ ಹೋರಾಟದ ಕಹಳೆ ಮೊಳಗಿಸಲಿರುವ ಒಕ್ಕಲಿಗರ ಸಂಘ. ಬೆಂಗಳೂರಿನಲ್ಲಿ ರಾಜ್ಯ ಒಕ್ಕಲಿಗ ಸಂಘದಿಂದ ಸಮಾಲೋಚನಾ ಸಭೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪ್ರಮುಖ ನಾಯಕರು ಭಾಗವಹಿಸುವ ಸಾಧ್ಯತೆ.
ಮೀಸಲಾತಿಗಾಗಿ ಡಿಸೆಂಬರ್ 12ಕ್ಕೆ ವಿಧಾನಸೌಧ ಮುತ್ತಿಗೆಗೆ ನಿರ್ಧಾರ ಮಾಡಲಾಗಿತ್ತು. ಆದ್ರೆ ಈ ನಿರ್ಧಾರ ಕೈಬಿಡಲಾಗಿದೆ. ಅಧಿವೇಶನದೊಳಗೆ ಮೀಸಲಾತಿ ನೀಡದೇ ಇದ್ರೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕೋದಾಗಿ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಕರ್ನಾಟಕ ವಿಶ್ವ ವಿದ್ಯಾಲಯದ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ.. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಮೀಸಲಾತಿ ನೀಡಬೇಕು ಅಂತ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ ಈ ವಿಶ್ವವಿದ್ಯಾಲಯದಲ್ಲಿ ಮಾತ್ರ ಸರ್ಕಾರದ ಆದೇಶ ಪತ್ರವೇ ಸಿಕ್ಕಿಲ್ಲವಂತೆ.
ರಾಜ್ಯದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಶುರು ಮಾಡಿದೆ. ಈ ಯಾತ್ರೆಗೆ ಟಕ್ಕರ್ ಕೂಡಲು ಬಿಜೆಪಿ ಜನ ಸಂಕಲ್ಪ ಯಾತ್ರೆ ಶುರು ಮಾಡಿದ್ದು, ರಾಯಚೂರಿನಿಂದಲೇ ಪಾಂಚಜನ್ಯ ಮೊಳಗಿಸಿದೆ. ಮಾಜಿ ಸಿಎಂ ಮತ್ತು ಹಾಲಿ ಸಿಎಂ ಜೊತೆಯಾಗಿ ಸರ್ಕಾರದ ಸಾಧನೆ ತಿಳಿಸಲು ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿದ್ದು, ರಾಯಚೂರಿನಿಂದಲೇ ಪಾಂಚಜನ್ಯ ಮೊಳಗಿಸಿದ್ದಾರೆ.
ಅಹಿಂದ ಚಳವಳಿ ಆರಂಭಿಸಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರು ಹಿಂದುಳಿದ ಸಮಾಜಗಳಿಗೆ ನ್ಯಾಯವನ್ನೇ ಕೊಡಲಿಲ್ಲ. ಆಗ ಅಹಿಂದಕ್ಕೆ ನ್ಯಾಯ ಕೊಡದ ಅವರು ಈಗ ನಾವು ಕೊಟ್ಟಾಗ ಅಸಮಾಧಾನ ತೋರಿಸುವುದು ಯಾವ ನ್ಯಾಯ? - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್
ರಾಜ್ಯದಲ್ಲಿ SC, ST ಮೀಸಲಾತಿ ಕ್ರೆಡಿಟ್ ವಾರ್ ಜೋರಾಗಿದೆ.. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದನ್ನೇ ಪ್ಲಸ್ ಮಾಡಿಕೊಳ್ಳೋಕೆ ಮೂರು ಪಕ್ಷಗಳಲ್ಲೂ ಸಮಬಲದ ಟಾಕ್ ವಾರ್ ನಡೆದಿದೆ.. ಈ ಮಧ್ಯೆ ಸ್ವಪಕ್ಷೀಯ ಬಿಜೆಪಿ ನಾಯಕರಲ್ಲೇ ಕ್ರೆಡಿಟ್ಗಾಗಿ ಪೈಪೋಟಿ ಶುರುವಾಗಿದೆ.
ರಾಜ್ಯದಲ್ಲಿ ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಕ್ರೆಡಿಟ್ ವಾರ್ ಜೋರಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದನ್ನೇ ಪ್ಲಸ್ ಮಾಡಿಕೊಳ್ಳೋಕೆ ಮೂರು ಪಕ್ಷಗಳಲ್ಲೂ ಸಮಬಲದ ಟಾಕ್ ವಾರ್ ನಡೆದಿದೆ. ನಾವು ತಂದಿದ್ದು, ನಾವು ಮಾಡಿದ್ದು, ನಮ್ಮ ಪ್ರಯತ್ನ ಎಂದು ಮೂರು ಪಕ್ಷಗಳಲ್ಲೂ ಕ್ರೆಡಿಟ್ಗಾಗಿ ಜಿದ್ದಾಜಿದ್ದಿ ಶುರುವಾಗಿದೆ. ಇದ್ರ ನಡುವೆ ಸ್ವಪಕ್ಷೀಯ ಬಿಜೆಪಿ ನಾಯಕರಲ್ಲೇ ಕ್ರೆಡಿಟ್ಗಾಗಿ ಪೈಪೋಟಿ ನಡೆದಿದೆ.
ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ.ಐವತ್ತನ್ನು ಮೀರುವಂತಿಲ್ಲ. ಈ ಮಿತಿಯನ್ನು ಮೀರದೆ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಒಟ್ಟು ಶೇ.ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ? ಇದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು, ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.